ಚಿಕ್ಕಮಗಳೂರು: ಮಲೆನಾಡಿನಲ್ಲಿ ಮಳೆ ಅಬ್ಬರ; ಮಳೆ ನಿಲ್ಲಿಸುವಂತೆ ಮಳೆ ದೇವರಿಗೆ ವಿಶೇಷ ಪೂಜೆ
Team Udayavani, Jul 12, 2022, 11:43 AM IST
ಚಿಕ್ಕಮಗಳೂರು: ಕಾಫಿನಾಡ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮಳೆ ನಿಲ್ಲಿಸುವಂತೆ ಮಳೆ ದೇವರಿಗೆ ಸ್ಥಳಿಯರು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಕಿಗ್ಗಾದ ಋಷ್ಯಶೃಂಗೇಶ್ವರ ಮಳೆದೇವರಿಗೆ ನೆಮ್ಮಾರ್ ಸೀಮೆಯವರಿಂದ ಹಾಗೂ ಸ್ಥಳೀಯರಿಂದ ವಿಶೇಷ ಪೂಜೆ ಸಲ್ಲಿಸಲಾಯಿತು.
ಕಿಗ್ಗಾದ ಋಷ್ಯಶೃಂಗೇಶ್ವರ ಮಳೆ ದೇವರು ಎಂದೇ ಖ್ಯಾತರಾದ ದೇವರು. ಮಳೆ ಬೇಕು ಅಂದಾಗ ಸುರಿಸೋ, ಬೇಡವೆಂದಾಗ ನಿಲ್ಲಿಸೋ ಮಳೆದೇವರು ಎಂಬುದು ಸ್ಥಳೀಯರ ನಂಬಿಕೆ.
ಶೃಂಗೇರಿಯಲ್ಲಿ ಈ ವರ್ಷ ವಾಡಿಕೆಗಿಂತ ಡಬಲ್ ಮಳೆ ಸುರಿದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಾಫಿ, ಮೆಣಸು, ಅಡಿಕೆಗೆ ಕೊಳೆ ರೋಗದ ಭೀತಿ ಆವರಿಸಿದೆ. ಅತಿವೃಷ್ಟಿ ನಿವಾರಿಸೋ ಎಂದು ಸ್ಥಳಿಯರು ಋಷ್ಯಶೃಂಗನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಅತಿವೃಷ್ಟಿ-ಅನಾವೃಷ್ಟಿ ವೇಳೆ ಈ ದೇವನಿಗೆ ಸರ್ಕಾರವೇ ಪೂಜೆ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ