ಗೋವಾ: ಶಾಸಕರು ಪಕ್ಷಾಂತರಗೊಳ್ಳುವ ಭೀತಿ; ಶಾಸಕಾಂಗ ಸಭೆ ನಡೆಸಿದ ಕಾಂಗ್ರೆಸ್
Team Udayavani, Jul 12, 2022, 1:16 PM IST
ಪಣಜಿ: ದೇಶದ ಕೆಲ ಪಕ್ಷಗಳು ಕಾಂಗ್ರೆಸ್ ಪಕ್ಷವನ್ನು ಕೊನೆಗಾಣಿಸಲು ನಿರಂತರವಾಗಿ ಪ್ರಯತ್ನಿಸುತ್ತಿವೆ ಎಂದು ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಹೇಳಿದರು.
ಗೋವಾದಲ್ಲಿ ಕಾಂಗ್ರೆಸ್ ಶಾಸಕರು ಪಕ್ಷಾಂತರಗೊಳ್ಳುವ ಭೀತಿಯ ಹಿನ್ನೆಲೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ಮುಕುಲ್ ವಾಸ್ನಿಕ್ ಮತ್ತು ಗೋವಾ ಕಾಂಗ್ರೆಸ್ ಪ್ರಭಾರ ದಿನೇಶ್ ಗುಂಡೂರಾವ್ ಉಪಸ್ಥಿತಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ಮುಕುಲ್ ವಾಸ್ನಿಕ್ ಮಾತನಾಡಿ, ಗೋವಾದ ಕಾಂಗ್ರೆಸ್ ಶಾಸಕರು ಇತರ ಪಕ್ಷಗಳ ಒತ್ತಡದ ಆಮಿಷಕ್ಕೊಳಗಾಗದೆ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆಯಿಂದಿರಬೇಕು. ಈ ಕುರಿತಂತೆ ದೆಹಲಿಯಲ್ಲಿರುವ ವರಿಷ್ಠರಿಗೆ ವರದಿ ಸಲ್ಲಿಸಲಾಗುವುದು. ಪಕ್ಷದ ವರಿಷ್ಠರು ಗೋವಾದ ಸದ್ಯದ ವಿದ್ಯಮಾನದ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಪ್ರದೇಶಾಧ್ಯಕ್ಷ ಅಮಿತ್ ಪಾಟಕರ್, ಶಾಸಕ ಮೈಕಲ್ ಲೋಬೊ, ದಿಲಾಯಲಾ ಲೋಬೊ, ಕೇದಾರ್ ನಾಯ್ಕ, ರಾಜೇಶ್ ಫಳದೇಸಾಯಿ, ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ferozepur; ಗುರುಗ್ರಂಥ ಸಾಹೀಬ್ ಪುಟಗಳನ್ನು ಹರಿದ ಯುವಕ; ಥಳಿಸಿ ಕೊಂದು ಹಾಕಿದ ಸ್ಥಳೀಯರು
Crime: ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಅಣ್ಣನನ್ನೇ ಹತ್ಯೆಗೈದ 14ರ ಬಾಲಕಿ
Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ
Temple; ಎಪ್ರಿಲ್ನಲ್ಲಿ ತಿರುಪತಿ ಹುಂಡಿಗೆ ಬಿದ್ದ ಕಾಣಿಕೆ ಎಷ್ಟು ಗೊತ್ತೇ?
Wife ಜತೆ ಅಸ್ವಾಭಾವಿಕ ಲೈಂಗಿಕಕ್ರಿಯೆಯು ರೇಪ್ ಅಲ್ಲ: ಹೈಕೋರ್ಟ್