ಸಾಗರ : ದಾಖಲಾಗದ ಎಫ್‌ಐಆರ್ ; ಪೊಲೀಸ್ ವೈಫಲ್ಯದ ವಿರುದ್ಧ ಜು. 14 ರಂದು ಪ್ರತಿಭಟನೆ


Team Udayavani, Jul 12, 2022, 4:30 PM IST

ಸಾಗರ : ದಾಖಲಾಗದ ಎಫ್‌ಐಆರ್ ; ಪೊಲೀಸ್ ವೈಫಲ್ಯದ ವಿರುದ್ಧ ಜು. 14 ರಂದು ಪ್ರತಿಭಟನೆ

ಸಾಗರ : ಮಾರ್ಚ್ 13ರಂದು ಶ್ರೀಪಾದ ಹೆಗಡೆ ಮತ್ತು ಜಗದೀಶ್ ಗೌಡ ಅವರ ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲು ಮಾಡದ ಪೊಲೀಸ್ ವೈಫಲ್ಯವನ್ನು ಖಂಡಿಸಿ ಜು. 14 ರಂದು ಬ್ರಾಹ್ಮಣ ಮತ್ತು ವೀರಶೈವ ಒಕ್ಕೂಟದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯವಾದಿ ಕೆ.ಎನ್.ಶ್ರೀಧರ್ ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೊಂದವರಿಗೆ ನ್ಯಾಯ ಕೊಡಬೇಕಾಗಿದ್ದ ಪೊಲೀಸ್ ಇಲಾಖೆ ಸಂಪೂರ್ಣ ವೈಫಲ್ಯ ಕಂಡಿದೆ. ಹಿಂಸೆಯನ್ನು ವಿರೋಧಿಸುವ ಎಲ್ಲ ಸಂಘ ಸಂಸ್ಥೆಗಳು, ಸಾರ್ವಜನಿಕರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಎಂಡಿಎಫ್ ಉಳಿಸಿ, ಶ್ರೀಪಾದ ಹೆಗಡೆ ಬಂಧಿಸಿ ಎಂದು ಒಂದು ಗುಂಪು ಕರಪತ್ರ ಹಂಚುವ ಮೂಲಕ ಸಮಾಜವನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ನಡೆಸುತ್ತಿರುವುದು ಖಂಡನೀಯ. ಶ್ರೀಪಾದ ಹೆಗಡೆ ಮಾಡಿರುವ ತಪ್ಪು ಏನೆಂದು, ಅವರು ಕೆಲಸ ಮಾಡುತ್ತಿರುವ ಸಂಸ್ಥೆಗಳಲ್ಲಿ ಭ್ರಷ್ಟಾಚಾರ ನಡೆದಿರುವ ಕುರಿತ ದಾಖಲೆ ಬಿಡುಗಡೆ ಮಾಡಲಿ. ಶ್ರೀಪಾದರ ಹಿಂದೆ ಮಾಜಿ ಶಾಸಕರೊಬ್ಬರಿದ್ದಾರೆಂದು ಬಿಂಬಿಸುವ ಪ್ರಯತ್ನ ನಡೆಸಲಾಗುತ್ತಿದ್ದು, ಆ ಶಾಸಕರು ಯಾರೆಂದು ಕರಪತ್ರ ಹಂಚಿ, ಪ್ರತಿಭಟನೆ ನಡೆಸುತ್ತಿರುವವರು ಸಾರ್ವಜನಿಕರಿಗೆ ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು.

2016ರಲ್ಲಿ ನಿಸ್ರಾಣಿ ಎಂಡಿಎಫ್ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಹಿಂದೆ ಕೆ.ಎಚ್.ಶ್ರೀನಿವಾಸ್ ಅಧ್ಯಕ್ಷರಾಗಿದ್ದರು. ಹರನಾಥ್‌ರಾವ್ ಉಪಾಧ್ಯಕ್ಷರಾಗಿದ್ದರು. ಆಗಲೇ ಹೊಸ ಸದಸ್ಯರನ್ನು ತಲಾ 25 ಸಾವಿರ ರೂಪಾಯಿ ಶುಲ್ಕ ವಸೂಲಿ ಮಾಡಿ ನೇಮಕ ಮಾಡಿಕೊಳ್ಳಲಾಗಿದೆ. ಹೀಗೆ ಸದಸ್ಯತ್ವ ಮಾಡಲು ಸಿ.ಎಂ.ಎನ್.ಶಾಸ್ತ್ರಿ 10 ಲಕ್ಷ ರೂಪಾಯಿ ಕೊಟ್ಟಿದ್ದಾರೆ. ಶ್ರೀಪಾದ ಹೆಗಡೆ ಕಾನೂನಾತ್ಮಕವಾಗಿ ಇದ್ದಾರೆಂದು ಕೆಲವರು ಕರಪತ್ರ ಹಂಚುವುದು, ಪ್ರತಿಭಟನೆ ನಡೆಸುತ್ತೇವೆಂದು ಬ್ಲಾಕ್‌ಮೇಲ್ ಮಾಡುವ ಪ್ರಯತ್ನ ನಡೆಸುತ್ತಿದ್ದಾರೆ. ಶ್ರೀಪಾದ ಹೆಗಡೆ ವಿರುದ್ಧ ಅಪಪ್ರಚಾರದ ಕರಪತ್ರ ಹಂಚಿರುವ ನಾಲ್ಕು ಜನರ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದರು.

ಇದನ್ನೂ ಓದಿ : ರೈಲ್ವೆ ಸವಾಲು ಪರಿಹಾರಕ್ಕಾಗಿ ನವೋದ್ಯಮಕ್ಕೆ ಉತ್ತೇಜನ

ಶ್ರೀಪಾದ ಹೆಗಡೆ ನಿಸ್ರಾಣಿ ಮಾತನಾಡಿ, ನಾನು ಎಂಡಿಎಫ್ ಉಪಾಧ್ಯಕ್ಷನಾಗಿ ಮಾಡಿದ ಅಭಿವೃದ್ಧಿಗೆ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಲಾಗುತ್ತಿದೆ. ಕ್ಷೇತ್ರದ ಶಾಸಕ ಹಾಲಪ್ಪ ಹರತಾಳು ಕುಮ್ಮಕ್ಕಿನಿಂದಲೇ ಇದೆಲ್ಲಾ ನಡೆಯುತ್ತಿದೆ. ಹರನಾಥ್‌ರಾವ್ ನೇತೃತ್ವದ ಸಮಿತಿಯೇ ಅಧಿಕೃತ ಎಂದು ಹೈಕೋರ್ಟ್‌ನಲ್ಲಿ ದಾವೆ ಹೂಡಲಾಗಿತ್ತು. ಆದರೆ ನ್ಯಾಯಾಲಯ ಮೂರು ವಾರದಲ್ಲಿ ಅಧಿಕೃತ ಆಡಳಿತ ಮಂಡಳಿ ತೀರ್ಮಾನ ಮಾಡಲು ಜಿಲ್ಲಾ ನೊಂದಣಾಧಿಕಾರಿಗಳಿಗೆ ಸೂಚನೆ ನೀಡಿದೆ. ನನ್ನ ಮೇಲೆ ಮತ್ತು ಜಗದೀಶ್‌ಗೌಡ ಅವರ ಮೇಲೆ ನಡೆದ ರಾಜಕೀಯ ಪ್ರೇರಿತ ದೌರ್ಜನ್ಯಕ್ಕೆ ನ್ಯಾಯ ಕೇಳುವುದು ತಪ್ಪಾ ಎಂದು ಪ್ರಶ್ನಿಸಿದ ಅವರು, ಈತನಕ ಎಫ್‌ಐಆರ್ ಸಹ ದಾಖಲು ಮಾಡದೆ ಇರುವುದು ಖಂಡನೀಯ ಎಂದರು.

ನನ್ನ ಮೇಲೆ ಆಗಿರುವ ದೌರ್ಜನ್ಯ ಕುರಿತು ತಾಲೂಕಿನ ಮನೆಮನೆಗೆ ಪಾದಯಾತ್ರೆ ಮೂಲಕ ತೆರಳಿ ಜನರಿಗೆ ತಿಳಿಸುವ ಕೆಲಸ ಮಾಡುತ್ತೇನೆ. ನನ್ನ ಮೇಲೆ ಆರೋಪ ಮಾಡುವವರು ಬಹಿರಂಗ ಚರ್ಚೆಗೆ ಬರಲಿ. ನೆಹರೂ ಮೈದಾನದಲ್ಲಿ ಇದಕ್ಕಾಗಿ ವೇದಿಕೆ ತಯಾರಿಸಲು ಸಿದ್ಧನಿದ್ದೇನೆ. ಶಾಸಕರು ಬಂದು ನೇರವಾಗಿ ಚರ್ಚೆ ನಡೆಸಲಿ. ಹಿಂದೆ ಸಹ ಹರತಾಳು ಹಾಲಪ್ಪ ಸೊರಬ ಶಾಸಕರಾಗಿದ್ದಾಗ ಮಹಾಬಲೇಶ್ವರ ಹೆಗಡೆ ಮತ್ತು ಉಮಾಪತಿ ಎಂಬುವವರ ಮೇಲೆ ಹಲ್ಲೆ ಮಾಡಿದ್ದಾರೆ. ಈಚೆಗೆ ಆವಿನಹಳ್ಳಿಯ ಶಶಿಗೌಡ ಎಂಬುವವರ ಮೇಲೆ ದೌರ್ಜನ್ಯ ನಡೆಸಿದ್ದಾರೆ. ಅಪಪ್ರಚಾರದ ಕರಪತ್ರ ಹಂಚಿದವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ತಿಳಿಸಿದರು.

ಗೋಷ್ಠಿಯಲ್ಲಿ ಅರುಣಕುಮಾರ್, ಚಂದ್ರಶೇಖರ್ ಎನ್.ಎಚ್., ದಳವಾಯಿ ದಾನಪ್ಪ, ಪ್ರದೀಪ್ ಬರಿಗೆ, ರಜನೀಶ್ ಹೆಗಡೆ, ನಟರಾಜ್, ಕೃಷ್ಣಮೂರ್ತಿ ಹಾಜರಿದ್ದರು.

ಟಾಪ್ ನ್ಯೂಸ್

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Priyanka Gandhi

Election; ಪ್ರಧಾನಿ ಮೋದಿ ಯಾಕೆ ಮಂಗಳಸೂತ್ರ,ಧರ್ಮದ ಮೇಲೆ ಮತ ಕೇಳುತ್ತಾರೆ: ಪ್ರಿಯಾಂಕಾ ಗಾಂಧಿ

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

1-asasa

Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

raghu bhat

Congress ಗಾಡ್ ಫಾದರ್ ಸಂಸ್ಕೃತಿ ಬಿಜೆಪಿಗೆ ಬಂದಿದೆ: ರಘುಪತಿ ಭಟ್

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

yogi-2

Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ

1-qewwqeqqw

RSS ಕೂಡ ನಕಲಿ ಎಂದು ನಾಳೆ ಮೋದಿ ಹೇಳಬಹುದು : ಉದ್ಧವ್ ಠಾಕ್ರೆ ಕಿಡಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-wqewqewe

Ramanagara; ಅಪ್ರಾಪ್ತ ಮಕ್ಕಳ ಮೈಯನ್ನು ಕಾದ ಕಬ್ಬಿಣದಿಂದ ಸುಟ್ಟ ಮದ್ಯವ್ಯಸನಿ ತಂದೆ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.