ಎಸ್ಸಿ-ಎಸ್ಟಿ ಮೀಸಲು ಹೆಚ್ಚಳಕ್ಕೆ15 ದಿನ ಗಡುವು
ರಾಜಧಾನಿವರೆಗೂ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ.
Team Udayavani, Jul 12, 2022, 6:31 PM IST
ಚಿತ್ರದುರ್ಗ: ಮುಂದಿನ 15 ದಿನಗಳ ಒಳಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಳ ಮಾಡದಿದ್ದರೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಎಲ್ಲಿಯೂ ಓಡಾಡಲು ಬಿಡುವುದಿಲ್ಲ. ಕಪ್ಪು ಬಾವುಟ ಪ್ರದರ್ಶನ ಮಾಡುತ್ತೇವೆ ಎಂದು ಬಿಎಸ್ಪಿ ರಾಜ್ಯ ಸಂಯೋಜಕ ಮಾರಸಂದ್ರ ಮುನಿಯಪ್ಪ ಎಚ್ಚರಿಕೆ ನೀಡಿದರು.
ವಾಲ್ಮೀಕಿ ನಾಯಕ ಸಮುದಾಯಕ್ಕೆ ಶೇ. 7.5 ಮೀಸಲಾತಿಗೆ ಒತ್ತಾಯಿಸಿ ಕಳೆದ 152 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸುತ್ತಿರುವ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೋರಾಟ ಬೆಂಬಲಿಸಿ ನಗರದ ಒನಕೆ ಓಬವ್ವ ವೃತ್ತದಲ್ಲಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ 51 ಶಾಸಕರಿದ್ದಾರೆ. ದೇಶದಲ್ಲಿ 151 ಸಂಸದರಿದ್ದಾರೆ. ಎಲ್ಲರೂ ಧ್ವನಿ ಎತ್ತಬೇಕಾಗಿದೆ. ಒಳ ಜಾತಿಗಳೇನೇ ಇದ್ದರೂ, ಮೀಸಲಾತಿ ವಿಚಾರ ಬಂದಾಗ ಎಲ್ಲರೂ ಒಗ್ಗಟ್ಟಾಗಬೇಕು ಎಂದು ಕರೆ ನೀಡಿದರು.
ನ್ಯಾ| ನಾಗಮೋಹನ ದಾಸ್ ವರದಿ ನೀಡಿ ಎರಡು ವರ್ಷಗಳಾದರೂ ರಾಜ್ಯ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ. ತುಳಿತಕ್ಕೊಳಗಾದವರಿಗೆ ಮೀಸಲಾತಿ ನೀಡಬೇಕು ಎಂದು ಸಂವಿಧಾನ ಹೇಳಿದೆ. ಆದರೆ ಸರ್ಕಾರ ತಳ ಸಮುದಾಯಗಳನ್ನು ತಾತ್ಸಾರ ಮಾಡುತ್ತಿದೆ. ಇನ್ನಾದರೂ ಸರ್ಕಾರ ನಿದ್ದೆಯಿಂದ ಎಚ್ಚೆತ್ತು ಮೀಸಲಾತಿ ಜಾರಿ ಮಾಡಬೇಕು. ಇಲ್ಲವಾದಲ್ಲಿ ಸಿಎಂ ಹಾಗೂ ಸಚಿವರು ಓಡಾಡುವುದು ಕಷ್ಟವಾಗಲಿದೆ ಎಂದರು.
ಮಾಜಿ ಸಚಿವ ಎಚ್. ಆಂಜನೇಯ ಮಾತನಾಡಿ, ಮೀಸಲಾತಿ ಹೆಚ್ಚಳ ಮಾಡಲು ಇಷ್ಟು ದಿನ ಬೇಕಾಗಿರಲಿಲ್ಲ. ಆದರೆ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ಹೋರಾಟಕ್ಕೆ ಮನೆಗೊಬ್ಬರು ಬರಬೇಕು. ಬೆಂಗಳೂರು ದಿಗ್ಬಂಧನ ಮಾಡಬೇಕು. ಆಗ ಸರ್ಕಾರ ಎಚ್ಚೆತ್ತುಕೊಳ್ಳಲಿದೆ. ಎಲ್ಲರೂ ಒಗ್ಗೂಡಿ ಹೋರಾಟ ಮಾಡೋಣ ಎಂದು ತಿಳಿಸಿದರು.
ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್. ಮಂಜುನಾಥ್ ಮಾತನಾಡಿ, ಇಲ್ಲಿಯವರೆಗೂ ಪರಿಶಿಷ್ಟರಿಗೆ ಮೋಸ ಮಾಡಿಕೊಂಡು ಬರುತ್ತಿರುವ ಸರ್ಕಾರಗಳಿಗೆ ಪಾಠ ಕಲಿಸಿ ಮುಂದಿನ ಚುನಾವಣೆಯಲ್ಲಿ ಕಿತ್ತೂಗೆಯಬೇಕು. ಇಲ್ಲದಿದ್ದರೆ ಎಸ್ಸಿ-ಎಸ್ಟಿಗಳ ಸರ್ವನಾಶವಾಗುವುದರಲ್ಲಿ ಅನುಮಾನವಿಲ್ಲ ಎಂದರು.
ಮೇಲ್ವರ್ಗದವರು ಕೇಳದಿದ್ದರು ಶೇ. 10ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ಪ್ರಸನ್ನಾನಂದ ಸ್ವಾಮೀಜಿ ಕಳೆದ 152 ದಿನಗಳಿಂದ ಮೀಸಲಾತಿ ಹೆಚ್ಚಳಕ್ಕಾಗಿ ಬೆಂಗಳೂರಿನಲ್ಲಿ ಧರಣಿ ನಡೆಸುತ್ತಿದ್ದರೂ ಮೋಸ ಮಾಡುವ ಪಕ್ಷಗಳಿಗೆ ಮಣೆ ಹಾಕುವ ಕೆಲಸ ಮಾಡುತ್ತಿದ್ದೇವೆ. ಈ ನಿಟ್ಟಿನಲ್ಲಿ ಮುಂದಿನ ಚುನಾವಣೆಯಲ್ಲಿ ಪಾಠ ಕಲಿಸಬೇಕು ಎಂದು ಹೇಳಿದರು.
ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಮಾತನಾಡಿ, ವಾಲ್ಮೀಕಿ ಶ್ರೀಗಳು 152 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸರ್ಕಾರ ಸ್ಪಂದಿಸುತ್ತಿಲ್ಲ. ರಾಜನಹಳ್ಳಿಯಿಂದ ರಾಜಧಾನಿವರೆಗೂ ಪಾದಯಾತ್ರೆ ನಡೆಸಿ ಸರ್ಕಾರದ ಗಮನ ಸೆಳೆದಿದ್ದಾರೆ. ಅಧಿವೇಶನದಲ್ಲಿ ಮೂರು ಬಾರಿ ಪ್ರತಿಭಟನೆ ನಡೆಸಿದ್ದೇವೆ, ಧರಣಿ ಮಾಡಿದ್ದೇವೆ. ಜನಸಂಖ್ಯೆಗನುಗುಣವಾಗಿ ಮೀಸಲಾತಿ ಸಿಗಬೇಕು ಎಂದು ಒತ್ತಾಯಿಸಿದ್ದೇವೆ. ಆದರೂ ಬಿಜೆಪಿ ನೇತೃತ್ವದ ಸರ್ಕಾರ ನಮಗೆ ಮೋಸ ಮಾಡುತ್ತಿದೆ. ಧರ್ಮದ ವಿಚಾರವನ್ನು ಹೇಳಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಬಸವಪ್ರಭು ಕೇತೇಶ್ವರ ಸ್ವಾಮೀಜಿ ಮಾತನಾಡಿದರು.ನಾಯಕ ಸಮಾಜದ ಜಿಲ್ಲಾಧ್ಯಕ್ಷ ಎಚ್.ಜೆ. ಕೃಷ್ಣಮೂರ್ತಿ, ತಾಲೂಕು ಅಧ್ಯಕ್ಷ ಬಿ. ಕಾಂತರಾಜ್, ಮುಖಂಡರಾದ ಹರ್ತಿಕೋಟೆ ವೀರೇಂದ್ರಸಿಂಹ, ಡಿ. ಗೋಪಾಲಸ್ವಾಮಿ ನಾಯಕ, ಕೆ.ಪಿ. ಸಂಪತ್ಕುಮಾರ್, ಫಾ| ಎಂ.ಎಸ್. ರಾಜು, ನಗರಸಭೆ ಸದಸ್ಯರಾದ ವೆಂಕಟೇಶ್, ದೀಪು, ಮಾಜಿ ಸದಸ್ಯರಾದ ತಿಪ್ಪೇಸ್ವಾಮಿ, ಸಿ.ಟಿ. ರಾಜೇಶ್, ಲಿಂಗವ್ವನಾಗತಿಹಳ್ಳಿ ತಿಪ್ಪೇಸ್ವಾಮಿ, ಎಚ್. ಅಂಜಿನಪ್ಪ, ದಲಿತ ಮುಖಂಡ ಡಿ.ಟಿ. ರಾಜಗಿರಿ, ಬಾಳೆಕಾಯಿ ಶ್ರೀನಿವಾಸ್, ಜಿಪಂ ಮಾಜಿ ಸದಸ್ಯರಾದ ಆರ್ .ನರಸಿಂಹರಾಜು, ಬಿ.ಪಿ.ಪ್ರಕಾಶ್ಮೂರ್ತಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಪರಿಶಿಷ್ಟ ಜಾತಿಗೆ ಶೇ. 17 ಹಾಗೂ ಪಂಗಡದ ಶೇ. 7.5ರಷ್ಟು ಮೀಸಲಾತಿ ಹೆಚ್ಚಳ ಮಾಡಲು ಕೇಳುತ್ತಿದ್ದೇವೆ. ನಮ್ಮ ಸಂವಿಧಾನಬದ್ಧ ಹಕ್ಕನ್ನು ಕೊಡಿ. ಮೀಸಲಾತಿ ವಿಚಾರದಲ್ಲಿ ಸರ್ಕಾರದ ತಾತ್ಸಾರ ಭಾವನೆ ಸರಿಯಲ್ಲ. ನಮ್ಮ ತಾಳ್ಮೆ ಪರೀಕ್ಷೆ ಮಾಡದೇ ಮೀಸಲಾತಿ ಕಲ್ಪಿಸಿ ವಾಲ್ಮೀಕಿ ಶ್ರೀಗಳ ಧರಣಿ ಅಂತ್ಯವಾಗುವಂತೆ ನೋಡಿಕೊಳ್ಳಿ.
ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ
ಆಳುವ ಸರ್ಕಾರಗಳು ಯಾವುದೇ ಇರಬಹುದು. ಆದರೆ ಹೋರಾಟ ಪರಿಪಕ್ವವಾಗಿದ್ದಾಗ ಮಾತ್ರ ಧರಣಿ, ಚಳವಳಿಗಳಿಗೆ ಯಶಸ್ಸು ಸಿಗುತ್ತದೆ. ರಾಜ್ಯದಲ್ಲಿ ಶೇ. 30ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿದ್ದೇವೆ. ತಾಳ್ಮೆ ಕೆಣಕಿದರೆ ಮುಂದಿನ ಪರಿಸ್ಥಿತಿ ನೆಟ್ಟಗಿರುವುದಿಲ್ಲ. ವಿಳಂಬ ನೀತಿ ಅನುಸರಿಸಿದಂತೆಲ್ಲಾ ವಿರೋಧಗಳ ಶಕ್ತಿ ಹೆಚ್ಚುತ್ತದೆ. ನ್ಯಾ| ನಾಗಮೋಹನ ದಾಸ್ ವರದಿ ಸ್ಪಷ್ಟ, ನಿಖರ, ನೇರವಾಗಿದೆ. ಪರಿಶೀಲಿಸುವ ಅಗತ್ಯವಿಲ್ಲ. ಸರ್ಕಾರ ಮೀಸಲಾತಿ ಹೆಚ್ಚಿಸಲಿ.
ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಈಜಲು ಬಾರದಿದ್ದರೂ ಕೆರೆಯಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಯುವಕ
ಉತ್ತರಾಧಿಕಾರಿ ಆಯ್ಕೆ ಟ್ರಸ್ಟ್-ಹಿರಿಯರ ಹೊಣೆ: ಮಾದಾರ ಚನ್ನಯ್ಯ ಶ್ರೀ
ಮದುವೆ ಸಮಾರಂಭದಲ್ಲಿ ಊಟ ಮಾಡಿದ 30ಕ್ಕೂ ಅಧಿಕ ಮಂದಿ ಅಸ್ವಸ್ಥ… ಆಸ್ಪತ್ರೆಗೆ ದಾಖಲು
Chitradurga: ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ
ಚಿತ್ರದುರ್ಗ-ಬಸವ ತತ್ವ ಪ್ರತಿ ಮನೆಗೆ ತಲುಪಲಿ: ಡಾ| ಬಸವಕುಮಾರ ಶ್ರೀ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Gundmi Toll Plaza ಸ್ಥಳೀಯರಿಗೆ ಟೋಲ್ ಬರೆ; ಟೋಲ್ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ
Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ
D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ; ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್’
Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ ರಕ್ಷಣೆ
Chhattisgarh; ನಿಲ್ಲದ ನಕ್ಸಲ್ ಬೇಟೆ: ಓರ್ವನ ಹತ್ಯೆ