ಬೈಲಹೊಂಗಲ : ದುಷ್ಕರ್ಮಿಗಳಿಂದ ಚಿತ್ರನಟ ಶಿವರಂಜನ್ ಮೇಲೆ ಫೈರಿಂಗ್ ಯತ್ನ, ಬೆಚ್ಚಿಬಿದ್ದ ಜನತೆ
Team Udayavani, Jul 13, 2022, 12:12 AM IST
ಬೆಳಗಾವಿ : ಬೈಲಹೊಂಗಲ ಪಟ್ಟಣದಲ್ಲಿ ಮಂಗಳವಾರ ರಾತ್ರಿ ಬೈಕ್ ಮೇಲೆ ಬಂದ ದುಷ್ಕರ್ಮಿಗಳು ಚಿತ್ರ ನಟ ಶಿವರಂಜನ್ ಬೋಳಣ್ಣವರ ಅವರ ಮೇಲೆ ಗುಂಡಿನ ದಾಳಿ ನಡೆಸಲು ಯತ್ನಿಸಿದ್ದು, ಅದೃಷ್ಟವಶಾತ್ ಯಾವುದೇ ಗುಂಡು ತಗುಲಿಲ್ಲ.
ಬೈಲಹೊಂಗಲ ಪಟ್ಟಣದ ಹನುಮಂತ ದೇವಸ್ಥಾನ ಬಳಿ ಇರುವ ಶಿವರಂಜನ್ ಬೋಳಣ್ಣವರ ಅವರ ಹಳೆಯ ಮನೆ ಬಳಿ 3-4 ಸುತ್ತು ಫೈರಿಂಗ್ ನಡೆದಿದೆ. ಗುಂಡು ಹಾರಿಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಶಿವರಂಜನ್ ಅವರಿಗೆ ಯಾವುದೇ ಗುಂಡು ತಗುಲಿಲ್ಲ.
ಶಿವರಂಜನ್ ಅವರ ಸಹೋದರ ಸಂಬಂಧಿ ಗುಂಡು ಹಾರಿಸಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ ಇನ್ನುವರೆಗೆ ಯಾವುದೇ ನಿಖರ ಮಾಹಿತಿ ತಿಳಿದು ಬಂದಿಲ್ಲ. ಗುಂಡು ಹಾರಿಸಿದವರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಶಿವರಂಜನ್ ಅವರ ವಿಚಾರಣೆ ನಡೆಸಿ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ.
ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾದ ಮಾರ್ಗದಲ್ಲಿಯ ಸಿಸಿ ಕ್ಯಾಮರಾಗಳ ಪರಿಶೀಲನೆ ನಡೆದಿದ್ದು, ಗುಂಡು ಹಾರಿಸಿ ಹೆದರಿಸಲು ಬಂದಿದ್ದರೋ ಅಥವಾ ಶಿವರಂಜನ್ ಅವರ ಕೊಲೆಗೈಯಲು ಬಂದಿದ್ದರೋ ಎಂಬುದರ ಬಗ್ಗೆ ಪೊಲೀಸ್ ಅಧಿಕಾರಿಗಳು ಮಾಹಿತಿ ಪಡೆಯುತ್ತಿದ್ದಾರೆ. ಬೈಲಹೊಂಗಲ ಪಟ್ಟಣದ ಸುತ್ತಲೂ ಪೊಲೀಸರು ನಾಕಾಬಂಧಿ ಹಾಕಿದ್ದಾರೆ. ಸಂಶಯಾಸ್ಪದ ವಾಹನಗಳ ತಪಾಸಣೆ ನಡೆಸಿದ್ದಾರೆ.
ಸ್ಥಳಕ್ಕೆ ಎಸ್ ಪಿ ಸಂಜೀವ ಪಾಟೀಲ, ಹೆಚ್ಚುವರಿ ಎಸ್ ಪಿ ಮಹಾಲಿಂಗ ನಂದಗಾಂವಿ, ಡಿಎಸ್ ಪಿ, ಸಿಪಿಐ ಸೇರಿದಂತೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು
MLC Elections: ಬಿಜೆಪಿಯಲ್ಲಿ 3 ಸ್ಥಾನಕ್ಕೆ 30 ಆಕಾಂಕ್ಷಿಗಳು
DK Shivakumar ರಕ್ಷಿಸಿದರೆ ಮುಂದೆ ಬೆಲೆ ತೆರಬೇಕಾಗುತ್ತದೆ: ಎಚ್ಡಿಕೆ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು