ಅಕ್ಟೋಬರ್‌ 1ರಿಂದ ಜಾರಿ; ಆಟೋರಿಕ್ಷಾ ಕನಿಷ್ಟ ಬಾಡಿಗೆ ದರ ಏರಿಕೆ

2018ರ ಅಕ್ಟೋಬರ್‌ ತಿಂಗಳಲ್ಲಿ ಆಟೋಗಳ ಬಾಡಿಗೆ ದರ ನಿಗದಿಪಡಿಸಲಾಗಿತ್ತು.

Team Udayavani, Jul 13, 2022, 5:05 PM IST

ಅಕ್ಟೋಬರ್‌ 1ರಿಂದ ಜಾರಿ; ಆಟೋರಿಕ್ಷಾ ಕನಿಷ್ಟ ಬಾಡಿಗೆ ದರ ಏರಿಕೆ

ಧಾರವಾಡ: ಪ್ರಯಾಣದ ಮೊದಲ 1.6 ಕಿಲೋ ಮೀಟರ್‌ವರೆಗೆ ಈ ವರೆಗೂ ಜಾರಿಯಲ್ಲಿದ್ದ ಆಟೋಗಳ ಕನಿಷ್ಟ ಬಾಡಿಗೆ ದರವನ್ನು 28 ರೂ. ಗಳಿಂದ 30 ರೂ.ಗೆ ಏರಿಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಆಟೋ ಚಾಲಕರ ಸಭೆಯಲ್ಲಿ ಮಾತನಾಡಿದ ಅವರು, ಈ ಪರಿಷ್ಕೃತ ದರಗಳು ಅಕ್ಟೋಬರ್‌ 1ರಿಂದ ಜಾರಿಗೊಳ್ಳಲಿವೆ.

ಎಲ್ಲಾ ಆಟೋರಿಕ್ಷಾಗಳು ಆಗಸ್ಟ್‌ 15ರೊಳಗೆ ಕಡ್ಡಾಯವಾಗಿ ಡಿಜಿಟಲ್‌ ಫೇರ್‌ ಮೀಟರ್‌ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಿದರು. ಅವಳಿನಗರದಲ್ಲಿ ಬಾಡಿಗೆಯ ರಹದಾರಿ ಹೊಂದಿರುವ ಆಟೋರಿಕ್ಷಾಗಳು ಪ್ರಯಾಣದ ಪ್ರಾರಂಭಿಕ 1.6 ಕಿಮೀ ವರೆಗೆ 30 ರೂ. ಕನಿಷ್ಟ ಬಾಡಿಗೆ ದರ, ನಂತರದ ಪ್ರತಿ ಒಂದು ಕಿಮೀಗೆ 15 ರೂ. ಹಾಗೂ ರಾತ್ರಿ 10ರಿಂದ ಬೆಳಗಿನ 5 ಗಂಟೆವರೆಗೆ ಅರ್ಧ ಪಟ್ಟು ಹೆಚ್ಚುವರಿ ದರ ಪಡೆಯಬಹುದು. ಎಲ್ಲಾ ಆಟೋರಿಕ್ಷಾಗಳು ಆ. 15 ರೊಳಗೆ ಕಡ್ಡಾಯವಾಗಿ ಡಿಜಿಟಲ್‌ ಫೇರ್‌ ಮೀಟರ್‌ ಅಳವಡಿಸಿಕೊಂಡು ಮೀಟರ್‌ ಸತ್ಯಾಪನೆ ಮಾಡಿಸಿಕೊಳ್ಳಬೇಕು. ಕಾನೂನು ಮಾಪನ ಶಾಸ್ತ್ರ ಇಲಾಖೆಯು ಅವಳಿನಗರದಲ್ಲಿ ಡಿಜಿಟಲ್‌ ಫೇರ್‌ ಮೀಟರ್‌ ಅಳವಡಿಸುವ ಮತ್ತು ಪೂರೈಸುವ ಡೀಲರ್‌ಗಳ ಸಂಖ್ಯೆಯನ್ನು 5ಕ್ಕೆ ಹೆಚ್ಚಿಸಿ ತ್ವರಿತ ಸೇವೆ ಒದಗಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

ಮೂಲ ಸೌಕರ್ಯಕ್ಕೆ ಸೂಚನೆ: ಅವಳಿನಗರದ ಬಸ್‌, ರೈಲು ಹಾಗೂ ವಿಮಾನ ನಿಲ್ದಾಣಗಳಲ್ಲಿ ಪ್ರಿಪೇಡ್‌ ಆಟೋಕ್ಷಾ ಸ್ಟ್ಯಾಂಡ್‌ಗಳನ್ನು ನಿರ್ಮಿಸಿ ಕೊಡಬೇಕು. ಅವಳಿನಗರದ ಎಲ್ಲ ವಲಯಗಳ ವ್ಯಾಪ್ತಿಗಳಲ್ಲಿ ಆಟೋರಿಕ್ಷಾ ಸ್ಟ್ಯಾಂಡ್‌ ಗಳು, ಶೌಚಾಲಯಗಳನ್ನು ನಿರ್ಮಿಸಿ ಸ್ಥಳೀಯ ಆಟೋರಿಕ್ಷಾ ಚಾಲಕರ ಸಂಘದವರಿಗೆ ನಿರ್ವಹಣೆ ಜವಾಬ್ದಾರಿ ವಹಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಡಿಸಿ ಸೂಚಿಸಿದರು.

ಹು-ಧಾ ಸ್ಮಾರ್ಟ್‌ ಸಿಟಿ ಯೋಜನೆಯಡಿ ಸ್ಮಾರ್ಟ್‌ ಆಟೋಸ್ಟ್ಯಾಂಡ್‌ಗಳನ್ನು ನಿರ್ಮಿಸಿ ನಗರದ ಸೌಂದಯಿìಕರಣ ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಎಸ್‌ಪಿ ಲೋಕೇಶ್‌ ಜಗಲಾಸರ್‌ ಮಾತನಾಡಿ, ಬಿಎಸ್‌-4 ಹಾಗೂ ಮಾಲೀಕತ್ವ ವರ್ಗಾವಣೆಯಾಗಿರುವ ಆಟೋಗಳಿಗೆ ರಹದಾರಿ ನೀಡುವ ಸಂದರ್ಭದಲ್ಲಿ ಈ ಹಿಂದೆ ಪೊಲೀಸ್‌ ಅಥವಾ ಆರ್‌ಟಿಒ ವರದಿ ಆಧರಿಸಿ ರಹದಾರಿ ರದ್ದುಪಡಿಸಿದ್ದರೆ ಅವುಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಲೋಪವಾಗದಂತೆ ಎಚ್ಚರ ವಹಿಸಬೇಕು ಎಂದರು.

ಹು-ಧಾ ಉಪ ಪೊಲೀಸ್‌ ಆಯುಕ್ತ ಗೋಪಾಲ ಬ್ಯಾಕೋಡ್‌ ಮಾತನಾಡಿ, ಡಿಜಿಟಲ್‌ ಫೇರ್‌ ಮೀಟರ್‌ ಅಳವಡಿಸುವ ಡೀಲರ್‌ಗಳು ಆಟೋರಿಕ್ಷಾಗಳ ಮಾಲೀಕರಿಂದ ಅಧಿಕ ಶುಲ್ಕ ವಸೂಲಿ ಮಾಡಬಾರದು. ನಿಗದಿತ ದರ ಮಾತ್ರ ವಿಧಿಸಬೇಕು. ಕಾನೂನು ಮಾಪನಶಾಸ್ತ್ರ ಇಲಾಖೆ ಅ ಧಿಕಾರಿಗಳು ಡೀಲರ್‌ಗಳಿಗೆ ಈ ಕುರಿತು ಎಚ್ಚರಿಕೆ ನೀಡಬೇಕು ಎಂದರು. ಹು-ಧಾ ಪಶ್ಚಿಮ ಆರ್‌ಟಿಒ ಬಿ.ಶಂಕರಪ್ಪ, ಪೂರ್ವ ವಿಭಾಗದ ಆರ್‌ಟಿಒ ಕೆ.ದಾಮೋದರ ಇನ್ನಿತರರಿದ್ದರು.

ಒಂದು ಬಾರಿ ರಹದಾರಿ
ಈಗಾಗಲೇ ನೋಂದಣಿಯಾಗಿರುವ ಭಾರತ್‌ ಸ್ಟೇಜ್‌-4 ಮಾಪನದ ವಾಹನಗಳಿಗೆ ಹಾಗೂ ಮಾಲೀಕತ್ವ ವರ್ಗಾವಣೆ ಸಂದರ್ಭದಲ್ಲಿ ರದ್ದಾಗಿರುವ ಹಳೆಯ ಆಟೋರಿಕ್ಷಾಗಳ ಭೌತಿಕ ಸಾಮರ್ಥ್ಯ (ಫಿಟ್‌ನೆಸ್‌) ಎಮಿಷನ್‌ ಮೊದಲಾದ ಮಾನದಂಡಗಳನ್ನು ಪರಿಶೀಲಿಸಿ ಒಂದು ಬಾರಿ ರಹದಾರಿ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು.

50 ರೂ.ಗೆ ಏರಿಸಲು ಆಟೋ ಚಾಲಕರ ಮನವಿ
2018ರ ಅಕ್ಟೋಬರ್‌ ತಿಂಗಳಲ್ಲಿ ಆಟೋಗಳ ಬಾಡಿಗೆ ದರ ನಿಗದಿಪಡಿಸಲಾಗಿತ್ತು. ಪೆಟ್ರೋಲ್‌ ಮತ್ತು ಎಲ್‌ಪಿಜಿ ದರಗಳಲ್ಲಿ ಏರಿಕೆ ಆಗಿರುವುದರಿಂದ ಕನಿಷ್ಟ ಬಾಡಿಗೆ ದರವನ್ನು ಪರಿಷ್ಕರಿಸಲು ಕೋರಿ ಆಟೋರಿಕ್ಷಾ ಚಾಲಕರ ಸಂಘದಿಂದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಈ ಮನವಿಗಳನ್ನು ಪರಿಶೀಲಿಸಿದ ಪ್ರಾಧಿಕಾರವು ವಿಸ್ತೃತವಾಗಿ ಚರ್ಚಿಸಿ ದರ ಪರಿಷ್ಕರಣೆಯ ನಿರ್ಧಾರ ಪ್ರಕಟಿಸಿದೆ.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ಪಾಲ್ಗೊಂಡಿದ್ದ ಆಟೋರಿಕ್ಷಾ ಚಾಲಕರ ಸಂಘದ ಎನ್‌.ಎನ್‌. ಇನಾಮದಾರ, ದೇವಾನಂದ ಜಗಾಪುರ, ಬಿ.ಎ.ಮುಧೋಳ ಸೇರಿದಂತೆ ಹಲವರು, ಕಳೆದ ಮೂರ್‍ನಾಲ್ಕು ವರ್ಷಗಳ ಅವಧಿಯಲ್ಲಿ ಪೆಟ್ರೋಲ್‌ ಹಾಗೂ ಎಲ್‌ಪಿಜಿ ದರಗಳಲ್ಲಿ ಏರಿಕೆಯಾಗಿದೆ. ಕನಿಷ್ಟ ಬಾಡಿಗೆ ದರವನ್ನು ಪ್ರತಿ 2 ಕಿಲೋ ಮೀಟರ್‌ಗೆ 50 ರೂ.ಗಳಂತೆ ನಿಗದಿಗೊಳಿಸಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.