ಐಎಸ್ಎಸ್ಎಫ್ ಶೂಟಿಂಗ್ ವಿಶ್ವಕಪ್: ಮೆಹುಲಿ-ತುಷಾರ್ ಜೋಡಿಗೆ ಚಿನ್ನ
Team Udayavani, Jul 13, 2022, 11:19 PM IST
ದಕ್ಷಿಣ ಕೊರಿಯಾ: ಐಎಸ್ಎಸ್ಎಫ್ ಶೂಟಿಂಗ್ ವಿಶ್ವಕಪ್ ಚಾಂಪಿಯನ್ಶಿಪ್ನಲ್ಲಿ ಭಾರತ ದ್ವಿತೀಯ ಬಂಗಾರಕ್ಕೆ ಗುರಿ ಇರಿಸಿದೆ. 10 ಮೀ. ಏರ್ ರೈಫಲ್ ಮಿಕ್ಸೆಡ್ ತಂಡ ಸ್ಪರ್ಧೆಯಲ್ಲಿ ಮೆಹುಲಿ ಘೋಷ್-ಶಾಹು ತುಷಾರ್ ಮಾನೆ ಸ್ವರ್ಣ ಸಂಭ್ರಮ ಆಚರಿಸಿದರು.
10 ಮೀ. ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಮತ್ತೊಂದು ಜೋಡಿಯಾದ ಪಲಕ್-ಶಿವ ನರ್ವಾಲ್ ಅವರಿಗೆ ಕಂಚಿನ ಪದಕ ಒಲಿಯಿತು.
ಮೆಹುಲಿ-ತುಷಾರ್ ಸೇರಿಕೊಂಡು ಹಂಗೇರಿಯ ಎಸ್ಟರ್ ಮೆಝರಸ್-ಇಸ್ತಾವಾನ್ ಪೆನ್ ವಿರುದ್ಧ 17-13 ಅಂತರದ ಗೆಲುವು ಸಾಧಿಸಿದರು. ಕಂಚಿನ ಪದಕ ಇಸ್ರೇಲ್ ಪಾಲಾಯಿತು.
ಇದು ಸೀನಿಯರ್ ವಿಭಾಗದಲ್ಲಿ ತುಷಾರ್ ಮಾನೆ ಜಯಿಸಿದ ಮೊದಲ ಚಿನ್ನದ ಪದಕ. ಹಾಗೆಯೇ ಮೆಹುಲಿ ಗೆದ್ದ ಎರಡನೇ ಬಂಗಾರ. 2019ರ ಕಠ್ಮಂಡು ಸೌತ್ ಏಷ್ಯನ್ ಗೇಮ್ಸ್ನಲ್ಲಿ ಮೊದಲ ಚಿನ್ನ ಜಯಿಸಿದ್ದರು.
ಏಕಪಕ್ಷೀಯ ಸ್ಪರ್ಧೆ
10 ಮೀ. ಏರ್ ಪಿಸ್ತೂಲ್ ಮಿಶ್ರ ಸ್ಪರ್ಧೆಯಲ್ಲಿ ಪಲಕ್-ಶಿವ ನರ್ವಾಲ್ ಕಜಾಕ್ಸ್ಥಾನದ ಐರಿನಾ ಲೋಕ್ಟಿಯೊನೋವಾ-ವಲೆರಿಯ್ ರಖೀ¾ಝಾನ್ ವಿರುದ್ಧ 16-0 ಅಂತರದ ಏಕಪಕ್ಷೀಯ ಗೆಲುವು ಸಾಧಿಸಿ ಕಂಚನ್ನು ತಮ್ಮದಾಗಿಸಿಕೊಂಡರು. ಬುಧವಾರದ ಈ ಸಾಧನೆಯಿಂದ ಭಾರತ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಏರಿದೆ (2 ಚಿನ್ನ, 1 ಕಂಚು). ಸರ್ಬಿಯಾ ಅಗ್ರಸ್ಥಾನದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್