ಪಿಎಸ್ಐ ಅಕ್ರಮ; ಬಂಧಿತ ಅಧಿಕಾರಿಗಳ ಮಂಪರು ಪರೀಕ್ಷೆ ಮಾಡಿ: ಸಿದ್ದರಾಮಯ್ಯ

'ಸಿದ್ದರಾಮೋತ್ಸವ' ಎಂದು ಹೆಸರು ಕೊಟ್ಟಿದ್ದು ಮಾಧ್ಯಮದವರು

Team Udayavani, Jul 14, 2022, 2:21 PM IST

siddanna-2

ಕಲಬುರಗಿ: ಪಿಎಸ್ಐ ಅಕ್ರಮದಲ್ಲಿ ಬಂಧನಕ್ಕೊಳಗಾಗಿರುವ ಹಿರಿಯ ಅಧಿಕಾರಿ ಅಮೃತಪೌಲ್ ಮತ್ತು ಡಿವೈಎಸ್ಪಿ ಶಾಂತಕುಮಾರ್ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಇದರಿಂದ ನಿಜವಾದ ಕಿಂಗ್ ಪಿನ್ ಯಾರೂ, ಅವರ ಪಾತ್ರವೇನು? ಮಂತ್ರಿಮಂಡಲದವರು ಯಾರು ಶಾಮೀಲಾಗಿದ್ದಾರೆ ಎಲ್ಲವೂ ಬಯಲಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಮಾನ ನಿಲ್ದಾಣದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ ಮಾತ್ರಕ್ಕೆ ಸರಕಾರದ ಕೆಲಸ ಮುಗಿಯುವುದಿಲ್ಲ.ಹಗರಣದ ಪ್ರಮುಖ ಪಾತ್ರಧಾರಿ ಸಿದ್ದರಾಮಯ್ಯ ಎಂದು ಅಶ್ವತ್ಥ ನಾರಾಯಣ ದೂರಿದ್ದಾರೆ ಎಂದು ಕೇಳಿದಾಗ, ಸಿಟ್ಟಿಗೆದ್ದ ಅವರು, ” ಅಲ್ಲಾರಿ..ನಾನು ಸಿಎಂ ಇದ್ದಾಗ, ಇವರು ವಿರೋಧ ಪಕ್ಷದಲ್ಲಿ ಇದ್ರಲ್ವಾ? ಅವರಿಗೆ ಆವಾಗ ಮಾತನಾಡಲು ಯಾರ್ರೀ ..ಬೇಡ ಅಂದಿದ್ರು..ಆವಾಗ ಆಯಪ್ಪ(ಅಶ್ವತ್ಥ ನಾರಾಯಣ) ಬಾಯಲ್ಲಿ ಕಡುಬು ಇಟ್ಟುಕೊಂಡಿದ್ರಾ… ಕಡುಬು ತಿನ್ನುತ್ತಿದ್ದರೇನ್ರಿ..” ಎಂದು ಪ್ರಶ್ನಿಸಿದರು.

ತಾವು ಮಾಡಿದ ಭ್ರಷ್ಟಾಚಾರನಾ ಮುಚ್ಚಿ ಹಾಕಿಕೊಳ್ಳಲಿಕ್ಕೆ ಇನ್ನೊಬ್ಬರ ಮೇಲೆ ಆರೋಪ ಮಾಡಿ ಸುಮ್ಮನಾದ್ರೆ ನಡೆಯೋದಿಲ್ಲ. ನಾಡಿನ ಜನ ನೋಡುತ್ತಿದ್ದಾರೆ. ಬಂಧಿತರ ಮಂಪರು ಪರೀಕ್ಷೆಯಾಗಬೇಕು. ಹಗರಣದಲ್ಲಿ ಯಾರು, ಯಾರೂ ಇದ್ದಾರೆ ಎಲ್ಲರ ಬಂಧನವಾಗಬೇಕು. ಈ ಬಂಧನವಾದವರೆಲ್ಲಾ ತುಂಬಾ ಚಿಕ್ಕವರು. ಇವರೆಲ್ಲದ ಹಿಂದಿನ ಮುಖಗಳು ಬಯಲಾಗಬೇಕು. ಆಗ ಇದು ಅಂತ್ಯಕ್ಕೆ ತಲುಪುತ್ತದೆ ಎಂದರು.

ಹುಟ್ಟಬ್ಬ ಯಾರಿಗೂ ನಡುಕ ಇಲ್ಲ
ನನ್ನ ಹುಟ್ಟಿದ ಹಬ್ಬಕ್ಕೆ ನಮ್ಮ ಪಕ್ಷದಲ್ಲಿ ಯಾಕ್ರಿ.. ನಡುಕ ಹುಟ್ಟುತ್ತೆ. ಅಂತಹದ್ದೇನೂ ಇಲ್ಲ. ನಮ್ಮವರಲ್ಲಿ ಯಾಕೆ ನಡುಕ ಬರ್ತದೆ. ಅದೇನಾದರೂ ಬರಬೇಕಿದ್ದರೆ ಬಿಜೆಪಿ ಮತ್ತು ವಿರೋಧ ಪಕ್ಷದಲ್ಲಿ. ಇದು ಸಿದ್ದರಾಮೋತ್ಸವ ಅಲ್ಲ. ಹಂಗಂತ ಹೆಸರು ಕೊಟ್ಟಿದ್ದು ಮಾಧ್ಯಮದವರು. ನಮ್ಮ ಪಕ್ಷದಲ್ಲಿ ಅಂತಹ ಹೆಸರು ಕೊಟ್ಟಿಲ್ಲ. 75 ವರ್ಷ ಆಗಿರೋದಿಕ್ಕೆ ನನ್ನ ಬೆಂಬಲಿಗರು ಉತ್ಸವ ಮಾಡುತ್ತಿದ್ದಾರೆ. ಅದಿಕ್ಕೆ ಬಿಜೆಪಿಯವರೆಗೆ ಭಯ ಶುರುವಾಗಿದೆ. ನಮ್ಮಲ್ಲೇನು ನಡುಕ ಇಲ್ಲ ಎಂದರು.

ಹಿಂದೆ ಯಡಿಯೂರಪ್ಪ ಮಾಡಿಕೊಂಡಿರಲಿಲ್ಲವಾ? ನಾನು ಹೋಗಿ ವಿಷ್ ಮಾಡಿ ಬರಲಿಲ್ಲವೇ? ಇದರಲ್ಲಿ ತುಂಬಾ ಸೂಕ್ಷ್ಮವಾಗಿ ಹುಡುಕುವಂತಹದ್ದೇನೂ ಇಲ್ಲ ಎಂದರು.

ಮಳೆ ಸರಕಾರ ಈಗಲಾದರೂ ಎಚ್ಚತ್ತುಕೊಳ್ಳಲಿ
ರಾಜ್ಯದಲ್ಲಿ ಮಳೆಯಿಂದ ಉಂಟಾಗುವ ಹಾನಿ ಮತ್ತು ಜನ ಸಂಕಷ್ಟದ ಕುರಿತು ಸರಕಾರ ಮೊದಲೇ ಎಚ್ಚೆತ್ತುಕೊಳ್ಳಬೇಕಿತ್ತು. ರೈತರು, ಜನರು ಸಂಕಷ್ಟಕ್ಕೆ ಸಿಲುಕಿದ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ. ಈಗಲೂ ಏನು ಮಿಂಚಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಜಿಲ್ಲೆಯಲ್ಲಿ ಇದ್ದು ಜನರ ನೋವುಗಳಿಗೆ ಸ್ಪಂದಿಸಲು ಸೂಚಿಸಬೇಕು. 2019ರ ಪರಿಹಾರ ಇನ್ನೂ ಜನರಿಗೆ ಸಿಕ್ಕಿಲ್ಲ. ಈಗ ಪುನಃ ನೆರೆಗೆ ಜನರ ಬದುಕು ಸಿಲುಕುತ್ತಿದೆ. ಕೂಡಲೇ ಸರಕಾರ ಜನರ ನೆರವಿಗೆ ಬರಬೇಕು ಎಂದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.