ರಾಜ್ಯಕ್ಕೆ ಬೇಕಿದೆ ಯೋಗಿ ಆಡಳಿತ ಮಾದರಿ ಸರಕಾರ: ಮುತಾಲಿಕ್
ಬಿಜೆಪಿಯನ್ನು ಹಿಂದೂ ಸಂಘಟನೆಗಳು ಬೆಂಬಲಿಸಿ ತಪ್ಪು ಮಾಡಿವೆ
Team Udayavani, Jul 14, 2022, 7:53 PM IST
ಹೊಸಪೇಟೆ: ಹಿಂದೂ ಸಮಾಜ ರಕ್ಷಣೆ ಮತ್ತು ದೇಶದ ಸುರಕ್ಷತೆಗಾಗಿ ರಾಜ್ಯದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಡಳಿತ ಮಾದರಿ ಸರ್ಕಾರ ಅಗತ್ಯವಿದೆ. ಇದಕ್ಕಾಗಿ 25 ಹಿಂದೂ ಮಠಾಧೀಶರು ಹೋರಾಟಕ್ಕೆ ಅಣಿಯಾಗುತ್ತಿದ್ದಾರೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಗುರುವಾರ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷವನ್ನು ಹಿಂದುಪರ ಸಂಘಟನೆಗಳು ಬೆಂಬಲಿಸಿ ತಪ್ಪು ಮಾಡಿವೆ. ಬಿಜೆಪಿ ಸರಕಾರದ ನಡೆಗಳಿಂದ ರಾಜ್ಯದ ಹಲವು ಮಠಾಧೀಶರು ಬೇಸರವಾಗಿದ್ದಾರೆ. ಮುಂದಿನ ದಿನಗಳಲ್ಲಿ 25 ಕ್ಕೂ ಹೆಚ್ಚು ಮಠಾಧೀಶರೇ ಚುನಾವಣೆಗೆ ಸ್ಪರ್ಧಿಸಿದರೂ ಅಚ್ಚರಿ ಪಡುವಂತಿಲ್ಲ ಎಂದರು.
ದೇಶದಲ್ಲಿಯೇ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ದನಗಳ ಸಂತೆಗೆ ಹೆಸರುವಾಸಿಯಾಗಿದೆ. ಸಾಕಷ್ಟು ಪ್ರಮಾಣದಲ್ಲಿ ದನಗಳು ಕಸಾಯಿ ಖಾನೆಗೆ ಹೋಗುತ್ತಿವೆ. ದನದ ಮಾಂಸ ರಫ್ತು ಆಗುತ್ತಿದೆ. ಜೊತೆಗೆ ರಾಜ್ಯದಲ್ಲಿಯೂ ಹಲವು ಭಾಗಗಳಲ್ಲಿ ಇಂತಹ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಿದೆ. ದನಗಳನ್ನು ಪ್ರಯಾಣಿಕರು ತೆರಳುವ ವಾಹನದಲ್ಲಿ ಸಾಗಿಸಲಾಗುತ್ತಿವೆ ಎಂದು ರಾಜ್ಯ ಬಿಜೆಪಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಹಿಂದೂಗಳ ಭಾವನೆ ಜೊತೆಗೆ ಆಟವಾಡುತ್ತಿದೆ. ರಾಜ್ಯದಲ್ಲಿ ಅನಧಿಕೃತವಾಗಿ 3 ಸಾವಿರಕ್ಕೂ ಅಧಿಕ ಕಸಾಯಿ ಖಾನೆಗಳಿವೆ. ಅವುಗಳನ್ನು ಬುಲ್ಡೋಜರ್ನಿಂದ ತೆರವುಗೊಳಿಸಬೇಕು, ಇಲ್ಲದಿದ್ದರೆ ಆ ಕೆಲಸ ನಾವು ಮಾಡಬೇಕಾಗುತ್ತದೆ ಎಂದು ಹರಿಹಾಯ್ದರು.
ಶ್ರೀರಾಮಸೇನೆ ಮುಖಂಡರಾದ ಸಂಜೀವ ಮರಡಿ, ಜಗದೀಶ್ ಕಮತಗಿ, ರವಿ ಬಡಿಗೇರ್, ಸೂರು ಬಂಗಾರು, ಅನೂಪ್ ಕುಮಾರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್