ಮಳೆಯ ಅಬ್ಬರಕ್ಕೆ ನೆಲಕಚ್ಚಿದ ಭತ್ತದ ಬೆಳೆ: ಮರು ಬಿತ್ತನೆಗೆ ಮುಂದಾದ ರೈತರು; ಬೀಜದ ಕೊರತೆ

ಸಬ್ಸಿಡಿ ದರದಲ್ಲಿ ಖರೀದಿಸಿದವರಿಗೆ ಮರು ಖರೀದಿಗೆ ಸಮಸ್ಯೆ;  ಹೆಚ್ಚುವರಿ ಬಿತ್ತನೆ ಬೀಜ ಪೂರೈಕೆಗೆ ರೈತರ ಆಗ್ರಹ

Team Udayavani, Jul 16, 2022, 7:35 AM IST

ಮಳೆಯ ಅಬ್ಬರಕ್ಕೆ ನೆಲಕಚ್ಚಿದ ಭತ್ತದ ಬೆಳೆ: ಮರು ಬಿತ್ತನೆಗೆ ಮುಂದಾದ ರೈತರು; ಬೀಜದ ಕೊರತೆ

ಕುಂದಾಪುರ/ ಕೋಟ: ಭಾರೀ ಮಳೆಯಿಂದಾಗಿ ಕರಾವಳಿಯಲ್ಲಿ ಅಪಾರ ಪ್ರಮಾಣದ ಭತ್ತದ ಬೆಳೆ ನಾಶವಾಗಿದೆ. ಗದ್ದೆಯಲ್ಲಿ ನೀರು ನಿಂತಿರುವ ಕಾರಣ ನಾಟಿ ಮಾಡಿರುವ ನೇಜಿ ಕೊಳೆತಿದೆ. ಬಿತ್ತನೆ ಮಾಡಿರುವಲ್ಲಿ ಮಳೆನೀರಿನೊಂದಿಗೆ ಕೊಚ್ಚಿಕೊಂಡು ಹೋಗಿ ಮುಂಗಾರು ಹಂಗಾಮಿನ ಬೆಳೆಯೇ ನಾಶವಾಗಿರುವುದರಿಂದ ರೈತರು ಮರು ಬಿತ್ತನೆಗೆ ಮುಂದಾಗಿದ್ದಾರೆ. ಆದರೆ ಬಿತ್ತನೆ ಬೀಜದ ಕೊರತೆ ತಲೆದೋರಿದೆ.

ಇಲಾಖೆಯ ಮಾಹಿತಿಯಂತೆ ಈವರೆಗೆ ಉಡುಪಿ ಜಿಲ್ಲೆಯಲ್ಲಿ 186 ಹೆಕ್ಟೇರ್‌, ದ.ಕ. ದಲ್ಲಿ 216.8 ಹೆಕ್ಟೇರ್‌ ಸೇರಿದಂತೆ ಒಟ್ಟು 402.8 ಹೆಕ್ಟೇರ್‌ ಪ್ರದೇಶದಲ್ಲಿ ಹಾನಿಯಾಗಿದೆ. ಹಾನಿಯ ಸಮೀಕ್ಷೆ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ನಷ್ಟದ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಅಂದಾಜಿನ ಪ್ರಕಾರ ಉಭಯ ಜಿಲ್ಲೆಗಳಲ್ಲಿ ಸಾವಿರ ಹೆಕ್ಟೇರ್‌ಗೂ ಮಿಕ್ಕಿ ಭತ್ತದ ಬೆಳೆ ನಾಶವಾಗಿದೆ.

ಉಡುಪಿಯಲ್ಲಿ 1,900 ಕ್ವಿಂ. ಬಿತ್ತನೆ ಬೀಜ ವಿತರಿಸಲಾಗಿದ್ದು, 13,526 ಹೆಕ್ಟೇರ್‌ ಬಿತ್ತನೆಯಾಗಿದೆ. ದ.ಕ.ದಲ್ಲಿ ಕೇವಲ 505 ಕ್ವಿಂ. ಬಿತ್ತನೆ ಬೀಜ ವಿತರಿಸಿದ್ದು, ಈವರೆಗೆ 1,500 ಹೆಕ್ಟೇರ್‌ ಬಿತ್ತನೆಯಾಗಿದ್ದು, ಆ. 15ರ ವರೆಗೂ ನಾಟಿ ಕಾರ್ಯ ನಡೆಯುತ್ತದೆ.

ಬಿತ್ತನೆ ಬೀಜ ಪೂರೈಸಲು ಆಗ್ರಹ
ಭಾರೀ ಮಳೆ, ನೆರೆಯಿಂದಾಗಿ ಹಾನಿಗೀ ಡಾಗಿರುವ ಭತ್ತದ ಗದ್ದೆಗಳಲ್ಲಿ ಮರು ಬಿತ್ತನೆಗೆ ರೈತರು ಮುಂದಾಗಿದ್ದು, ಬಿತ್ತನೆ ಬೀಜ ಲಭ್ಯವಾಗದೆ ತೊಂದರೆಯಾಗಿದೆ. ಈ ಬಗ್ಗೆ ಸರಕಾರ ಗಮನಿಸಿ ಅಗತ್ಯವಿರುವ ರೈತರಿಗೆ ಬಿತ್ತನೆ ಬೀಜ ನೀಡಬೇಕು ಎಂದು ರೈತ ಸಂಘದ ತ್ರಾಸಿ ವಲಯಾಧ್ಯಕ್ಷ ಶರತ್‌ ಕುಮಾರ್‌ ಶೆಟ್ಟಿ ಆಗ್ರಹಿಸಿದ್ದಾರೆ.

ಮರು ಖರೀದಿಗೆ ಸಮಸ್ಯೆ: ಕೃಷಿ ಇಲಾಖೆಯ ನಿಯಮದಂತೆ ಒಂದು ಪಹಣಿ ಪತ್ರದಲ್ಲಿ ಒಮ್ಮೆ ಬೀಜ ಖರೀದಿಸಿದರೆ 3 ವರ್ಷ ಖರೀದಿಸಲು ಸಾಧ್ಯವಿಲ್ಲ. ಈಗಾಗಲೇ ಬೀಜ ಖರೀದಿಸಿ ಬೆಳೆ ನಾಶವಾದವರಿಗೆ ಇಲಾಖೆಯಿಂದ ಮತ್ತೆ ಖರೀದಿ ಕಷ್ಟ. ಆದರೆ ವಿಶೇಷ ಪರಿಸ್ಥಿತಿಯೆಂದು ಪರಿಗಣಿಸಿ ಬೀಜಪೂರೈಸಬೇಕು ಎಂದು ರೈತರು ಮನವಿ ಮಾಡಿದ್ದಾರೆ.

ಮರುಬಿತ್ತನೆಗೆ ಎಂಒ4 ಸೂಕ್ತವಲ್ಲ
ರೈತರು ಮರು ಬಿತ್ತನೆಗೂ ಎಂಒ4ನ ಮೊರೆಹೊಗುತ್ತಿದ್ದಾರೆ. ಆದರೆ ಈ ತಳಿ ಕಟಾವಿಗೆ ಬರಲು ಕನಿಷ್ಠ 135 ರಿಂದ 140 ದಿನಗಳು ಬೇಕು. ಈಗಾಗಲೇ ಬಿತ್ತನೆ ಅವಧಿ ತಡವಾಗಿರುವುದರಿಂದ ಇದನ್ನು ಬಳಸಿದಲ್ಲಿ ಕಟಾವು ಇನ್ನಷ್ಟು ತಡವಾಗಲಿದೆ. ಫಸಲು ಕಟ್ಟುವ ಸಮಯ ನೀರಿನ ಕೊರತೆ ಉಂಟಾಗಿ ಸಮಸ್ಯೆಯಾಗಬಹುದು. ಆದ್ದರಿಂದ ಜ್ಯೋತಿ, ಉಮಾ, ಎಂ-21 ಇತ್ಯಾದಿ ಅಲ್ಪಾವಧಿ ತಳಿಯ ಬೀಜ ಬಿತ್ತಿ ನಿಗದಿತ ಅವಧಿಯಲ್ಲಿ ಕಟಾವು ಕಾರ್ಯ ಕೈಗೊಳ್ಳಬಹುದು ಎನ್ನುತ್ತಾರೆ ಕೃಷಿ ವಿಜ್ಞಾನಿಗಳು.

ಉಡುಪಿಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ನಿರ್ವಹಣ ಸಭೆಯಲ್ಲಿ ಬೇಡಿಕೆಗೆ ತಕ್ಕಂತೆ ಸಬ್ಸಿಡಿ ದರದಲ್ಲಿ ತುರ್ತಾಗಿ ಬಿತ್ತನೆ ಬೀಜ ಪೂರೈಸಲು ಕೃಷಿ ಅಧಿಕಾರಿಗಳಿಗೆ ಸೂಚಿಸಿದ್ದೇನೆ.
– ಶೋಭಾ ಕರಂದ್ಲಾಜೆ, ಕೇಂದ್ರ ಸಚಿವೆ

ರೈತರ ಬೇಡಿಕೆಗೆ ತಕ್ಕಂತೆ ಬೀಜ ಪೂರೈಕೆಗೆ ಪ್ರಯತ್ನಿಸಲಾಗುವುದು. ಒಂದು ಆರ್‌ಟಿಸಿಯಲ್ಲಿ ಒಮ್ಮೆ ಖರೀದಿಸಿದವರಿಗೆ ಮತ್ತೊಮ್ಮೆ ಖರೀದಿಸಲು ಸಾಧ್ಯವಾಗದಿರುವ ಸಮಸ್ಯೆಯನ್ನು ಇಲಾಖೆಯ ಗಮನಕ್ಕೆ ತರಲಾಗುವುದು. ದ.ಕ.ದಲ್ಲಿ 300 ಕ್ವಿಂ., ಉಡುಪಿಯ ವಿವಿಧ ರೈತ ಸೇವಾ ಕೇಂದ್ರದಲ್ಲಿ ಸುಮಾರು 80 ಕ್ವಿಂ. ಬಿತ್ತನೆ ಬೀಜ ದಾಸ್ತಾನಿದೆ.
– ಕೆಂಪೇಗೌಡ / ಸೀತಾ
ಉಡುಪಿ / ದ.ಕ. ಜಂಟಿ ಕೃಷಿ ನಿರ್ದೇಶಕರು

-ಪ್ರಶಾಂತ್‌ ಪಾದೆ/
ರಾಜೇಶ್‌ ಗಾಣಿಗ ಅಚ್ಲಾಡಿ

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.