ಕಂಚಿನ ಮೂರ್ತಿಗೆ ಜೀವ ತುಂಬವ ಹನಗಂಡಿಯ ಲಾಳಕೆ ಕುಟುಂಬ

ದೇಶ ವಿದೇಶಗಳಿಗೂ ರವಾನೆಯಾದ ಹನಗಂಡಿ ಮೂರ್ತಿಗಳು

Team Udayavani, Jul 16, 2022, 11:25 AM IST

tdy-1

ರಬಕವಿ-ಬನಹಟ್ಟಿ: `ಕಲೆ’ ಎನ್ನುವುದು ಎಲ್ಲರಿಗೂ ಬರುವಂತದ್ದಲ್ಲಿ ಅದಕ್ಕೆ ತಾಳ್ಮೆ, ಸತತ ಪರಿಶ್ರಮ ಅತಿ ಮುಖ್ಯ. ಭಾರತಿಯ ಪರಂಪರೆಯಲ್ಲಿ ಹಿಂದೆ ರಾಜ ಮಹಾರಾಜರು ಕಲೆ ಅಪಾರವಾದ ಮನ್ನಣೆಯನ್ನು ಕೊಟ್ಟಿದ್ದರು. ಅದಕ್ಕೆ ಉದಾಹರಣೆಯನ್ನುವಂತೆ ನಮ್ಮ ಐಹೋಳೆ, ಪಟ್ಟದಕಲ್ಲು, ಬೇಲೂರು, ಹಳೇಬೀಡುಗಳಲ್ಲಿ ಕೆತ್ತಿರುವಂತ ಮೂರ್ತಿಗಳು ಇಂದಿಗೂ ಕಲೆಯನ್ನು ಜೀವಂತವಾಗಿಸಿವೆ. ಅಂತೆಯ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಹನಗಂಡಿ ಗ್ರಾಮ ಚಿಕ್ಕದಾದರು ಅನೇಕ ಕಲೆಗಾರರು, ಸಾವಯವ ಕೃಷಿಕರನ್ನು ನಾಡಿಗೆ ಪರಿಚಯಿಸಿಕೊಂಡಿರುವ ಗ್ರಾಮವಾಗಿದೆ.

ಅನಾದಿ ಕಾಲದಿಂದಲೂ ಕಂಚು ಹಾಗು ಹಿತ್ತಾಳೆಯಲ್ಲಿ ಕರಕುಶಲತೆ ನಿರ್ವಹಿಸುತ್ತಿರುವ ಹಣಗಂಡಿ ಗ್ರಾಮದ ಲಾಳಕೆ ಕುಟುಂಬ ಎಡಬಿಡದೆ ಕಾಯಕದಲ್ಲಿ ತೊಡಗಿ ಇದೀಗ ಇವರು ತಯಾರಿಸಿದ ಅದೇಷ್ಟೋ ಮೂರ್ತಿಗಳು ದೇಶ ವಿದೇಶಗಳಿಗೆ ರವಾನೆಯಾಗಿರುವುದು ವಿಶೇಷ.

ಕಂಚುಗಾರಿಕೆಯನ್ನೇ ಮೂಲ ಕಸುಬನ್ನಾಗಿಸಿಕೊಂಡಿರುವ ಹನಗಂಡಿ ಗ್ರಾಮದಲ್ಲಿ 10 ಕ್ಕೂ ಅಧಿಕ ಕುಟುಂಬಗಳು ಇದರಲ್ಲಿಯೇ ಮುಂದುವರೆದಿದ್ದಾರೆ. ಅದರಲ್ಲಿ ಲಾಳಕಿ ಕುಟುಂಬವು ಕಳೆದ ನಾಲ್ಕೈದು ತಲೆಮಾರುಗಳಿಂದ ಕರಕುಶಲ ವೃತ್ತಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಇಂದಿಗೂ ಕೂಡಾ ಮನೆಯ ಸುಮಾರು ಏಳೆಂಟು ಜನ ಇದರಲ್ಲಿಯೇ ಮುಂದವರೆದಿದ್ದಾರೆ.

ಮೊದಲು ತಾಳ, ಗಂಗಾಳ, ಜಾಂಗಟಿ, ತಾಬಾನಾ ತಯಾರಿಕೆ ಮಾಡತ್ತಿದ್ದ ಕುಟುಂಬ, ನಾಲ್ಕು ದಶಕಗಳಿಂದ ದೇವರ ಮೂರ್ತಿಗಳಿಂದ ಹಿಡಿದು ಮಹಾನುಭಾವರ ಪುತ್ಥಳಿ ತಯಾರಿಕೆ, ದೇವಾಲಯ ಬಾಗಿಲು ಚೌಕಟ್, ಕಳಶ, ಮೂರ್ತಿಗಳ ಕವಚದಲ್ಲೂ ಪ್ರಾವೀಣ್ಯತೆ ಪಡೆದಿರುವುದು ಗಮನಾರ್ಹವಾಗಿದೆ.

ವಿದೇಶದಲ್ಲಿ ಮಿಂಚಿದ ಮೂರ್ತಿಗಳು :

ಶಿವನ ಮೂರ್ತಿ ಸೇರಿದಂತೆ ವಿವಿಧ ಮೂರ್ತಿಗಳು ಅಮೆರಿಕಾ ಹಾಗು ಆಸ್ಟ್ರೇಲಿಯಾ ದೇಶಗಳಿಗೆ ವಾಸ ಮಾಡುವ ಸ್ವದೇಶಿಗರು ತೆಗೆದುಕೊಂಡು ಹೋಗಿದ್ದಾರೆ. ಇನ್ನೂ ಎಷ್ಟೋ ಮೂರ್ತಿಗಳು ರವಾನೆಯಾಗಿದ್ದು, ಗಮನಕ್ಕಿಲ್ಲ ಎನ್ನುತ್ತಾರೆ ಎಪ್ಪತ್ತೆರಡರ ಹಿರಿಯರಾದ ಈಶ್ವರ ಲಾಳಕಿ.

12.5 ಅಡಿ ಕಂಚಿನ ಮೂರ್ತಿ :

ಮೂರ್ತಿ ತಯಾರಿಯಲ್ಲಿ ಅತಿ ಹೆಚ್ಚಿನ ಎತ್ತರವೆಂದರೆ 12.5 ಅಡಿಯಷ್ಟು ಎತ್ತರದ ಸಂಗೋಳ್ಳಿ ರಾಯಣ್ಣನ ಮೂರ್ತಿ ತಯಾರಿಸಿದ್ದು, ಬಾಗಲಕೋಟೆ ಮುಧೋಳ ತಾಲೂಕಿನ ರೂಗಿ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹಾರೂಗೊಪ್ಪ ಗ್ರಾಮದಲ್ಲಿ ಪ್ರತಿಷ್ಠಾನಗೊಂಡಿವೆ. ಅಲ್ಲದೆ 6 ಅಡಿ ಎತ್ತರದ ಕನಕದಾಸ, ಮಹರ್ಷಿ ಭಗೀರಥ ಸೇರಿದಂತೆ ಅನೇಕ ಮೂರ್ತಿಗಳನ್ನು ನಿರ್ಮಾಣ ಮಾಡುವ ಮೂಲಕ ತಮ್ಮ ಕಲಾ ಕೌಶಲ್ಯದ ಸಿರಿವಂತಿಕೆಯನ್ನು ತೋರಿಸುವಲ್ಲಿ ಸೈ ಎನ್ನಿಸಿಕೊಂಡಿದ್ದು, ದಕ್ಷಿಣ ಭಾರತದ ಬಹುತೇಕ ರಾಜ್ಯಗಳಿಂದ ಜನರು ಹಣಗಂಡಿ ಗ್ರಾಮಕ್ಕೆ ಬಂದು ತಮಗೆ ಬೇಕಾದ ಮಾದರಿಯ ಮೂರ್ತಿಗಳನ್ನು ಮಾಡುವಂತೆ ಬೇಡಿಕೆ ಇಡುತ್ತಾರೆ. ಯಾವುದೇ ಮೂರ್ತಿ ಮಾಡಲು ಕಠಿಣವಾಗುವುದಿಲ್ಲವೆಂಬ ಮಾತು ಲಾಳಕೆ ಕುಟುಂಬದ್ದು. ಪೂರ್ತಿಯಾದ ಬಳಿಕ ಹಣ ಕೊಟ್ಟು ಮೂರ್ತಿಯನ್ನು ತೆಗೆದುಕೊಂಡು ಹೋಗುತ್ತಾರೆ.

ತಯಾರಿಸುವ ವಿಧಾನ:

ಮೊದಲು ಮಣ್ಣಿನಿಂದ ಸುಂದರವಾದ ಮೂರ್ತಿ ಮಾಡಿಕೊಳ್ಳುವ ಇವರು, ಅದಕ್ಕೆ ಬೇಕಾಗುವಷ್ಟು ಮಣ್ಣಿನ ಮೇಲೆ ಮೇಣವನ್ನು ಹಚ್ಚುತ್ತಾರೆ, ಮೂರು- ನಾಲ್ಕು ದಿನ ಬಿಟ್ಟು ಪಂಚಲೋಹವನ್ನು ದ್ರವರೂಪಕ್ಕೆ ಪರಿವರ್ತಿಸಿ ಅದಕ್ಕೆ ಸರಿ ಹೊಂದುವಂತೆ ಸರಿಯಾದ ಪ್ರಮಾಣದಲ್ಲಿ ಮೇಣಕ್ಕೆ ಅಂಟಿಕೊಳ್ಳುವ ಹಾಗೆ ಹಾಕುತ್ತಾರೆ. ಇದರಲ್ಲಿ ಸ್ವಲ್ಪ ಹೆಚ್ಚುಕಮ್ಮಿಯಾಗದಂತೆ ಇದನ್ನು ಬಹಳ ಜಾಗರೂಕತೆಯಿಂದ ಮಾಡುತ್ತಾರೆ.

ತೊಂದರೆಯಾಗಲು ಕಾರಣ :

ನಾವು ಹಳೆಯ ಪದ್ದತಿಯನ್ನೇ ಅನುಸರಿಸಿ ಮೂರ್ತಿ ಮಾಡುವುದರಲ್ಲಿ ಸಂಪೂರ್ಣ ಶ್ರಮವಹಿಸುವುದರಿಂದ ತೊಂದರೆಯಾಗುತ್ತಿದ್ದು, ಈಗಿನ ನೂತನ ತಂತ್ರಜ್ಞಾನ ಅಳವಡಿಸಿಕೊಂಡರೆ ಕೇವಲ ಒಂದೇ ಒಂದು ದಿನದಲ್ಲಿ ಮೂರ್ತಿ ತಯಾರಿಸಬಹುದು. ಹೆಚ್ಚು ಬಂಡವಾಳ ಹೂಡಿ ಹೊಸ ತಂತ್ರಜ್ಞಾನ ಅಳವಡಿಸುವ ಸಾಮರ್ಥ್ಯ ನಮ್ಮಲ್ಲಿಲ್ಲದ ಕಾರಣ ನಾವು ಹಳೆ ಪದ್ದತಿಯನ್ನೇ ಅನುಸರಿಸಿಕೊಂಡು ಹೊರಟಿದ್ದೇವೆ. ಇದರಿಂದ ನಾವು ಶ್ರಮವಹಿಸಬೇಕಾಗಿದೆ ಜೊತೆಗೆ ಸರ್ಕಾರಗಳು ನಮ್ಮಂತಹ ಕಲಾವಿದರಿಗೆ ಸೂಕ್ತ ಆರ್ಥಿಕ ನೆರವೂ ನೀಡಬೇಕಿದೆ ಎನ್ನುತ್ತಾರೆ ಲಾಳಕೆ ಕುಟುಂಬದವರು.

ಕಳೆದ ನಾಲ್ಕು ತಲೆಮಾರಿನಿಂದಲೂ ಇದೇ ಕಾಯಕವನ್ನು ಮಾಡುತ್ತಾ ಬಂದಿರುವ ಇವರು ತಮ್ಮ ಪೂರ್ವಜರು ಹಾಕಿಕೊಟ್ಟ ಈ ಕಲೆಯನ್ನು ಉಳಿಸಿ ಬೆಳೆಸಿಕೊಂಡು ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುವತ್ತ ಗಮನ ಹರಿಸಿದ್ದು ಆ ನಿಟ್ಟಿನಲ್ಲಿ ಸರ್ಕಾರ ಇಂತಹ ಅಪರೂಪದ ವಿಶೇಷ ಕಲಾಕಾರರನ್ನು ಗುರುತಿಸಿಸುವುದರ ಜೊತೆಗೆ ಅವರ ಆರ್ಥಿಕ ಮಟ್ಟವನ್ನು ಹೆಚ್ಚಿಸಲು ಸರ್ಕಾರ ಅಗತ್ಯ ಪ್ರೋತ್ಸಾಹವನ್ನು ನೀಡುವುದು ಅವಶ್ಯವಾಗಿದೆ.

-ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.