ಪೊಲೀಸರೆಡೆಗೆ ಮಚ್ಚು ಬೀಸಿ ಕೊಲೆ ಆರೋಪಿಯ ಎಸ್ಕೇಪ್ ಯತ್ನ: ಪೊಲೀಸರಿಂದ ಗುಂಡಿನ ದಾಳಿ
Team Udayavani, Jul 16, 2022, 12:06 PM IST
ಕಲಬುರಗಿ: ಶಹಬಾದ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ವಿಜಯನನ್ನು ಸ್ಥಳ ಮಹಜರು ಮಾಡಲು ಹೋದಾಗ ಆತ ಪರಾರಿಯಾಗಲು ಯತ್ನಿಸಿದ್ದು, ಕೂಡಲೇ ಎಚ್ಚೆತ್ತ ಪೊಲೀಸರು ಫೈರಿಂಗ್ ಮಾಡಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಈ ವೇಳೆ ಆರೋಪಿಯ ಕಾಲು ಮತ್ತು ತಲೆಗೆ ಗಾಯವಾಗಿದ್ದು, ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಶಹಬಾದ್ ಪಟ್ಟಣದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಪಿಎಸ್ಐ ಸುವರ್ಣಾ ಮಲಶೆಟ್ಟಿ ಅವರಿಗೆ ಗಾಯಗಳಾಗಿವೆ. ಅವರನ್ನು ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ವಿವರ: ಜುಲೈ 11ರಂದು ಶಹಬಾದ್ ಪಟ್ಟಣದಲ್ಲಿ ಕಾಂಗ್ರೆಸ್ ಮುಖಂಡ ಗಿರೀಶ ಕಂಬಾನೂರ ಕೊಲೆಯಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ವಿಜಯನನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದರು. ಕೊಲೆಗೆ ಬಳಸಿದ ಮಾರಕಾಸ್ತ್ರಗಳನ್ನು ಬಿಸಾಡಿದ್ದ ಸ್ಥಳದ ಮಹಜರು ನಡೆಸಲು ಶನಿವಾರ ಬೆಳಗ್ಗೆ ಕರೆದೊಯ್ಯಲಾಗಿತ್ತು.
ಇದನ್ನೂ ಓದಿ:ಸರ್ಕಾರಿ ನೌಕರ 2ನೇ ವಿವಾಹವಾಗಲು ಅನುಮತಿ ಕಡ್ಡಾಯ: ಬಿಹಾರ ಸರ್ಕಾರದ ಅಧಿಸೂಚನೆಯಲ್ಲೇನಿದೆ?
ತನಿಖಾಧಿಕಾರಿ ಪ್ರಕಾಶ ಯಾತನೂರ ಮತ್ತು ಪಿಎಸ್ಐ ಸುವರ್ಣಾ ಅವರಿಗೆ ತಾನು ಬಿಸಾಡಿದ ಮಚ್ಚು ತೋರಿಸಿದ ಆರೋಪಿ, ಅದೇ ಮಚ್ಚಿನಿಂದ ಪಿಎಸ್ಐ ಸುವರ್ಣಾ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ತನಿಖಾಧಿಕಾರಿ ಚಿತ್ತಾಪುರ ಸಿಪಿಐ ಪ್ರಕಾಶ ಯಾತನೂರ ಗಾಳಿಯಲ್ಲಿ ಒಂದು ಸುತ್ತು ಗುಂಡು ಹಾರಿಸಿ ಶರಣಾಗುವಂತೆ ಹೇಳಿದ್ದಾರೆ. ಆದರೂ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಈ ವೇಳೆ ಆರೋಪಿಯ ಬಲಗಾಲಿಗೆ ಒಂದು ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿಜಯನ ವಿರುದ್ಧ ಒಟ್ಟು ಆರು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್ಡಿಐಎ ಧ್ಯೇಯ: ಜೆ.ಪಿ. ನಡ್ಡಾ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ