ಶಿರ್ವ: ವಿದ್ಯುತ್‌ ಕಡಿತ ವಿರುದ್ಧ ಮೆಸ್ಕಾಂ ಕಚೇರಿಯ ಮುಂದೆ ಬಳಕೆದಾರರ ಆಕ್ರೋಶ


Team Udayavani, Jul 16, 2022, 1:52 PM IST

ಶಿರ್ವ: ವಿದ್ಯುತ್‌ ಕಡಿತ ವಿರುದ್ಧ ಮೆಸ್ಕಾಂ ಕಚೇರಿಯ ಮುಂದೆ ಬಳಕೆದಾರರ ಆಕ್ರೋಶ

ಶಿರ್ವ: ಮೆಸ್ಕಾಂ ಇಲಾಖೆಯ ಶಿರ್ವ ವ್ಯಾಪ್ತಿಯಲ್ಲಿ ಕಳೆದ 7-8 ತಿಂಗಳಿನಿಂದ ನಿರಂತರವಾಗಿ ಅನಿಯಮಿತ ವಿದ್ಯುತ್‌ಕಡಿತ ಮತ್ತು ಶಿರ್ವ ಮೆಸ್ಕಾಂ ಕಚೇರಿಯಲ್ಲಿನ ಸಿಬಂದಿ ಕೊರತೆ ಸಮಸ್ಯೆಯನ್ನು ಪ್ರತಿಭಟಿಸಿ ಜು.16 ರಂದು ಬೆಳಿಗ್ಗೆ ಶಿರ್ವ ಮೆಸ್ಕಾಂ ಕಚೇರಿಯ ಮುಂದೆ ಬಳಕ ದಾರರ ಬೃಹತ್‌ ಪ್ರತಿಭಟನೆ ನಡೆಯಿತು.

ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌.ಪಾಟ್ಕರ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಅನಿಯಮಿತವಾಗಿ ಹಗಲು ರಾತ್ರಿ ವಿದ್ಯುತ್‌ ಕಡಿತವಾಗುತ್ತಿರುವುದರಿಂದ ಬಳಕೆದಾರರು ರೋಸಿ ಹೋಗಿದ್ದು ,ದಿನದ 24 ಗಂಟೆ ನಿಯಮಿತವಾಗಿ ವಿದ್ಯುತ್‌ ಸರಬರಾಜು ಮಾಡಬೇಕು. ಮೆಸ್ಕಾಂ ಕಚೇರಿಯಲ್ಲಿ 35 ಸಿಬಂದಿ ಇರುವಲ್ಲಿ ಕೇವಲ 13 ಸಿಬಂದಿ ಕಾರ್ಯನಿರ್ವಹಿಸುತ್ತಿದ್ದು ಕನಿಷ್ಠ 25 ಸಿಬಂದಿ ನೇಮಕ ಮಾಡಬೇಕು. 50 ವರ್ಷ ಹಳೆಯ ಜೋತಾಡುತ್ತಿರುವ ತಂತಿಗಳನ್ನು ಬದಲಾಯಿಸಲು ಕೃಮ ಕೈಗೊಳ್ಳಬೇಕು. ಮೆಸ್ಕಾಂ ವ್ಯಾಪ್ತಿಯ ಗ್ರಾಮೀಣ ಪ್ರದೇಶದಲ್ಲಿ ಮರಗಿಡಗಳ ನಡುವೆ ತಂತಿಗಳು ಹಾದುಹೋಗುತ್ತಿದ್ದು ಮರದ ಕೊಂಬೆಗಳನ್ನು  ಕಡಿಯುವ ಬಗ್ಗೆ ಕ್ರಮ ಕೈಗೋಳ್ಳಬೇಕು, ಪದೇಪದೇ ತಲೆದೋರುವ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಬೇಕು ಮೊದಲಾದ ಬೇಡಿಕೆಗಳ ಮನವಿಯನ್ನು ಉಡುಪಿ ಮೆಸ್ಕಾಂನ ಕಾರ್ಯನಿರ್ವಾಹಕ ಎಂಜಿನಿಯರ್‌ ಪ್ರಸನ್ನ ಕುಮಾರ್‌ ಅವರಿಗೆ ಸಲ್ಲಿಸಿದರು.

ಬಳಕೆದಾರರ ಪರವಾಗಿ ಉಡುಪಿ ಜಿಲ್ಲಾ ಕೃಷಿಕ ಸಂಘದ ಅಧ್ಯಕ್ಷ ಬಂಟಕಲ್ಲು ರಾಮಕೃಷ್ಣ ಶರ್ಮ ಮಾತನಾಡಿ ಬಳಕೆದಾರರು ಭೀಕರ ವಿದ್ಯುತ್‌ ಸಮಸ್ಯೆಗಳನ್ನು ಎದುರಿಸುತ್ತಿದ್ದು ಅದನ್ನು ಪರಿಹರಿಸುವ ವ್ಯವಸ್ಥೆಯಾಗಬೇಕು ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

ಮಹಿಳಾ ಬಳಕೆದಾರರ ಪರವಾಗಿ ಮಾಜಿ ತಾ.ಪಂ. ಸದಸ್ಯೆ ಗೀತಾ ವಾಗ್ಲೆ ಮಾತನಾಡಿ, ವಿದ್ಯುತ್‌ ಕಡಿತದ ನೇರ ಪರಿಣಾಮ ಮಹಿಳೆಯರಿಗಾಗುತ್ತಿದ್ದು,ಮಕ್ಕಳು ಮನೆಮಂದಿಯನ್ನು ಸುಧಾರಿಸಲು ಕಷ್ಟವಾಗುತ್ತಿದೆ.ಯಾರ ಮಾತಿಗೂ ಸ್ಪಂದನೆ ನೀಡದ ಅಧಿಕಾರಿಗಳು ಮುಂದೆ ಇದೇ ರೀತಿ ವಿದ್ಯುತ್‌ ಸಮಸ್ಯೆಯಿಂದ ಗೋಳಾಡಿಸಿದರೆ ಮನೆಮಂದಿ ಮಕ್ಕಳೊಂದಿಗೆ ಬಂದು ಮಹಿಳೆಯರು ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಮನವಿ ಸ್ವೀಕರಿಸಿದ ಉಡುಪಿ ಮೆಸ್ಕಾಂನ ಕಾರ್ಯ ನಿರ್ವಾಹಕ ಎಂಜಿನಿಯರ್‌ ಪ್ರಸನ್ನ ಕುಮಾರ್‌ ಮಾತನಾಡಿ ಶಿರ್ವ ಮೆಸ್ಕಾಂ ವ್ಯಾಪ್ತಿ ಮರಗಿಡಗಳ ಕಾಡು ಪ್ರದೇಶವಾಗಿದ್ದು,ಗಾಳಿ ಮಳೆ ಬಂದಾಗ ಮರದ ಕೊಂಬೆಗಳು ತಂತಿಯ ಮೇಲೆ ಬಿದ್ದಾಗ ಅಡಚಣೆ ಉಂಟಾಗುತ್ತದೆ.ಸಿಬಂದಿ ಕೊರತೆಯಿಂದ ಸಮಸ್ಯೆ ಉಂಟಾಗಿದ್ದು ಹೆಚ್ಚುವರಿಯಾಗಿ 2 ಸಿಬಂದಿ ನೇಮಕ ಮಾಡಿದ್ದು ಸಮಸ್ಯೆ ಪರಿಹರಿಸಲು ಪ್ರಯತ್ನಿಸಲಾಗುವುದು. ಶಿರ್ವ ಗ್ರಾ.ಪಂ. ವ್ಯಾಪ್ತಿಗೆ 11 ಕೆವಿ ಶಿರ್ವ, 11 ಕೆವಿ ಮುದರಂಗಡಿ ಮತ್ತು 11 ಕೆವಿ ಬಂಟಕಲ್ಲು ಸೇರಿ 3 ಫೀಡರ್‌ಗಳು ಬರುತಿದ್ದು, ಹೆಚ್ಚುವರಿಯಾಗಿ 11 ಕೆವಿ ಮಟ್ಟಾರು ಫೀಡರ್‌ಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಎರಡು ತಿಂಗಳಲ್ಲಿ ಬರಲಿದೆ. ಬೆಳಪು 110 ಕೆವಿ ಪವರ್‌ ಸ್ಟೇಷನ್‌ ಆದ ಬಳಿಕ ಶಿರ್ವಕ್ಕೆ  ಮುಂದಿನ 6 ತಿಂಗಳಲ್ಲಿ ನಿರಂತರ ವಿದ್ಯುತ್‌ ಪೂರೈಕೆಯಾಗಲಿದೆ. ತಾಂತ್ರಿಕ ತೊಂದರೆಯಿರುವ ಕಂಡಕ್ಟರ್‌ ಮತ್ತು ಇನ್ಸುಲೇಟರ್‌ಗಳನ್ನು ಬದಲಾಯಿಸಿ ಮುಂದಿನ 15 ದಿನಗಳಲ್ಲಿ ವಿದ್ಯುತ್‌ ಸಮಸ್ಯೆ ಪರಿಹರಿಸುವುದಾಗಿ ಪ್ರತಿಭಟನಾಕಾರರಿಗೆ ಭರವಸೆ ನೀಡಿದರು. ಕಾಪು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಹರೀಶ್‌ ಕುಮಾರ್‌,ಶಿರ್ವ ಸೆಕ್ಷನ್‌ ಆಫೀಸರ್‌ ಕೃಷ್ಣ, ಉಪಸ್ಥಿತರದ್ದರು.

ಪ್ರತಿಭಟನೆಯಲ್ಲಿ ಶಿರ್ವ ಗ್ರಾ.ಪಂ. ಸದಸ್ಯರಾದ ರತನ್‌ ಶೆಟ್ಟಿ,ಡೋಲ್ಪಿ ಕ್ಯಾಸ್ತಲಿನೋ, ಶ್ರೀನಿವಾಸ ಶೆಣೈ,ವಿಲ್ಸನ್‌ ರೊಡ್ರಿಗಸ್‌,ಸವಿತಾ, ಮಾಜಿ ಗ್ರಾ.ಪಂ. ಆಧ್ಯಕೆ ವಾರಿಜಾ ಪೂಜಾರ್ತಿ, ನಿವೃತ್ತ ಉಪನ್ಯಾಸಕಿ ಶಾರದಾ ಎಂ., ಉದ್ಯಮಿ ಸುಧೀರ್‌ ಶೆಟ್ಟಿ, ರಾಜೇಶ್‌ ನಾಯ್ಕ, ಗಿರಿಧರ ಪ್ರಭು, ವೀರೇಂದ್ರ ಶೆಟ್ಟಿ, ವೀರೆಂದ್ರ ಪಾಟ್ಕರ್‌, ಬೆಳ್ಳೆ ಗ್ರಾ.ಪಂ. ಸದಸ್ಯ ಶಶಿಧರ ವಾಗ್ಲೆ, ಸ್ಟೀಫನ್‌ ಲೋಬೋ, ಆಶ್ಪಾಕ್‌ ಅಹಮದ್‌,ಹಸನ್‌ ಇಬ್ರಾಹಿಂ,ಕೋಡು ಸದಾನಂದ ಶೆಟ್ಟಿ,ನವೀನ್‌ ಶೆಟ್ಟಿ ಗಂಗೆಜಾರು,ಶಿರ್ವ ಕಾರು ಮತ್ತು ಟೆಂಪೋ ಚಾಲಕರ ಮಾಲಕರ ಸಂಘದ ಸದಸ್ಯರು, ರಿಕ್ಷಾ ಚಾಲಕರ ಮಾಲಕರ ಸಂಘದ ಸದಸ್ಯರು, ಶಿರ್ವ ಟೈಲರ್ ಎಸೋಸಿಯೇಶನ್‌ ನ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಸದಸ್ಯರು,ವಿದ್ಯುತ್‌ ಬಳಕೆದಾರರು ಭಾಗವಹಿಸಿದ್ದರು.

 -ಸತೀಶ್ಚಂದ್ರ ಶೆಟ್ಟಿ ಶಿರ್ವ  


ಟಾಪ್ ನ್ಯೂಸ್

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.