ಜೈಲು ಅಕ್ರಮ ತಡೆಯಲು ಬಾಡಿವೋರ್ನ್ ಕೆಮರಾ

ವಾರ್ಡನ್‌, ಕಾನ್‌ಸ್ಟೆಬಲ್‌ ನಿಂದ ಪಿಐವರೆಗಿನ ಅಧಿಕಾರಿ-ಸಿಬಂದಿಗೆ ಕಡ್ಡಾಯ

Team Udayavani, Jul 17, 2022, 7:25 AM IST

thumb 2 police

ಬೆಂಗಳೂರು: ಜೈಲುಗಳಲ್ಲಿ ಪಾರದರ್ಶಕತೆ ತರಲು ರಾಜ್ಯ ಕಾರಾಗೃಹ ಹಾಗೂ ಸುಧಾರಣ ಇಲಾಖೆ ಮುಂದಾಗಿದ್ದು, ಸಂಚಾರ ಪೊಲೀಸರ ಮಾದರಿಯಲ್ಲಿಯೇ ಜೈಲು ಸಿಬಂದಿಗೂ “ಬಾಡಿವೋರ್ನ್’ ಕೆಮರಾ ನೀಡಿದೆ.

ಜೈಲುಗಳಲ್ಲಿ ಅಧಿಕಾರಿ-ಸಿಬಂದಿಯಿಂದಲೇ ಕೈದಿಗಳ ಮೇಲೆ ದೌರ್ಜನ್ಯ, ಹಲ್ಲೆ ಮಾತ್ರವಲ್ಲದೆ, ಮೊಬೈಲ್‌, ಸಿಗರೇಟ್‌, ಮದ್ಯ, ಮಾದಕ ವಸ್ತುಗಳು ಪೂರೈಕೆ ಮಾಡಲಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಎಂಟು ಕೇಂದ್ರ ಕಾರಾಗೃಹಗಳು ಮತ್ತು ಒಂದು ಜಿಲ್ಲಾ ಕಾರಾಗೃಹದ ಸಿಬಂದಿಗೆ ಒಟ್ಟು 95 ಬಾಡಿವೋರ್ನ್ ಕೆಮರಾ ಕೊಡಲಾಗಿದೆ.

ಬೆಂಗಳೂರು ಪರಪ್ಪನ ಅಗ್ರಹಾರ ಕಾರಾಗೃಹ, ವಿಜಯಪುರ, ಧಾರವಾಡ, ಬೆಳಗಾವಿ, ಬಳ್ಳಾರಿ, ಶಿವಮೊಗ್ಗ, ಕಲಬುರಗಿ, ಮೈಸೂರು ಕೇಂದ್ರ ಕಾರಾಗೃಹ ಮತ್ತು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ  ಕೆಮರಾ ನೀಡಲಾಗಿದೆ ಎಂದು ಇಲಾಖೆ  ತಿಳಿಸಿದೆ.

ಇತ್ತೀಚಿನ ವರ್ಷಗಳಲ್ಲಿ ಜೈಲಿನಲ್ಲಿ ಡ್ರಗ್ಸ್‌, ಗುಟ್ಕಾ, ಮೊಬೈಲ್‌ ಬಳಕೆ ಹಾಗೂ ಇತರ ಅನೈತಿಕ ಚಟುವಟಿಕೆಗಳು ಸಾಮಾನ್ಯವಾಗಿವೆ. ಈ ಹಿನ್ನೆಲೆಯಲ್ಲಿ ಸಿಸಿಬಿ ಹಾಗೂ ಸ್ಥಳೀಯ ಪೊಲೀಸರು ದಾಳಿ ನಡೆಸಿದಾಗ ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದ್ದು, ಡ್ರಗ್ಸ್‌, ಮೊಬೈಲ್‌, ಗುಟ್ಕಾ ಜಪ್ತಿ ಮಾಡಿದ ಹಲವು ಉದಾಹರಣೆಗಳಿವೆ.

ಕೆಮರಾ ನಿರ್ವಹಣೆಗೆ ಪ್ರತ್ಯೇಕ ಘಟಕ
ಜೈಲು ವಾರ್ಡನ್‌, ಕಾನ್‌ಸ್ಟೆಬಲ್‌ರಿಂದ ಇನ್‌ಸ್ಪೆಕ್ಟರ್‌ ಹಂತದ ಅಧಿಕಾರಿ ಸಿಬಂದಿ ಕಡ್ಡಾಯವಾಗಿ ಕೆಮರಾ ಧರಿಸಬೇಕು.   ಬ್ಯಾರಕ್‌, ಅಡುಗೆ ಮನೆ, ಆರೋಗ್ಯ ಕೇಂದ್ರ ಸೇರಿ ಎಲ್ಲೆಡೆ ಹೋಗುವಾಗಲೂ  ಕಡ್ಡಾಯವಾಗಿ  ಕೆಮರಾ ಧರಿಸಿರಬೇಕು. ಉದ್ದೇಶಪೂರ್ವಕವಾಗಿ ಕ್ಯಾಮೆರಾ ಆಫ್ ಮಾಡುವುದು, ದಿಕ್ಕು ಬದಲಿಸುವುದು (ಶೌಚಾಲಯ ಹೊರತು ಪಡಿಸಿ) ಕಂಡು ಬಂದರೆ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ. ಈ ಕ್ಯಾಮೆರಾಗಳ ನಿರ್ವಹಣೆಗೆ ಆಯಾ ಜೈಲುಗಳಲ್ಲಿಯೇ ಪ್ರತ್ಯೇಕ ಘಟಕ ಸ್ಥಾಪಿಸಲಾಗಿದ್ದು, ಸಿಬಂದಿ ನಿಯೋಜಿಸಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಒಂದು ವರ್ಷದಲ್ಲಿ 5ಜಿ ಜಾಮರ್‌ ಅಳವಡಿಕೆ
ಈಗಾಗಲೇ ಜೈಲುಗಳಲ್ಲಿ 2ಜಿ ಜಾಮರ್‌ ಅಳವಡಿಸಲಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಎಲ್ಲರೂ 4 ಜಿಯಿಂದ 5 ಜಿ ನೆಟ್‌ವರ್ಕ್‌ ಮೊಬೈಲ್‌ ಬಳಕೆ ಮಾಡುತ್ತಿದ್ದಾರೆ.  ಹೀಗಾಗಿ ಮುಂದಿನ ಒಂದು ವರ್ಷದಲ್ಲಿ 5 ಜಿ ಜಾಮರ್‌ ಅಳವಡಿಸಲಾಗುತ್ತದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 5 ಸೇರಿ ರಾಜ್ಯದ ಎಲ್ಲ ಜೈಲುಗಳಲ್ಲಿ  5ಜಿ ಜಾಮರ್‌  ಅಳವಡಿಕೆ ಸರಕಾರ ಸೂಚಿಸಿದೆ ಎಂದು  ಅಧಿಕಾರಿಗಳು ತಿಳಿಸಿದ್ದಾರೆ.

 -ಮೋಹನ್‌ ಭದ್ರಾವತಿ

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.