ಜೋಗದಲ್ಲಿ ಮತ್ತದೇ ಜನ ಸಾಗರ; ಕೈ ಚೆಲ್ಲಿದ ಪೊಲೀಸರು!

10 ಸಾವಿರಕ್ಕೂ ಹೆಚ್ಚು ಜನ ಏಕಕಾಲದಲ್ಲಿ ಭೇಟಿ

Team Udayavani, Jul 17, 2022, 7:02 PM IST

1-ssddsad

ಸಾಗರ: ಒಂದೆಡೆ ಜೋಗದ ಮೈಸೂರು ಬಂಗ್ಲೋ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಹಾಗೂ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಪ್ರವಾಸಿಗರ ಕಾರಣ ತಾಲೂಕಿನ ಜಗತ್ಪ್ರಸಿದ್ಧ ಜೋಗದಲ್ಲಿ ನಿಯಂತ್ರಣ ವ್ಯವಸ್ಥೆ ಸಂಪೂರ್ಣವಾಗಿ ಪೊಲೀಸರ ಕೈಯಿಂದ ಜಾರಿದ ಘಟನೆಗೆ ಭಾನುವಾರ ಸಾಕ್ಷಿಯಾಯಿತು.

10 ಸಾವಿರಕ್ಕೂ ಹೆಚ್ಚು ಜನ ಭೇಟಿ ಇತ್ತ ಹಿನ್ನೆಲೆಯಲ್ಲಿ ಕಾಮಗಾರಿ ನಡೆದಿರುವ ಗೇಟ್ ಒಳಗಿನ ಪ್ರದೇಶದಲ್ಲಿ ಪಾರ್ಕಿಂಗ್ ರದ್ದುಗೊಳಿಸಲಾಗಿತ್ತು. ಹಾಗಾಗಿ ಜನ ರಸ್ತೆಯ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಿದ್ದರಿಂದ ಟ್ರಾಫಿಕ್ ಜ್ಯಾಮ್ ಸಾಮಾನ್ಯವಾಗಿತ್ತು. ವಾಹನಗಳನ್ನು ತೆಗೆಯುವಾಗ ವಾಹನಗಳ ನಡುವೆ ಸಣ್ಣಪುಟ್ಟ ಢಿಕ್ಕಿಗಳಾಗಿ ಪ್ರವಾಸಿ ವಾಹನಗಳ ಚಾಲಕರು ಪರಸ್ಪರ ಮಾತಿನ ಚಕಮಕಿ ನಡೆಸುತ್ತಿದ್ದುದು ಸಾಮಾನ್ಯ ದೃಶ್ಯವಾಗಿತ್ತು.

ಈ ನಡುವೆಯೂ ಜೋಗ ಅಭಿವೃದ್ಧಿ ಪ್ರಾಧಿಕಾರದವರು ಜನರಿಂದ ಪ್ರವೇಶ ಶುಲ್ಕ ಸಂಗ್ರಹಿಸುತ್ತಿದ್ದು, ಸಂಜೆ ನಾಲ್ಕರ ವೇಳೆಗೆ ಟೋಲ್ ಸಂಗ್ರಹ ಎರಡು ಲಕ್ಷ ರೂ. ದಾಟಿತ್ತು ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ. ಜೋಗದಲ್ಲಿನ ಪ್ರವಾಸಿಗರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು ನಾಲ್ಕೆಂಟು ಜನ ಮಂಗಳಮುಖಿಯರು ಸ್ಥಳಕ್ಕೆ ಆಗಮಿಸಿದ್ದು, ಪ್ರವೇಶ ಶುಲ್ಕ ಪಾವತಿಸಿದವರೂ ಇವರಿಗೆ ಕೇಳಿದಷ್ಟು ಹಣ ಕೊಟ್ಟು ಜೋಗದ ವ್ಯೂ ಪಾಯಿಂಟ್‌ಗೆ ಹೋಗುವ ವಿಚಿತ್ರ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.

ಈ ನಡುವೆ ಬೆಳಗಿನಿಂದ ಮಳೆ ನಿಯಂತ್ರಣದಲ್ಲಿದ್ದುದರಿಂದ ದಿನದ ಬಹುಪಾಲು ಸಂದರ್ಭಗಳಲ್ಲಿ ಜಲಪಾತದ ದೃಶ್ಯ ಜನರಿಗೆ ಲಭ್ಯವಾಯಿತು. ಮಧ್ಯಾಹ್ನದ ನಂತರ ಹಲವು ಸಂದರ್ಭಗಳಲ್ಲಿ ಥಂಡಿ ವಾತಾವರಣದಿಂದ ಜಲಪಾತದ ನೋಟ ಜನರಿಗೆ ಲಭಿಸದೆ ನಿರಾಶರಾಗಬೇಕಾಯಿತು. ಜನರ ಒತ್ತಡದಿಂದ ಪರಿಸ್ಥಿತಿ ನಿಯಂತ್ರಿಸಲಾಗದ ಪೊಲೀಸರು ಕೈ ಚೆಲ್ಲಿ ಎಲ್ಲ ನಿಯಂತ್ರಣಗಳನ್ನು ತೆರವು ಮಾಡಬೇಕಾಯಿತು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.