ಸುಸೂತ್ರವಾಗಿ ನಡೆಯಲಿ ಸಂಸತ್‌ ಅಧಿವೇಶನ


Team Udayavani, Jul 18, 2022, 6:00 AM IST

ಸುಸೂತ್ರವಾಗಿ ನಡೆಯಲಿ ಸಂಸತ್‌ ಅಧಿವೇಶನ

ರಾಷ್ಟ್ರಪತಿ ಚುನಾವಣೆ ಜತೆಜತೆಗೇ ಸೋಮವಾರದಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗಲಿದೆ. ಕೇಂದ್ರ ಸರಕಾರ ಒಟ್ಟು 24 ಮಸೂದೆಗಳನ್ನು ಮುಂದಿಟ್ಟುಕೊಂಡಿದ್ದು, ಇವುಗಳ ಒಪ್ಪಿಗೆಗಾಗಿ ಪ್ರಯತ್ನ ನಡೆಸಲಿದೆ. ಅತ್ತ ವಿಪಕ್ಷಗಳು ಹಣದುಬ್ಬರ, ಆರ್ಥಿಕತೆ, ಅಗ್ನಿಪಥ ಯೋಜನೆ ಸೇರಿ ವಿವಿಧ ವಿಚಾರಗಳ ಬಗ್ಗೆ ಪ್ರಸ್ತಾಪಿಸಲು ಸಿದ್ಧತೆ ನಡೆಸಿವೆ.

ರಾಷ್ಟ್ರಪತಿ ಚುನಾವಣೆ ಆಯ್ಕೆ ವಿಚಾರವಾಗಿಯೇ ಈ ಅಧಿವೇಶನ ಅತ್ಯಂತ ಮಹತ್ವ ಪಡೆದಿದೆ. ಇದರ ಹಿಂದೆಯೇ ಸ್ಪೀಕರ್‌ ಓ ಬಿರ್ಲಾ ಅವರ ನೇತೃತ್ವದಲ್ಲಿ ರವಿವಾರ ಸರ್ವಪಕ್ಷಗಳ ಸಭೆ ನಡೆದಿದ್ದು, ಸುಸೂತ್ರವಾಗಿ ಸದನ ನಡೆಸುವ ಸಂಬಂಧ ವಿಪಕ್ಷಗಳ ಬೆಂಬಲ ಕೋರಿದ್ದಾರೆ. ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಷಿ ಅವರೂ ಈ ಸಭೆಯಲ್ಲಿ ಭಾಗಿಯಾಗಿ ವಿಪಕ್ಷಗಳ ಬೆಂಬಲ ಕೇಳಿದ್ದಾರೆ. ಹಾಗೆಯೇ ಸೋಮವಾರ ಶುರುವಾಗುವ ಈ ಅಧಿವೇಶನ ಆ. 12ರಂದು ಮುಕ್ತಾಯ ಕಾಣಲಿದೆ. ಆ. 6ರಂದು ಉಪರಾಷ್ಟ್ರಪತಿ ಚುನಾವಣೆಯೂ ನಡೆಯಲಿದ್ದು, ಮತ್ತಷ್ಟು ಮಹತ್ವ ಪಡೆದುಕೊಂಡಿದೆ. ಏಕೆಂದರೆ ಈ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರೇ ಮತದಾರರಾಗಿದ್ದಾರೆ.

ಈ ಬಾರಿ 18 ದಿನಗಳ ಕಲಾಪ ನಡೆಯಲಿದೆ. ಸಂಸತ್‌ನಲ್ಲಿ ಒಟ್ಟು 35 ಮಸೂದೆಗಳು ಅಂಗೀಕಾರಕ್ಕಾಗಿ ಬಾಕಿ ಉಳಿದಿವೆ. 24 ಹೊಸ ಮಸೂದೆಗಳನ್ನು ಈ ಬಾರಿಯ ಅಧಿವೇಶನದಲ್ಲಿ ತರಲು ಕೇಂದ್ರ ಸರಕಾರ ಮುಂದಾಗಿದೆ. ಇದರಲ್ಲಿ ಕೆಲವು ಮಸೂದೆಗಳು ಲೋಕ ಸಭೆಯಲ್ಲಿ ಒಪ್ಪಿಗೆ ಪಡೆದಿದ್ದು, ರಾಜ್ಯಸಭೆಯಲ್ಲಿ ಇನ್ನಷ್ಟು ಅಂಗೀಕಾರ ಪಡೆಯಬೇಕಾಗಿದೆ. ಈಗ ರಾಜ್ಯಸಭೆಯಲ್ಲಿ ಎನ್‌ಡಿಎ ಸದಸ್ಯರ ಬಲವೂ ಹೆಚ್ಚಾಗಿದ್ದು, ಒಪ್ಪಿಗೆಗಾಗಿ ಸರ್ವ ಪ್ರಯತ್ನ ನಡೆಸಿದೆ.

ಆ್ಯಂಟಿ ಮೆರಿಟೈಮ್‌ ಪೈರೆಸಿ ಮಸೂದೆ, ಇಂಡಿಯನ್‌ ಅಂಟಾರ್ಟಿಕ್‌ ಮಸೂದೆ, ದಿ ವೆಪನ್ಸ್‌ ಆಫ್ ಮಾಸ್‌ ಡಿಸ್ಟ್ರಕ್ಷನ್‌ ಆ್ಯಂಡ್‌ ದೇರ್‌ ಡಿಲೆವರಿ ಸಿಸ್ಟಮ್‌(ಅಕ್ರಮ ಚಟುವಟಿಕೆಗಳ ನಿಯಂತ್ರಣ) ಮಸೂದೆ, ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಯೋಗಕ್ಷೇಮ ಮಸೂದೆ,) ಸಂವಿಧಾನ (ಪರಿಶಿಷ್ಟ ಜಾತಿ ಮತ್ತು ಪಂಗಡಗಳ) ತಿದ್ದುಪಡಿ ಮಸೂದೆ, ರಾಷ್ಟ್ರೀಯ ಮಾದಕ ನಿಯಂತ್ರಣ ಮಸೂದೆ, ದಿ ವೈಲ್ಡ್‌ ಲೈಫ್(ರಕ್ಷಣ) ಮಸೂದೆ, ಅಂತರ ರಾಜ್ಯ ನದಿ ನೀರು ಸಮಸ್ಯೆಗಳ ಮಸೂದೆ, ದಿವಾಳಿ ಸಂಹಿತೆ ಮಸೂದೆ, ಮಲ್ಟಿ ಸ್ಟೇಟ್‌ ಕೋ – ಆಪರೇಟಿವ್‌ ಮಸೂದೆ, ದಿ ಕಾಂಪಟೇಶನ್‌ ಮಸೂದೆ, ದಿ ಕಾಫಿ ಮಸೂದೆ, ದಿ ಕಂಟೋನ್ಮೆಂಟ್‌ ಮಸೂದೆ, ದಿ ಟ್ರಾಫಿಕ್ಕಿಂಗ್‌ ಮಸೂದೆ ಸೇರಿ ಹಲವು ಬಿಲ್‌ಗ‌ಳಿಗೆ ಕೇಂದ್ರ ಒಪ್ಪಿಗೆ ಪಡೆಯುವ ಇರಾದೆ ಹೊಂದಿದೆ.

ಆದರೂ, ಅಧಿವೇಶನ ಆರಂಭಕ್ಕೂ ಮುನ್ನವೇ ಅಸಂಸದೀಯ ಪದಗಳ ಬಳಕೆ ನಿಷೇಧ ಮತ್ತು ಸಂಸತ್‌ ಒಳಗೆ ಪ್ರತಿಭಟನೆಗೆ ನಿರ್ಬಂಧ ವಿಚಾರಗಳು ಸಾಕಷ್ಟು ಸದ್ದು ಮಾಡಿವೆ. ಈ ನಿರ್ಧಾರಗಳ ವಿರುದ್ಧ ವಿಪಕ್ಷಗಳು ಸರಕಾರದ ವಿರುದ್ಧ ಮುಗಿಬಿದ್ದಿವೆ. ಹೀಗಾಗಿ ಸೋಮ ವಾರದಿಂದ ಶುರುವಾಗುವ ಅಧಿವೇಶನ ಒಂದಷ್ಟು ಸದ್ದು ಮಾಡುವ ಸಾಧ್ಯತೆಯಂತೂ ಇದ್ದೇ ಇದೆ. ಅಲ್ಲದೆ ಕಾಂಗ್ರೆಸ್‌ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ ಗಾಂಧಿ ವಿರುದ್ಧ ಇಡಿ ಸಮನ್ಸ್‌ ಕುರಿತಂತೆಯೂ ಪಕ್ಷ ಪ್ರಸ್ತಾಪಿಸುವ ಸಾಧ್ಯತೆ ಇದೆ. ಬೆಲೆ ಏರಿಕೆ, ರೂಪಾಯಿ ಮೌಲ್ಯ ಇಳಿಕೆ, ಆರ್ಥಿಕತೆ ಸೇರಿದಂತೆ ವಿವಿಧ ವಿಚಾರಗಳ ಸಂಬಂಧ ಸಂಸತ್‌ನಲ್ಲಿ ರಚನಾತ್ಮಕವಾಗಿ ಚರ್ಚೆ ನಡೆಯಲಿ.

ಟಾಪ್ ನ್ಯೂಸ್

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

Man of the match ಪ್ರಶಸ್ತಿ ಸಿಗಬೇಕಾಗಿದ್ದು ನನಗಲ್ಲ…: ಫಾಫ್ ಡುಪ್ಲೆಸಿಸ್ ಹೀಗಂದಿದ್ಯಾಕೆ?

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

ಕೆರೆ ಅಭಿವೃದ್ಧಿಗೆ ಒಮ್ಮೆಯೂ ತಲೆ ಎತ್ತಿ ನೋಡದ ಇಲಾಖೆ; ಆಟದ ಮೈದಾನದಂತಾದ ಬಾವದಕೆರೆ

1-24-sunday

Daily Horoscope: ವಿರಾಮ ಆಚರಣೆಯ ನಡುವೆ ಹೊಸ ಕಾರ್ಯಗಳ ಪ್ರಸ್ತಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

2-hunsur

Hunsur: ಹೆದ್ದಾರಿ ಸರ್ವೆ ಕಾರ್ಯ ತಡೆದು ರೈತರ ಆಕ್ರೋಶ

Man finds Rs 9,900 crore in his bank account

Bhadohi; ಯು.ಪಿ ವ್ಯಕ್ತಿಯ ಖಾತೆಗೆ ಬರೋಬ್ಬರಿ 9,900 ಕೋಟಿ ರೂ ಜಮೆ! ಆಗಿದ್ದೇನು?

Udupi Gitanjali Silk, Shantisagar Hotel founder Neere Bailur Govinda Naik passes away

Udupi ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

twin terror attacks in Jammu and Kashmir

Jammu and Kashmir ಉಗ್ರ ದಾಳಿ; ಮಾಜಿ ಸರಪಂಚ್ ಸಾವು, ಇಬ್ಬರು ಪ್ರವಾಸಿಗರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.