ಹೆಚ್ಚುತ್ತಿವೆ ಸಾಂಕ್ರಾಮಿಕ ರೋಗ; ಜಾಗ್ರತೆ ಇರಲಿ

6 ತಿಂಗಳಲ್ಲಿ 164 ಡೆಂಗ್ಯೂ ಜ್ವರ ಪ್ರಕರಣ ; ಜ್ವರದ ಲಕ್ಷಣ ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಲು ಸೂಚನೆ

Team Udayavani, Jul 18, 2022, 10:15 AM IST

1

ಪುತ್ತೂರು: ದಿನೇ ದಿನೆ ಮಳೆ ಪ್ರಮಾಣ ಹೆಚ್ಚಾಗುತ್ತಿರುವ ಜತೆಗೆ ಸಾಂಕ್ರಾಮಿಕ ರೋಗ ಬಾಧಿತರ ಸಂಖ್ಯೆಯೂ ವೃದ್ಧಿಯಾಗುತ್ತಿದೆ. ಒಟ್ಟಾರೆ ಕಳೆದ ಆರು ತಿಂಗಳಲ್ಲಿ ಜಿಲ್ಲೆಯಲ್ಲಿ 164 ಡೆಂಗ್ಯೂ ಜ್ವರ ಪ್ರಕರಣ ಪತ್ತೆಯಾಗಿದೆ.

ಬೆಳ್ತಂಗಡಿಯಲ್ಲಿ 60, ಮಂಗಳೂರು ನಗರದಲ್ಲಿ 40, ಪುತ್ತೂರಿನಲ್ಲಿ 6, ಸುಳ್ಯದಲ್ಲಿ 11 ಮತ್ತು ಬಂಟ್ವಾಳದಲ್ಲಿ 27 ಪ್ರಕರಣ ಗುರುತಿಸಲಾಗಿದೆ. 2019ರಲ್ಲಿ ಜಿಲ್ಲೆಯಲ್ಲಿ 1,539 ಡೆಂಗ್ಯೂ ಪ್ರಕರಣ ದಾಖಲಾಗಿತ್ತು. 2020ರಲ್ಲಿ 239, ಮತ್ತು 2021ರಲ್ಲಿ 290 ಪ್ರಕರಣ ದಾಖಲಾಗಿತ್ತು. ಈ ವರ್ಷ 6 ತಿಂಗಳಲ್ಲೇ 164 ವರದಿಯಾಗಿದೆ. ಇನ್ನೂ 3 ತಿಂಗಳು ಮಳೆಗಾಲವಿದ್ದು ರೋಗ ತಡೆಗಟ್ಟುವ ನಿಟ್ಟಿನಲ್ಲಿ ಎಚ್ಚರ ವಹಿಸಬೇಕಾದ ಅಗತ್ಯ ಇದೆ.

ತಾಲೂಕಿನ ಸರಕಾರಿ ಆಸ್ಪತ್ರೆಗಳಲ್ಲಿ ಜ್ವರ ಬಾಧಿತರ ಸಂಖ್ಯೆ ಭಾರೀ ಏರಿಕೆ ಕಂಡಿದೆ. ಬಿಸಿಲು ಮಳೆಯ ಕಣ್ಣು ಮುಚ್ಚಾಲೆಯಾಟ ಶೀತ, ಜ್ವರ ಸಹಿತ ಸಾಂಕ್ರಾಮಿಕ ಕಾಯಿಲೆಗಳ ಹೆಚ್ಚಳಕ್ಕೆ ಕಾರಣವಾಗಿದೆ. ಕುಟುಂಬದ ಓರ್ವ ಸದಸ್ಯನಿಗೆ ಜ್ವರ ಬಂದರೆ ಮನೆಯವರಿಗೆ ಹಬ್ಬುತ್ತಿದೆ. ವೈರಲ್‌ ಜ್ವರ 4 ದಿನಗಳಲ್ಲಿ ಗುಣವಾಗುವುದು ರೂಢಿಯಾದರೆ ಈ ವರ್ಷ 8ರಿಂದ 10 ದಿನಗಳ ಕಾಲ ಜ್ವರ ಇರುವುದು ಕಂಡು ಬರುತ್ತಿದೆ. ಹಿಂದೆ ವೈರಲ್‌ ಜ್ವರಕ್ಕೆ ಒಂದು ಬಾರಿ ಔಷಧ ತಂದರೆ ಕಡಿಮೆಯಾಗುತಿತ್ತು. ಈ ಬಾರಿ ಎರಡು, ಮೂರು ಬಾರಿ ಔಷಧ ತರಬೇಕಾದ ಸ್ಥಿತಿ ಇದೆ. ತಾಲೂಕು ಸರಕಾರಿ ಆಸ್ಪತ್ರೆಗಳು ಸೇರಿದಂತೆ ಖಾಸಗಿ ನರ್ಸಿಂಗ್‌ ಹೋಂಗಳು ಮತ್ತು ಕ್ಲಿನಿಕ್‌ಗಳಲ್ಲಿ ಜ್ವರದ ರೋಗಿಗಳ ಪ್ರಮಾಣ ಅತ್ಯಧಿಕವಾಗಿದೆ. ಇದು ಸಾಮಾನ್ಯ ವೈರಲ್‌ ಜ್ವರವೇ ಆಗಿದ್ದು, ಲಕ್ಷಣ ಕಂಡು ಬಂದ ತತ್‌ಕ್ಷಣ ವೈದ್ಯರ ಸಲಹೆ ಪಡೆಯಬೇಕು. ಬಿಸಿ ನೀರು, ಬಿಸಿ ಆಹಾರವನ್ನೇ ಸೇವಿಸಿ ವೈದ್ಯರ ಸಲಹೆಯಂತೆ ಔಷಧ ಪಡೆಯಬೇಕು ಎನ್ನುತ್ತಾರೆ ವೈದ್ಯರು.

ಮಲೇರಿಯಾ ಇಳಿಕೆ

ಕೆಲವು ವರ್ಷಗಳಿಂದ ಜಿಲ್ಲೆಯಲ್ಲಿ ಮಲೇರಿಯಾ ಜ್ವರ ಬಾಧಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ. 2019ರಲ್ಲಿ 2,797 ಪ್ರಕರಣಗಳು ದಾಖಲಾಗಿದ್ದರೆ, 2020ರಲ್ಲಿ 1,397 ಮಲೇರಿಯಾ ದಾಖಲಾಗಿತ್ತು. 2021ರಲ್ಲಿ 689ಕ್ಕೆ ಇಳಿದಿದ್ದು, ಈ ವರ್ಷ ಜನವರಿಯಿಂದ 96 ಪ್ರಕರಣ ದಾಖ ಲಾಗಿದೆ. ಮಲೇರಿಯಾ ಅತ್ಯಧಿಕವಿದ್ದ ಮಂಗಳೂರು ನಗರದಲ್ಲೇ ಈಗ ಇಳಿಮುಖವಾಗಿದೆ. ವಿಶೇಷ ಮಲೇರಿಯಾ ಸ್ವಯಂ ಸೇವಕರ ಜಾಗತಿಯು ಮಲೇರಿಯಾ ತಡೆಗಟ್ಟುವಲ್ಲಿ ಮಹತ್ವದ ಪಾತ್ರ ವಹಿಸಿದೆ.

ರೋಗ ಲಕ್ಷಣ ಪತ್ತೆಗಿಲ್ಲ ಲ್ಯಾಬ್‌

ಡೆಂಗ್ಯೂ ಜ್ವರದ ಆರಂಭಿಕ ರಕ್ತ ಪರೀಕ್ಷೆ ಯಾದ ಕಾರ್ಡ್‌ ಟೆಸ್ಟ್‌ ವ್ಯವಸ್ಥೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಲಭ್ಯವಿಲ್ಲದಿರುವುದರಿಂದ ಜ್ವರ ಪೀಡಿತರು ಖಾಸಗಿ ಆಸ್ಪತ್ರೆಗಳಲ್ಲಿ ಪರೀಕ್ಷೆ ಮಾಡಿಸಬೇಕಾಗಿದೆ. ಈ ಪರೀಕ್ಷೆಯ ವೆಚ್ಚ ಬಡವರಿಗೆ ಹೊರೆಯೂ ಆಗಿದೆ. ರೋಗದ ಇನ್ನಷ್ಟು ಮಾಹಿತಿ ಲಭ್ಯವಾಗಬೇಕಾದರೆ ಎಲಿಸಾ ಟೆಸ್ಟ್‌ ಮಾಡಲು ವೈದ್ಯರು ಸೂಚನೆ ನೀಡುತ್ತಾರೆ. ಹೀಗಾಗಿ ಜ್ವರಪೀಡಿತರಿಂದ ಸಂಗ್ರಹಿಸುವ ರಕ್ತವನ್ನು ಮಂಗಳೂರಿನ ಜಿಲ್ಲಾಸ್ಪತ್ರೆಗೆ ಕಳುಹಿಸಬೇಕು. ಡೆಂಗ್ಯೂ ಖಚಿತ ಪಡಿಸಲು ಮಾಡಲಾಗುವ ಮೂರು ಪರೀಕ್ಷೆಗೆ ತಾಲೂಕು ಆಸ್ಪತ್ರೆಯಲ್ಲಿ ಸೌಲಭ್ಯ ಇಲ್ಲ. ಹೀಗಾಗಿ ಫಲಿತಾಂಶ ಕೈ ಸೇರಲು ವಿಳಂಬವಾಗಿ ತತ್‌ಕ್ಷಣ ಔಷಧ ನೀಡಲು ಸಾಧ್ಯವಾಗುತ್ತಿಲ್ಲ.

ಆತಂಕ ಬೇಡ: ಈ ಬಾರಿ ಶಾಲಾ ಮಕ್ಕಳಲ್ಲಿ ವೈರಲ್‌ ಜ್ವರದ ಪ್ರಮಾಣ ಹೆಚ್ಚು ಕಂಡು ಬಂದಿದೆ. ಇದು ಸೂಕ್ತ ಚಿಕಿತ್ಸೆಯಿಂದ ನಿವಾರಣೆಯಾಗುತ್ತದೆ. ಆತಂಕಪಡುವ ಅಗತ್ಯ ಇಲ್ಲ. ಪುತ್ತೂರಿನಲ್ಲಿ 6 ಖಚಿತ ಡೆಂಗ್ಯೂ ಪ್ರಕರಣವಿದ್ದು, 77 ಶಂಕಿತ ಪ್ರಕರಣಗಳಿವೆ. –ಡಾ| ದೀಪಕ್‌ ರೈ ಆರೋಗ್ಯಾಧಿಕಾರಿ, ಪುತ್ತೂರು ತಾಲೂಕು

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.