ಔಷಧೀಯ ಗುಣದ …ಸಂಜೀವಿನಿಗೆ ಸಮನಾದ ವನಸ್ಪತಿ “ಅಮೃತ ಬಳ್ಳಿ”

ದುಬಾರಿ ಬೆಲೆ ನೀಡಿ ಖರೀದಿಸಿರೋದು ಉಂಟು. ಮಧುಮೇಹ ರೋಗಕ್ಕೂ ಸಹ ಔಷಧೀಯಾಗಿ ಉಪಯೋಗಿಸುತ್ತಾರೆ.

Team Udayavani, Jul 18, 2022, 12:32 PM IST

ಔಷಧೀಯ ಗುಣದ …ಸಂಜೀವಿನಿಗೆ ಸಮನಾದ ವನಸ್ಪತಿ “ಅಮೃತ ಬಳ್ಳಿ”

ಮನೆಯಂಗಳದಲ್ಲಿ ಸುಲಭವಾಗಿ ಬೆಳೆಸಬಹುದಾದ ಔಷಧೀಯ ಬಳ್ಳಿಯೇ ಅಮೃತ ಬಳ್ಳಿ. ಇದರಲ್ಲಿ ಎಲೆ, ಕಾಂಡ, ಬೇರು ಎಲ್ಲವೂ ಜೌಷಧೀಯ ಗುಣ ಹೊಂದಿದ್ದು. ಈ ಬಳ್ಳಿ ಕಹಿ ಹಾಗೂ ಒಗರು ರಸವನ್ನು ಹೊಂದಿರುತ್ತದೆ. ಈ ಬಳ್ಳಿಯು ಮರಗಳ ಮೇಲೆ ತೋಟದ ಬೇಲಿಗಳ ಮೇಲೆ ಹಬ್ಬಿರುತ್ತದೆ ಹಾಗೂ ಕಾಡುಗಳ ಪೊದೆಗಳ ಮೇಲೂ ಹಬ್ಬಿರುತ್ತದೆ. ಇದರ ಪತ್ರೆ ಹಸಿರು ಹಾಗೂ ಹೃದಯಾಕಾರವಾಗಿದ್ದು ಮೃದುಮಾಗಿರುತ್ತದೆ. ಆನೇಕ ಔಷಧೀಯ ಗುಣಗಳನ್ನು ಹೊಂದಿರುವ ಮತ್ತು ಯಾವುದೇ ಅಡ್ಡ ಪರಿಣಾಮ ಬೀರದೆ, ಎಲ್ಲಾ ಕಡೆ ಸುಲಭವಾಗಿ ದೊರಕುವ ಅಮೃತ ಬಳ್ಳಿ ಆಯುರ್ವೇದಲ್ಲಿ ಬಹು ಜನಪ್ರಿಯ ಔಷಧಿ. ಇಂದಿನ ದಿನಗಳಲ್ಲಿ ಬಹು ಬೇಡಿಕೆಯಾಗಿರುವುದರಿಂದ ಹೆಚ್ಚಾಗಿ ಬೆಳೆಯಲಾರಂಭಿಸಿದ್ದಾರೆ.

ಆಮೃತ ಬಳ್ಳಿಯ ಔಷಧೀಯ ಗುಣಗಳು:
ಆಯುರ್ವೇದ ವೈದ್ಯಶಾಸ್ತ್ರದಲ್ಲಿ ಸಂಜೀವಿನಿಗೆ ಸಮನಾದ ಒಂದು ವನಸ್ಪತಿ ಎಂದು ಪರಿಗಣಿಸಿದೆ. ಖಾರ, ಕಹಿ, ಒಗರು ರಸಗಳಿಂದ ಕೂಡಿರುವುದರಿಂದ ಪಾಚನಗುಣವನ್ನು ಹೊಂದಿದೆ.

ಜ್ವರ ಮತ್ತು ಮಧುಮೇಹಕ್ಕೆ ರಾಮಾಬಾಣ: ಎಲ್ಲಾ ಬಗೆಯ ಜ್ವರಗಳಿಗೂ ಅಮೃತ ಬಳ್ಳಿಯು ಉತ್ತಮ ಔಷಧಿಯಾಗಿದೆ. ಚಿಕನ್‌ ಗುನ್ಯ, ಎಚ್‌1ಎನ್‌1 ಜ್ವರ ಕಾಣಿಸಿಕೊಂಡಾಗ ಜನರು ದುಬಾರಿ ಬೆಲೆ ನೀಡಿ ಖರೀದಿಸಿರೋದು ಉಂಟು. ಮಧುಮೇಹ ರೋಗಕ್ಕೂ ಸಹ ಔಷಧೀಯಾಗಿ ಉಪಯೋಗಿಸುತ್ತಾರೆ. ಅದರ ಕಾಂಡವನ್ನು ಜಜ್ಜಿ ರಸ ತೆಗೆದು ಜೇನುತುಪ್ಪದೊಂದಿಗೆ ಬೆರೆಸಿ ದಿನಕ್ಕೆ ಮೂರು ಬಾರಿಯಂತೆಅಹಾರ ಸೇವನೆಯ ಮುಂಚೆ ಸೇವಿಸಬೇಕು.

ಆಮೃತ ಬಳ್ಳಿಯ ಚೂರನ್ನು ಅರ್ಧ ಟೀ ಚಮಚದಷ್ಟು ಒಂದೆರಡು ಮೆಣಸು ಕಾಳಿನ ಪುಡಿ ಸೇರಿಸಿ ಬಿಸಿ ನೀರಿನಲ್ಲಿ ಬೆರೆಸಿ ದಿನಕ್ಕೆ ಎರಡು ಬಾರಿಯಂತೆ ಸೇವಿಸುವುದರಿಂದ ಎದೆ ನೋವು ಕಡಿಮೆಯಾಗುತ್ತದೆ.

ರೋಗ ನಿರೋಧಕ ಶಕ್ತಿಯನ್ನು ವೃದ್ಧಿ ಮಾಡುವುದು. ಅಪಾಯಕಾರಿ ರೋಗಗಳಿಗೆ ದೇಹ ತುತ್ತಾಗದಂತೆ ಸಂರಕ್ಷಣೆ ಮಾಡುತ್ತದೆ. ಪಿತ್ತ ಕೋಶ, ಮೂತ್ರ ಕೋಶಗಳಲ್ಲಿ ಸಂಗ್ರಹವಾಗುವ ವಿಷಕಾರಿ ಅಂಶಗಳನ್ನು ಹೋಗಲಾಡಿಸಲು ಸಹಕಾರಿ. ಬಾಣಂತಿಯರು ಅಮೃತ ಬಳ್ಳಿ ಹಾಗೂ ಶುಂಠಿಯಿಂದ ತಯಾರಿಸಿದ ಕಷಾಯವನ್ನು ಸೇವಿಸುವುದರಿಂದ ಎದೆಹಾಲು ಶುದ್ಧಿಯಾಗುತ್ತದೆ.

ಅರ್ಧ ಗ್ರಾಂ ಅಮೃತ ಬಳ್ಳಿಯನ್ನು ನೆಲ್ಲಿ ಕಾಯಿ ಜೊತೆ ಮಿಶ್ರಣ ಮಾಡಿ ಸೇವಿಸಿದರೆ ಹೊಟ್ಟೆಯ ಸಮಸ್ಯೆ ನಿವಾರಣೆಯಾಗುತ್ತದೆ. ಉಸಿರಾಟದದ ತೊಂದರೆ ಸೇರಿದಂತೆ ಅಸ್ತಮಾದಂತಹ ರೋಗಗಳ ಚಿಕಿತ್ಸೆಯಲ್ಲಿ ಅಮೃತ ಬಳ್ಳಿಗೆ ಮಹತ್ವದ ಸ್ಥಾನವಿದೆ. ಅಸ್ತಮಾ ರೋಗಿಗಳು ದಿನನಿತ್ಯ ಅಮೃತ ಬಳ್ಳಿ ಸೇವಿಸುವುದರಿಂದ ರೋಗ ಕಡಿಮೆಯಾಗುತ್ತದೆ.

ಅಮೃತ ಬಳ್ಳಿಯ ನಯವಾದ ಚೂರ್ಣವನ್ನು ಹಸುವಿನ ಹಾಲಿನಲ್ಲಿ ಕದಡಿ ದಿನಕ್ಕೆ ಎರಡು ಬಾರಿಯಂತೆ ಸೇವಿಸುವುದರಿಂದ ಬಹುಮೂತ್ರ ಶಮನವಾಗುತ್ತದೆ. ಸಂಧಿವಾತ ಅಥವಾ ಮಂಡಿ ನೋಮಿನಿಂದ ಬಳಲುವವರಿಗೆ ಕೂಡ ಅಮೃತ ಬಳ್ಳಿ ಸಹಾಯ ಮಾಡುತ್ತದೆ. ಗಂಟಲಿನಲ್ಲಿ ನೋವು ಕಾಣಿಸಿಕೊಳ್ಳುತ್ತಿರುವಾಗಲೇ ಇದನ್ನು ಸೇವಿಸಿದರೆ ನೋವು ಶಮನವಾಗುತ್ತದೆ.

ಅಮೃತ ಬಳ್ಳಿಯ ಕಾಂಡವನ್ನು ಇತರ ಔಷಥೀಯ ಸಸ್ಯಗಳೊಂದಿಗೆ ಬೆರೆಸಿ ಕಷಾಯ ಮಾಡಿ ಕುಡಿಯಬಹುದು. (ಸಂಬಾರ ಬಳ್ಳಿಯ ಎಲೆ, ಮಜ್ಜೆಗೆ ಸೊಪ್ಪು, ತುಳಸಿ, ಲವಂಗ, ಅರಸಿನ ಪುಡಿ, ಕಾಳು ಮೆಣಸು, ಜೇರಿಗೆ, ಶುಂಠಿ) ಈ ಕಷಾಯವನ್ನು ವಾರದಲ್ಲಿ ಒಂದು ಬಾರಿ ಅರ್ಧ ಲೋಟದಂತೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿದರೆ ದೇಹದ ರೋಗ ನಿರೋಧಕ ಶಕ್ತಿ ಜಾಸ್ತಿಯಾಗುತ್ತದೆ.

ಇಂತಹ ಮನೆ ಮದ್ದು ಅಮೃತ ಬಳ್ಳಿಯನ್ನು ಜೀವನ ಶೈಲಿಯಲ್ಲಿ ಅಳವಡಿಸಿಕೊಂಡರೆ ಆರೋಗ್ಯ ಸಮಸ್ಯೆಯಿಂದ ದೂರ ಇರುವುದಂತೂ ನಿಚ್ಚಳ.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

14-health-1

Autism: ಸ್ವಲೀನತೆ: ಹಾಗೆಂದರೇನು?

12-health

Ankylosing Spondylitis: ಹಾಗೆಂದರೇನು ? ಕಾರಣವೇನು ? ಚಿಕಿತ್ಸೆ ಹೇಗೆ

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

Rama Navami 2024: ಬೇಸಗೆಯಲ್ಲಿ ಆರೋಗ್ಯ ಆಚಾರ; ಆಹಾರ-ವಿಹಾರ ನಿಯಮಗಳೇನು?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.