ಉಪರಾಷ್ಟ್ರಪತಿ ಚುನಾವಣೆ 2022: NDA ಅಭ್ಯರ್ಥಿ ಜಗದೀಪ್ ನಾಮಪತ್ರ ಸಲ್ಲಿಕೆ, ಪ್ರಧಾನಿ ಸಾಥ್
ಇಂತಹ ಒಂದು ಅವಕಾಶ ದೊರೆಯುತ್ತದೆ ಎಂದು ನಾನು ಕನಸಿನಲ್ಲೂ ಊಹಿಸಿರಲಿಲ್ಲ.
Team Udayavani, Jul 18, 2022, 2:18 PM IST
ನವದೆಹಲಿ: ರಾಷ್ಟ್ರಪತಿ ಚುನಾವಣೆ ಬೆನ್ನಲ್ಲೇ ಇದೀಗ ಉಪರಾಷ್ಟ್ರಪತಿ ಚುನಾವಣೆಯ ಚಟುವಟಿಕೆ ಗರಿಗೆದರಿದೆ. ಸೋಮವಾರ (ಜುಲೈ 18) ಎನ್ ಡಿಎ ಉಪರಾಷ್ಟ್ರಪತಿ ಅಭ್ಯರ್ಥಿಯಾದ ಜಗದೀಪ್ ಧನ್ಕರ್ ಅವರು ನಾಮಪತ್ರ ಸಲ್ಲಿಸಿದ್ದು, ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಜರಿದ್ದರು.
ಇದನ್ನೂ ಓದಿ:ಮಹಿಳೆಯ ಕೊಲೆ: 11 ವರ್ಷದ ಬಳಿಕ ಪ್ರಕರಣ ಭೇದಿಸಿದ ಮುದ್ದೇಬಿಹಾಳ ಪೊಲೀಸರು
2022ರ ಆಗಸ್ಟ್ 6ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ. ಜಗದೀಪ್ ಧನ್ಕರ್ ಅವರನ್ನು ಎನ್ ಡಿಎ ತಮ್ಮ ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿದ್ದು, ವಿರೋಧ ಪಕ್ಷಗಳು ಮಾರ್ಗರೇಟ್ ಆಳ್ವ ಅವರನ್ನು ಕಣಕ್ಕಿಳಿಸಿದೆ.
“ದೇಶದ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯಲು ನಾನು ಸದಾ ಸಿದ್ಧನಾಗಿದ್ದೇನೆ” ಎಂದು ಧನ್ಕರ್ ನಾಮಪತ್ರ ಸಲ್ಲಿಕೆಯ ಬಳಿಕ ಸುದ್ದಿಗಾರರ ಜತೆ ಮಾತನಾಡುತ್ತ ತಿಳಿಸಿದರು. ನನಗೆ ಇಂತಹ ಒಂದು ಅವಕಾಶ ದೊರೆಯುತ್ತದೆ ಎಂದು ನಾನು ಕನಸಿನಲ್ಲೂ ಊಹಿಸಿರಲಿಲ್ಲ. ಇದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಲ್ಲಿಸುವುದಾಗಿ ಧನ್ಕರ್ ಹೇಳಿದರು.
ಉಪರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಆಗಮಿಸಿದ್ದ ಧನ್ಕರ್ ಅವರಿಗೆ ಕೇಂದ್ರ ಸಚಿವರಾದ ಅಮಿತ್ ಶಾ, ರಾಜನಾಥ ಸಿಂಗ್, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ, ಜೆಡಿಯುನ ಲಾಲನ್ ಸಿಂಗ್, ಬಿಜೆಡಿಯ ಪಿನಾಕಿ ಮಿಶ್ರಾ ಸಾಥ್ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ
Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು
Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ
Lok Sabha Election: ರಾಯ್ಬರೇಲಿಯಿಂದ ರಾಹುಲ್, ಅಮೇಥಿಯಿಂದ ಕೆ.ಎಲ್. ಶರ್ಮ ಕಣಕ್ಕೆ
CBI ಏಜೆನ್ಸಿ ನಮ್ಮ ನಿಯಂತ್ರಣದಲ್ಲಿಲ್ಲ: ಸುಪ್ರೀಂಗೆ ಕೇಂದ್ರ ಮಾಹಿತಿ
MUST WATCH
ಹೊಸ ಸೇರ್ಪಡೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ
Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್; ಭಾರೀ ನಷ್ಟ
Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ
Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ
Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ