ರಾಷ್ಟ್ರಪತಿ ಚುನಾವಣೆ: ಶಾಸಕರ ಅಡ್ಡ ಮತದಾನ: ಹಕ್ಕು ಚಲಾವಣೆಗೆ 8 ಸಂಸದರ ಗೈರು

ಎನ್‌ಡಿಎ ಅಭ್ಯರ್ಥಿಗೆ ಮತ ಹಾಕಿದ ಕಾಂಗ್ರೆಸ್‌, ಎನ್‌ಸಿಪಿ ಶಾಸಕರು

Team Udayavani, Jul 19, 2022, 5:40 AM IST

ರಾಷ್ಟ್ರಪತಿ ಚುನಾವಣೆ: ಶಾಸಕರ ಅಡ್ಡ ಮತದಾನ: ಹಕ್ಕು ಚಲಾವಣೆಗೆ 8 ಸಂಸದರ ಗೈರು

ನವದೆಹಲಿ: ಹದಿನೈದನೇ ರಾಷ್ಟ್ರಪತಿ ಆಯ್ಕೆಗೆ ಸೋಮವಾರ ನಡೆದ ಚುನಾವಣೆ ಹೆಚ್ಚಾ ಕಡಿಮೆ ಸುಸೂತ್ರವಾಗಿ ಮುಕ್ತಾಯವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರೇ ಮೊದಲನೆಯವರಾಗಿ ಮತ ಹಾಕಿದ್ದಾರೆ. ಇತ್ತ ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ವ್ಹೀಲ್‌ ಚೇರ್‌ನಲ್ಲಿ ಬಂದು ಮತ ಚಲಾಯಿಸಿದ್ದಾರೆ. ಅನಾರೋಗ್ಯ ನಿಮಿತ್ತ ಶ್ರೀನಿವಾಸ ಪ್ರಸಾದ್‌ ಅವರೂ ಬೆಂಗಳೂರಲ್ಲೇ ಮತ ಹಾಕಿದ್ದಾರೆ.

ನವದೆಹಲಿಯ ಸಂಸತ್‌ ಭವನದಲ್ಲಿ ನಡೆದ ಚುನಾವಣೆಯಲ್ಲಿ ಶೇ.98.90 ಮತದಾನವಾಗಿದೆ. ಇದರ ಹೊರತಾಗಿ ಕೆಲವು ರಾಜ್ಯಗಳಲ್ಲಿ ಅಡ್ಡಮತದಾನವಾಗಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತಹಾಕಿದ್ದಾರೆ. ಜು.21ರಂದು ಫ‌ಲಿತಾಂಶ ಹೊರಬೀಳಲಿದೆ.

ಜಾರ್ಖಂಡ್‌, ಗುಜರಾತ್‌, ಹರ್ಯಾಣ, ಒಡಿಶಾಗಳಲ್ಲಿನ ಕೆಲವು ಶಾಸಕರು “ಆತ್ಮಸಾಕ್ಷಿಗೆ’ ಅನುಗುಣವಾಗಿ ಮತ ಹಾಕಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಅಸ್ಸಾಂನಲ್ಲಿ ಕಾಂಗ್ರೆಸ್‌ನ 20 ಶಾಸಕರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಜು ಅವರಿಗೆ ಮತ ಹಾಕಿದ್ದಾರೆ ಎಂದು ಐಯುಡಿಎಫ್ ಶಾಸಕ ಕರಿಮುದ್ದೀನ್‌ ಬಾಭುìಯಾನ್‌ ಹೇಳಿಕೊಂಡಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರತಿಪಕ್ಷಗಳ ಒಕ್ಕೂಟದ ಅಭ್ಯರ್ಥಿ ಯಶವಂತ ಸಿನ್ಹಾ ಪರವಾಗಿ ಮತ ಹಾಕುವುದಿಲ್ಲ ಎಂದು ಮಾಜಿ ಸಚಿವ ಶಿವಪಾಲ್‌ ಸಿಂಗ್‌ ಯಾದವ್‌ ಪ್ರಕಟಿಸಿದ್ದರು. ಸಿನ್ಹಾ ಅವರು ಮಾಜಿ ಸಿಎಂ ಮುಲಾಯಂ ಸಿಂಗ್‌ ಯಾದವ್‌ ಅವರನ್ನು ಐಎಸ್‌ಐ ಏಜೆಂಟ್‌ ಎಂದು ಟೀಕಿಸಿದ್ದರು. ಹೀಗಾಗಿ, ಅವರಿಗೆ ಮತ ಹಾಕುವುದಿಲ್ಲ ಎಂದು ಪ್ರಕಟಿಸಿದ್ದರು.

ಗುಜರಾತ್‌ನಲ್ಲಿ ಎನ್‌ಸಿಪಿ ಶಾಸಕ ಕಂಧಲ್‌ ಜಡೇಜಾ ಅವರು ದ್ರೌಪದಿ ಮುರ್ಮು ಅವರಿಗೆ ಮತ ಹಾಕಿದ್ದಾಗಿ ಹೇಳಿಕೊಂಡಿದ್ದಾರೆ.

ಜಾರ್ಖಂಡ್‌ನ‌ಲ್ಲಿ ಎನ್‌ಸಿಸಿ ಶಾಸಕ ಕಮೇಶ್‌ ಸಿಂಗ್‌ ಎನ್‌ಡಿಎ ಅಭ್ಯರ್ಥಿಗೆ ಮತ ಹಾಕಿದ್ದಾರೆ ಮತ್ತು 65 ಶಾಸಕರು ಮುರ್ಮು ಪರವಾಗಿಯೇ ಮತ ಹಾಕಿದ್ದಾರೆ ಎಂದು ಬಿಜೆಪಿ ಶಾಸಕ ಬಿರಾಂಚಿ ನಾರಾಯಣ ಹೇಳಿಕೊಂಡಿದ್ದಾರೆ. ಪಂಜಾಬ್‌ನ ಎಸ್‌ಎಡಿ ಶಾಸಕರೊಬ್ಬರು ಮತದಾನಕ್ಕೆ ಬಹಿಷ್ಕಾರ ಹಾಕಿದ್ದಾರೆ.

ಸಂಸದರ ಗೈರು:
ನವದೆಹಲಿಯಲ್ಲಿ ಬಿಜೆಪಿ ಸಂಸದರಾದ ಸನ್ನಿ ಡಿಯೋಲ್‌ ಮತ್ತು ಸಂಜಯ ಧೋತ್ರೆ ಆರೋಗ್ಯ ಕಾರಣಗಳಿಂದ ಮತ ಚಲಾಯಿಸಿಲ್ಲ. ಸಂಜಯ ಧೋತ್ರೆ ಅನಾರೋಗ್ಯ ಕಾರಣದಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಸನ್ನಿ ಡಿಯೋಲ್‌ ವಿದೇಶದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿವಸೇನೆಯಿಂದ ಇಬ್ಬರು, ಬಿಎಸ್‌ಪಿ, ಕಾಂಗ್ರೆಸ್‌, ಎಸ್‌ಪಿ ಮತ್ತು ಎಐಎಂಐಎಂ ಪಕ್ಷಗಳ ತಲಾ ಒಬ್ಬ ಸಂಸದರು ವಿವಿಧ ಕಾರಣಗಳಿಗಾಗಿ ಮತ ಹಾಕಿಲ್ಲ.

ಟಾಪ್ ನ್ಯೂಸ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!

IMD

Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ‌ ರಜೆ

covid

Covaxin ಸೈಡ್‌ಎಫೆಕ್ಟ್ ವರದಿಗೆ ಐಸಿಎಂಆರ್‌ ಕಿಡಿ

train-track

Train Drivers Association; ಆನೆ ಹಳಿ ದಾಟುವಾಗ ರೈಲು ನಿಲುಗಡೆ ಅಸಾಧ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

13-ragini-dance

Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್‌ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

11-gadaga

ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.