ಸಾಹಿತ್ಯ ಲೋಕ ಜಾತಿ-ಧರ್ಮದಿಂದ ಮುಕ್ತವಾಗಲಿ

ಇತ್ತೀಚಿನ ದಿನಗಳಲ್ಲಿ ವೇದಿಕೆ ಮತ್ತು ಆಪ್ತತೆ ಕಳೆದು ಹೋಗುತ್ತಿದೆ.

Team Udayavani, Jul 19, 2022, 2:43 PM IST

ಸಾಹಿತ್ಯ ಲೋಕ ಜಾತಿ-ಧರ್ಮದಿಂದ ಮುಕ್ತವಾಗಲಿ

ದಾವಣಗೆರೆ: ಸಾಹಿತಿ, ಕವಿಗಳನ್ನು ಒಂದು ಧರ್ಮ, ಜಾತಿ, ಸಮುದಾಯಕ್ಕೆ ಸೀಮಿತಗೊಳಿಸಬಾರದು ಎಂದು ಸಾಹಿತಿ ಡಾ| ಆನಂದ ಋಗ್ವೇದಿ ಹೇಳಿದರು.ನಗರದ ನಿರ್ವರ್ಣ ಸಭಾಂಗಣದಲ್ಲಿ ನಡೆದ ಸಂತೆಬೆನ್ನೂರು ಫೈಜಟ್ರಾಜ್‌ ಅವರ ಸಾಹಿತ್ಯ ಕೃತಿಗಳ ಅವಲೋಕನ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಈಚೆಗೆ ಕೃತಿಕಾರರು, ಪ್ರಸಿದ್ಧ ಸಾಹಿತಿ, ಕವಿಗಳನ್ನು ಒಂದು ಜಾತಿ, ಸಮುದಾಯ, ಧರ್ಮಕ್ಕೆ ಸೀಮಿತಗೊಳಿಸುವುದು ಕಂಡು ಬರುತ್ತಿದೆ. ಸಾಹಿತಿಗಳನ್ನು ನಮ್ಮವರು ನಮ್ಮ ಧರ್ಮ, ಸಮುದಾಯದವರು ಎಂದು ಹೇಳಿಕೊಳ್ಳುವಂತಹ ಸಂಘರ್ಷಮಯ ವಾತಾವರಣ ಕಂಡು ಬರುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಕವಿ, ಸಾಹಿತಿ, ಕಾದಂಬರಿಕಾರರು ಜಾತಿ, ಮತ, ಧರ್ಮ, ಸಮುದಾಯ ಮೀರಿದವರು. ಅವರಿಗೆ ಯಾವುದೇ ಗಡಿಯ ಎಲ್ಲೆ ಇಲ್ಲ. ಈಚೆಗೆ ಪ್ರಸಿದ್ಧ ಸಾಹಿತಿಯೊಬ್ಬರನ್ನು ನಮ್ಮ ಸಮುದಾಯದವರು ಎಂಬು ಬಹು ದೊಡ್ಡದಾಗಿ ಬಿಂಬಿಸುವ ಪ್ರಯತ್ನ ನಡೆಯಿತು. ತಾತ್ವಿಕತೆಯ ಕತೃìಗಳನ್ನು ಜಾತಿ,
ಸಮುದಾಯ, ಧರ್ಮಕ್ಕೆ ಸೀಮಿತಗೊಳಿಸುವ ಕ್ರಿಯೆ ಸರಿಯಲ್ಲ. ಸಾಮಾಜಿಕ ಸ್ಥಿತಿಗತಿ, ವರ್ತಮಾನದ ತಲ್ಲಣಗಳಿಗೆ ಸ್ಪಂದಿಸುವ ಕವಿ, ಸಾಹಿತಿ ತಾವು ಹುಟ್ಟಿ ಬಂದ ಜಾತಿಗೆ ಜವಾಬ್ದಾರಲ್ಲ. ಯಾರೂ ಸಹ ಇದೇ ಜಾತಿ, ಧರ್ಮ, ಸಮುದಾಯದಲ್ಲಿ ಜನಿಸಬೇಕು ಎಂದು ಅರ್ಜಿ ಹಾಕಿರುವುದಿಲ್ಲ ಎಂದರು.

ಸಂತೆಬೆನ್ನೂರು ಫೈಜಟ್ರಾಜ್‌ ಸಹ ನಾಲ್ಕು ದಶಕಗಳಲ್ಲಿ ಅನೇಕ ಸಂಕಷ್ಟ ಮತ್ತು ಸಂಘರ್ಷ ದಾಟಿ ಬಂದಿ ಕನ್ನಡ ಸಾಹಿತ್ಯ ಲೋಕಕ್ಕೆ ಒಂಭತ್ತು ಕೃತಿಗಳ ನೀಡಿದ್ದಾರೆ. ಸಂತೆಬೆನ್ನೂರು ಫೈಜಟ್ರಾಜ್‌ ಅವರ “ಕೇಳದೆ ನಿಮಗಾಗಿ’ ಕವನ ಸಂಕಲನಕ್ಕೆ ಮುಸ್ಲಿಂ ಸಾಹಿತ್ಯ ಪರಿಷತ್ತು ಪ್ರಶಸ್ತಿಯನ್ನು ನೀಡಿದೆ. ಅದಕ್ಕೆ ಮುಜುಗರ ಪಡುವಂಥದ್ದಲ್ಲ. ಸಾಹಿತಿ, ಕವಿತೆಗೆ ಪ್ರಶಸ್ತಿ ಬರುವುದು ಅವರಿಗೆ ಆತ್ಮಬಲ ನೀಡುತ್ತದೆ. ಸಮಾಜ, ಕವಿಹೃಹದಯಗಳು ನಿಮ್ಮೊಟ್ಟಿಗೆ ಇರಲಿವೆ ಎಂದು
ಬೆಂಬಲಿಸುವ ಪ್ರತೀಕ ಎಂದು ತಿಳಿಸಿದರು.

ಪ್ರಾಸ್ತಾವಿಕ ನುಡಿಗಳಾಡಿದ ಸನಾವುಲ್ಲಾ ನವಿಲೇಹಾಳ್‌, ಸಂತೆಬೆನ್ನೂರು ಫೈಜಟ್ರಾಜ್‌ ಬದುಕಿನ ಅನುಭವವನ್ನು ಕವಿತೆ, ಕಥೆಗಳ ಮೂಲಕ ಅಚ್ಚುಕಟ್ಟಾಗಿ ಕಟ್ಟಿಕೊಡುತ್ತಿದ್ದಾರೆ. “ನಾವಾಗುವುದು ಒಲವಂತೆ’ ಎನ್ನುವ ಮೂಲಕ ಒಲಿವಿನ ಪರಿಚಯ ಮಾಡಿಕೊಟ್ಟಿದ್ದಾರೆ. “ಕೇಳದೆ ನಿಮಗಾಗಿ’ ಕವನ ಸಂಕಲನಕ್ಕೆ ರಾಜ್ಯ ಮಟ್ಟದ ಮುಸ್ಲಿಂ ಸಾಹಿತ್ಯ ಪರಿಷತ್ತಿನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಹಿರಿಯ ಪತ್ರಕರ್ತ ಬಾ.ಮ. ಬಸವರಾಜಯ್ಯ ಅಧ್ಯಕ್ಷತೆ ವಹಿಸಿದ್ದರು. ಡಾ| ಜಿ. ಕಾವ್ಯಶ್ರೀ, ಜಿ.ಮುದ್ದುವೀರಸ್ವಾಮಿ ಇತರರು ಇದ್ದರು. ಟಿ.ಎಸ್‌. ರಾಜೇಂದ್ರ ಪ್ರಸಾದ್‌ ಸ್ವಾಗತಿಸಿದರು. ಕೃಷ್ಣ ನಾಯ್ಕ ವಂದಿಸಿದರು.

ಪ್ರೀತಿಯೆಂಬುದು ಬದುಕಿನ ಆಕ್ಸಿಜನ್‌
ಇತ್ತೀಚಿನ ದಿನಗಳಲ್ಲಿ ವೇದಿಕೆ ಮತ್ತು ಆಪ್ತತೆ ಕಳೆದು ಹೋಗುತ್ತಿದೆ. ಆತ್ಮರತಿ, ಗುಂಪುಗಾರಿಕೆಯ ವಾತಾವರಣದ ನಡುವೆ ಆಪ್ತತೆಯ ವಲಯ ಸ್ಥಾಪನೆ ಮಾಡಕೊಳ್ಳಬೇಕಾಗಿದೆ. ಮನುಷ್ಯರಾಗಿ ಬಾಳಲು, ಬದುಕಲು ಪ್ರೀತಿ ಅಗತ್ಯ. ಪ್ರತಿಯೊಬ್ಬರ ಬದುಕಿನಲ್ಲಿ ಪ್ರೀತಿ, ಆಪ್ಯಾಯತೆ ಬೇಕೇ ಬೇಕು. ಪ್ರೀತಿ ಎಂಬುದು ಜೀವನದ ಆಮ್ಲಜನಕ. ಆದರೆ ಅದೇ ಪ್ರೀತಿಯನ್ನು ಮಡಿವಂತಿಕೆ ನೆಪದಲ್ಲಿ ಸಾಮಾಜಿಕವಾಗಿ ನಿಷೇಧಿ ತ ಕ್ರಿಯೆ ಎಂದು ಬ್ರ್ಯಾಂಡ್‌ ಮಾಡಲಾಗುತ್ತಿದೆ ಎಂದು ಸಾಹಿತಿ ಮಲ್ಲಿಕಾರ್ಜುನ ತೂಲಹಳ್ಳಿ ವಿಷಾದಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.