ಸದ್ಯಕ್ಕೆ ನೂಪುರ್ ಶರ್ಮಾ ಬಂಧನ ಬೇಡ: ಸುಪ್ರೀಂಕೋರ್ಟ್
Team Udayavani, Jul 19, 2022, 9:53 PM IST
ನವದೆಹಲಿ: ವಿವಾದಿತ ಹೇಳಿಕೆ ನೀಡಿದ ಆರೋಪಕ್ಕೆ ಗುರಿಯಾಗಿರುವ ಬಿಜೆಪಿಯ ಉಚ್ಚಾಟಿತ ವಕ್ತಾರೆ ನೂಪುರ್ ಶರ್ಮಾ ಅವರನ್ನು ಸದ್ಯಕ್ಕೆ ಬಂಧಿಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಆದೇಶ ನೀಡಿದೆ.
ನ್ಯಾ.ಸೂರ್ಯಕಾಂತ್ ಮತ್ತು ನ್ಯಾ.ಜೆ.ಬಿ.ಪರ್ದಿವಾಲಾ ನೇತೃತ್ವದ ನ್ಯಾಯಪೀಠ ಈ ಆದೇಶ ನೀಡಿದೆ. ನೂಪುರ್ ದೇಶದ ಪ್ರತಿ ಕೋರ್ಟ್ಗೆ ಹಾಜರಾಗಿ ಎಫ್ಐಆರ್ ವಿರುದ್ಧ ಪರಿಹಾರ ಪಡೆದುಕೊಳ್ಳಬೇಕು ಎಂಬ ನಿಲುವನ್ನು ಕೋರ್ಟ್ ಹೊಂದಿಲ್ಲ ಎಂದು ನ್ಯಾಯಪೀಠ ತಿಳಿಸಿತು.
ನೂಪುರ್ ಶರ್ಮಾ ವಿರುದ್ಧ ದೆಹಲಿ, ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಎಫ್ಐಆರ್ ದಾಖಲಾಗಿದೆ. ಅವುಗಳನ್ನೆಲ್ಲ ನವದೆಹಲಿಗೆ ವರ್ಗಾಯಿಸಬೇಕು ಎಂದು ಕೋರಿಕೆ ಸಲ್ಲಿಸಿದ್ದರು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮತ್ತು ಮೂರು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದ್ದು, ಆ.10ರ ಒಳಗಾಗಿ ಪ್ರತಿಕ್ರಿಯೆ ನೀಡಬೇಕು ಎಂದು ನ್ಯಾಯಪೀಠ ಸೂಚಿಸಿದೆ.
ಜು.1ರಂದು ನ್ಯಾಯಪೀಠ ವಿವಾದಿತ ಹೇಳಿಕೆ ನೀಡಿದ್ದಕ್ಕಾಗಿ ನೂಪುರ್ ಶರ್ಮಾ ವಿರುದ್ಧ ಕಟುವಾಗಿ ಟೀಕಿಸಿತ್ತು.
ಹತ್ಯೆಗೆ ಸಂಚು?:
ಇನ್ನೊಂದೆಡೆ, ನೂಪುರ್ ಅವರ ಹತ್ಯೆ ನಡೆಸುವ ನಿಟ್ಟಿನಲ್ಲಿ ಪಾಕಿಸ್ತಾನದಿಂದ ವ್ಯಕ್ತಿ ದೇಶದೊಳಕ್ಕೆ ನುಸುಳಿದ್ದಾನೆ. ಕೆಲ ದಿನಗಳ ಹಿಂದೆ ಬಿಎಸ್ಎಫ್ ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯ ವ್ಯಾಪ್ತಿಯಲ್ಲಿ ಇರುವ ಗಡಿ ಪ್ರದೇಶದಲ್ಲಿ ಪಾಕಿಸ್ತಾನದ ಯುವಕನನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಿದಾಗ ಈ ಅಂಶ ದೃಢಪಟ್ಟಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ