ಕಾಪು ಮಾರಿಯಮ್ಮನ ಅನುಗ್ರಹವೇ ನನಗೆ ಶ್ರೀರಕ್ಷೆ : ಮಿಸ್ ಇಂಡಿಯಾ ಸಿನಿ ಶೆಟ್ಟಿಯ ಮನದ ಮಾತು
Team Udayavani, Jul 19, 2022, 10:51 PM IST
ಕಾಪು : ಮಿಸ್ ಇಂಡಿಯಾ ಸಿನಿ ಶೆಟ್ಟಿ ಅವರು ಮಂಗಳವಾರ ರಾತ್ರಿ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕಾಪು ಶ್ರೀ ಮಾರಿಯಮ್ಮ ದೇವಿಯ ಭಕ್ತೆಯಾಗಿರುವ ಸಿನಿ ಶೆಟ್ಟಿ ಅವರು ಮಿಸ್ ಇಂಡಿಯಾ ಪ್ರಶಸ್ತಿ ವಿಜೇತರಾದ ಬಳಿಕ ಪ್ರಥಮ ಬಾರಿಗೆ ಕಾಪು ಹೊಸ ಮಾರಿಗುಡಿಗೆ ಭೇಟಿ ನೀಡಿದ್ದು ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಬಳಿಕ ದೇವಸ್ಥಾನದ ವತಿಯಿಂದ ಅರ್ಚಕ ಶ್ರೀಧರ ತಂತ್ರಿ ಅವರ ಮೂಲಕವಾಗಿ ಪ್ರಸಾದ ನೀಡಿ ಗೌರವಿಸಲಾಯಿತು.
ಗೌರವ ಸ್ವೀಕರಿಸಿ ಮಾತನಾಡಿದ ಅವರು, ತಾನು ಮಾರಿಯಮ್ಮ ದೇವಿಯ ಭಕ್ತೆಯಾಗಿದ್ದು ಎಳೆವೆಯಿಂದಲೂ ತಂದೆ, ತಾಯಿಯೊಂದಿಗೆ ಇಲ್ಲಿಗೆ ಬರುತ್ತಿದ್ದೆ. ಈಗ ಮಿಸ್ ಇಂಡಿಯಾಗಿ ಆಗಿ ಬರುತ್ತಿರುವದಕ್ಕೆ ಮಾರಿಯಮ್ಮ ದೇವಿಯ ಅನುಗ್ರಹವೇ ಮುಖ್ಯ ಕಾರಣವಾಗಿದೆ. ಮುಂದೆ ಅಮ್ಮನ ಅನುಗ್ರಹದಿಂದ ಮಿಸ್ ವರ್ಲ್ಡ್ ಆಗಿಯೂ ಬರುವಂತಾಗಲಿ ಎಂದು ಪ್ರಾರ್ಥನೆಯನ್ನು ದೇವರ ಮುಂದಿಟ್ಟಿದ್ದೇನೆ ಎಂದರು.
ಪ್ರಸ್ತುತ ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರಕ್ಕೆ ತಮ್ಮ ಮನೆಯ ವತಿಯಿಂದ 99 ಶಿಲಾ ಸೇವೆ ನೀಡುತ್ತಿದ್ದೇವೆ. ಇದೇ ರೀತಿಯಲ್ಲಿ ಜಗದಗಲಕ್ಕೆ ಹರಡಿರುವ ಮಾರಿಯಮ್ಮ ದೇವಿಯ ಭಕ್ತರೆಲ್ಲರೂ ಶಿಲಾ ಸೇವೆ ನೀಡುವ ಮೂಲಕ ಮಾರಿಗುಡಿಯ ಜೀರ್ಣೋದ್ಧಾರದಲ್ಲಿ ಕೈಜೋಡಿಸುವಂತೆ ಅವರು ಮನವಿ ಮಾಡಿದರು.
ಇದನ್ನೂ ಓದಿ : ಸ್ಮಾರ್ಟ್ ಸಿಟಿ ಕಾಮಗಾರಿ 2023 ಜೂನ್ ವೇಳೆಗೆ ಪೂರ್ಣ: ಸಚಿವ ಬೈರತಿ ಬಸವರಾಜ್
ಸಿನಿ ಶೆಟ್ಟಿ ತಂದೆ ಸದಾನಂದ ಶೆಟ್ಟಿ ಮಾತನಾಡಿ, ಮಿಸ್ ಇಂಡಿಯಾ ಸ್ಪರ್ಧೆಗೆ ಹೋಗುವ ಮುನ್ನ ಮಾರಿಗುಡಿಗೆ ಬಂದು ಹೋಗಿದ್ದು, ಸ್ಪರ್ಧೆಯಲ್ಲಿ ಗೆದ್ದು ಬಂದ ಕಾರಣ ಮಾರಿಪೂಜೆ ಸೇವೆ ಯ ಹರಕೆ ಹೊತ್ತಿದ್ದು, ಮುಂದಿನ ಮಿಸ್ ವರ್ಲ್ಡ್ ಸ್ಪರ್ಧೆಯಲ್ಲೂ ಗೆದ್ದು ಬರುವಂತಾಗಲು ಎಲ್ಲರ ಆಶೀರ್ವಾದ ಸಿಗುವಂತಾಗಲಿ ಎಂದು ಆಶಿಸಿದರು.
ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ, ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಮೇಶ್ ಹೆಗ್ಡೆ ಕಲ್ಯ, ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಕಾಪು ದಿವಾಕರ ಶೆಟ್ಟಿ, ಮನೋಹರ ಶೆಟ್ಟಿ, ಗಂಗಾಧರ ಸುವರ್ಣ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಪ್ರಮುಖರಾದ ನಡಿಕೆರೆ ರತ್ನಾಕರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ ದೊರಕಳಗುತ್ತು, ರವಿರಾಜ ಶೆಟ್ಟಿ ಪಂಜಿತ್ತೂರುಗುತ್ತು, ರತ್ನಾಕರ ಹೆಗ್ಡೆ ಕಲೀಲಬೀಡು, ರಮೇಶ್ ಶೆಟ್ಟಿ ಕೊಲ್ಯ, ಲೀಲಾಧರ ಶೆಟ್ಟಿ, ನಿರ್ಮಲ್ ಕುಮಾರ್ ಹೆಗ್ಡೆ, ಜಗದೀಶ್ ಬಂಗೇರ, ಶಿಲ್ಪಾ ಜಿ. ಸುವರ್ಣ, ಗೌರವ್ ಶೇಣವ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ