ಪತ್ನಿಯ ಕೊಲ್ಲಲು ಹೋಗಿ ಕುಡಿದ ಮತ್ತಿನಲ್ಲಿ ಅತ್ತೆಯನ್ನೇ ಕೊಂದ!
Team Udayavani, Jul 20, 2022, 12:32 PM IST
ಬೆಂಗಳೂರು: ಕೌಟುಂಬಿಕ ವಿಚಾರಕ್ಕೆ ಅತ್ತೆಯನ್ನು ಕೊಲೆಗೈದಿದ್ದ ಅಳಿಯನನ್ನು ಎಚ್ಎಎಲ್ ಪೊಲೀಸರು ಬಂಧಿಸಿದ್ದಾರೆ.
ಹೊಸಕೋಟೆಯ ನಡವಟ್ಟಿ ಗ್ರಾಮದ ನಿವಾಸಿ ನಾಗರಾಜ(35) ಬಂಧಿತ. ಸೌಭಾಗ್ಯ(45) ಕೊಲೆಯಾದ ಮಹಿಳೆ.
ಈತ ತನ್ನ ಪತ್ನಿಯನ್ನು ಕೊಲ್ಲುವ ಉದ್ದೇಶ ಹೊಂದಿದ್ದ. ಆದರೆ, ಕುಡಿದ ಮತ್ತಿನಲ್ಲಿ ಪತ್ನಿ ಬದಲು ಅತ್ತೆಯನ್ನು ಕೊಲೆಗೈದಿದ್ದಾನೆ.
ಕ್ಯಾಬ್ ಚಾಲಕನಾಗಿರುವ ನಾಗರಾಜು 6 ವರ್ಷಗಳ ಸೌಭಾಗ್ಯರ ಪುತ್ರಿ ಭವ್ಯರನ್ನು ಮದುವೆಯಾಗಿದ್ದು, ದಂಪತಿಗೆ 5 ವರ್ಷದ ಮಗಳು ಇದ್ದಾಳೆ. ಮದ್ಯ ವ್ಯಸನಿಯಾಗಿರುವ ಆರೋಪಿ, ಸಣ್ಣ ವಿಚಾರಗಳಿಗೆ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಅದರಿಂದ ಬೇಸತ್ತ ಭವ್ಯ ತನ್ನ ಪುತ್ರಿ ಜತೆ ತವರು ಮನೆಗೆ ಹೋಗಿದ್ದು, ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಜೀವನ ಮಾಡುತ್ತಿದ್ದರು. ಈ ನಡುವೆ ವಿವಾಹ ವಿಚ್ಛೇದನಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ವಿಚಾರ ತಿಳಿದ ನಾಗರಾಜ, ಅತ್ತೆ ಮನೆಗೆ ಬಂದು ಪತ್ನಿ ಮತ್ತು ಮಗಳನ್ನು ತನ್ನೊಂದಿಗೆ ಕಳುಹಿಸುವಂತೆ ಗಲಾಟೆ ಮಾಡುತ್ತಿದ್ದ. ಆದರೆ, ಅತ್ತೆ ಸೌಭಾಗ್ಯ ಕಳುಹಿಸಲು ನಿರಾಕರಿಸಿದ್ದರು. ಅದರಿಂದ ಆಕ್ರೋಶಗೊಂಡಿದ್ದ ಆರೋಪಿ ಜು.12ರಂದು ಅತ್ತೆ ಮನೆಗೆ ಬಂದು ಗಲಾಟೆ ಮಾಡಿ ಹೊರಟು ಹೋಗಿದ್ದ. ಮಂಜುನಾಥನಗರದ ಆಟೋನಿಲ್ದಾಣದ ಬಳಿಯ ತರಕಾರಿಮಾರುಕಟ್ಟೆಯಲ್ಲಿ ಸೌಭಾಗ್ಯ ತರಕಾರಿ ವ್ಯಾಪಾರ ಮಾಡುತ್ತಾರೆ. ಜು.13ರಂದು ಸಂಜೆ 7.30ಕ್ಕೆ ತರಕಾರಿ ಅಂಗಡಿ ಬಳಿ ಬಂದು ಸೌಭಾಗ್ಯರಿಗೆ ಸುತ್ತಿಗೆಯಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ. ತೀವ್ರ ಗಾಯಗೊಂಡಿದ್ದ ಸೌಭಾಗ್ಯ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿ ವಿಚಾರಣೆ ವೇಳೆ “ಅತ್ತೆ ಸೌಭಾಗ್ಯರನ್ನು ಕೊಲ್ಲುವ ಉದ್ದೇಶ ಇರಲಿಲ್ಲ. ಪತ್ನಿಯನ್ನು ಕೊಲ್ಲಲು ನಿರ್ಧರಿಸಿದ್ದೆ. ಕುಡಿದ ಮತ್ತಿನಲ್ಲಿ ಅತ್ತೆಯನ್ನು ಹೊಡೆದು ಕೊಂದು ಬಿಟ್ಟೆ’ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು