ಮೊಹಮ್ಮದ್ ಜುಬೇರ್ ಗೆ ಜಾಮೀನು; ಬಿಡುಗಡೆಗೆ ಸುಪ್ರೀಂ ಆದೇಶ
ಎಲ್ಲಾ ಪ್ರಕರಣಗಳಲ್ಲಿ ಮಧ್ಯಂತರ ಜಾಮೀನು ಮಂಜೂರು
Team Udayavani, Jul 20, 2022, 4:41 PM IST
ನವದೆಹಲಿ: ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರ ವಿರುದ್ಧದ ಎಲ್ಲಾ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ಸೋಮವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ ಮತ್ತು ಅವರನ್ನು ತಕ್ಷಣ ಕಸ್ಟಡಿಯಿಂದ ಬಿಡುಗಡೆ ಮಾಡುವಂತೆ ಆದೇಶಿಸಿದೆ.
ಜುಬೇರ್ ವಿರುದ್ಧ ಯುಪಿಯಲ್ಲಿ ದಾಖಲಾಗಿರುವ ಎಲ್ಲಾ ಆರು ಎಫ್ಐಆರ್ಗಳನ್ನು ದೆಹಲಿ ಪೊಲೀಸ್ ವಿಶೇಷ ಸೆಲ್ಗೆ ವರ್ಗಾಯಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ, ಇದು ಅವರು 2018 ರಲ್ಲಿ ಹಿಂದೂ ದೇವತೆಯ ವಿರುದ್ಧ ಪೋಸ್ಟ್ ಮಾಡಿದ್ದ ಆಕ್ಷೇಪಾರ್ಹ ಟ್ವೀಟ್ಗೆ ಸಂಬಂಧಿಸಿದ ಪ್ರತ್ಯೇಕ ಪ್ರಕರಣವನ್ನು ತನಿಖೆ ನಡೆಸುತ್ತಿದೆ.
“ನಾವು ಯಾವುದೇ ಕಾರಣ ಮತ್ತು ಸಮರ್ಥನೆಯನ್ನು ಕಾಣುವುದಿಲ್ಲ. ಅರ್ಜಿದಾರರನ್ನು ಎಲ್ಲಾ ಪ್ರಕರಣಗಳಲ್ಲಿ 32 ನೇ ವಿಧಿಯ ಅಡಿಯಲ್ಲಿ ತಕ್ಷಣವೇ ಜಾಮೀನಿನ ಮೇಲೆ ಬಿಡುಗಡೆ ಮಾಡುವಂತೆ ನಾವು ನಿರ್ದೇಶಿಸುತ್ತೇವೆ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠ ತೀರ್ಪು ಪ್ರಕಟಿಸಿತು.
ಜುಬೈರ್ ವಿರುದ್ಧ 2018ರಲ್ಲಿ ಪೋಸ್ಟ್ ಮಾಡಿದ ಆಕ್ಷೇಪಾರ್ಹ ಟ್ವೀಟ್ ಕುರಿತು ದೆಹಲಿಯಲ್ಲಿ ದಾಖಲಾಗಿರುವ ಪ್ರಕರಣದ ಹೊರತಾಗಿ, ಉತ್ತರ ಪ್ರದೇಶದ ಗಾಜಿಯಾಬಾದ್, ಮುಜಾಫರ್ನಗರ, ಲಖಿಂಪುರ ಖೇರಿ, ಸೀತಾಪುರ್ ಮತ್ತು ಹತ್ರಾಸ್,ಚಂದೋಲಿಯಲ್ಲಿ ಒಟ್ಟು ಏಳು ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದ ಪೀಠವು ತನಿಖೆಯ ವ್ಯಾಪ್ತಿ ದೊಡ್ಡದಾಗಿದೆ ಎಂದು ಗಮನಿಸಿದೆ.
ನ್ಯಾಯಾಂಗ ಬಂಧನಕ್ಕೊಳಗಾಗಿದ್ದ ಜುಬೇರ್ ಗೆ ಪಟಿಯಾಲ ಹೌಸ್ ಕೋರ್ಟ್ನ ಸೆಷನ್ಸ್ ಕೋರ್ಟ್,50,000 ವೈಯಕ್ತಿಕ ಜಾಮೀನು ಬಾಂಡ್ ಮೇಲೆ ಶುಕ್ರವಾರ ಜಾಮೀನು ನೀಡಿತ್ತು. ಲಖೀಂಪುರ ಖೇರಿಯಲ್ಲಿ ನಾಲ್ಕು ವರ್ಷಗಳ ಹಿಂದೆ ಎರಡು ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವಂಥ ಟ್ವೀಟ್ ಮಾಡಿರುವ ಆರೋಪ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು