ಯುವ ಕಾಂಗ್ರೆಸ್‌ನಿಂದ ಉದ್ಯೋಗ ಸೃಷ್ಟಿ ಸರ್ವೇ

ಮುಂದಿನ ದಿನಗಳಲ್ಲಿ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು

Team Udayavani, Jul 20, 2022, 6:15 PM IST

ಯುವ ಕಾಂಗ್ರೆಸ್‌ನಿಂದ ಉದ್ಯೋಗ ಸೃಷ್ಟಿ ಸರ್ವೇ

ಗದಗ: ರಾಜ್ಯದಲ್ಲಿ 1.25 ಕೋಟಿ ಯುವಕರಿದ್ದು, ಉದ್ಯೋಗ ವಂಚಿತರಾಗುತ್ತಿದ್ದಾರೆ. ಅವರಿಗೆ ಉದ್ಯೋಗದ ಭರವಸೆಗಾಗಿ ಯುವಧ್ವನಿ ಮೂಲಕ ಯುವಕರ ಧ್ವನಿಯಾಗುವ ನಿಟ್ಟಿನಲ್ಲಿ ಉದ್ಯೋಗ ಸೃಷ್ಟಿ ಸರ್ವೇ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಮಹಮ್ಮದ್‌ ಹ್ಯಾರಿಸ್‌ ನಲಪಾಡ್‌ ಹೇಳಿದರು.

ನಗರದ ಕಾಟನ್‌ ಸೇಲ್ಸ್‌ ಸೊಸೈಟಿ ಆವರಣದಲ್ಲಿನ ಜಿಲ್ಲಾ ಕಾಂಗ್ರೆಸ್‌ ಸಮಿತಿ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು.

ಜಾತಿ, ಧರ್ಮಗಳ ನಡುವೆ ಕೋಮುವಾದಿ ಬೀಜ ಬಿತ್ತುವ ಮೂಲಕ ಸಮಾಜದಲ್ಲಿ ಸಾಮರಸ್ಯ ಹಾಳು ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕಳೆದ 8 ವರ್ಷಗಳಲ್ಲಿ ಉದ್ಯೋಗಗಳನ್ನು ಸೃಷ್ಟಿಸದೇ ಯುವಕರನ್ನು ಬೀದಿಗೆ ತಳ್ಳುವಂತೆ ಮಾಡಿದೆ. ಈಗ ಯುವಕರನ್ನು 4 ವರ್ಷಗಳ ಕಾಲ ಗುತ್ತಿಗೆ ಕಾರ್ಮಿಕರಂತೆ ನಡೆಸಿಕೊಳ್ಳಲು ಅಗ್ನಿಪಥ ಯೋಜನೆ ಜಾರಿಗೆ ತರುತ್ತಿದೆ. ಅವರಲ್ಲಿ ಶೇ. 25ರಷ್ಟು ಯುವಕರನ್ನು ಮಾತ್ರ ಮುಂದುವರಿಸುವುದಾಗಿ ತಿಳಿಸಿದ್ದು, ಸೇನೆಯಲ್ಲೂ ಕಮಿಷನ್‌ ಹೊಡೆಯುವ ಹುನ್ನಾರ ನಡೆಸಿದೆ ಎಂದು ಆರೋಪಿಸಿದರು.

70 ವರ್ಷಗಳ ಆಡಳಿತ ನಡೆಸಿದ ಕಾಂಗ್ರೆಸ್‌ ಸರ್ಕಾರ ದೇಶಕ್ಕಾಗಿ ಏನು ಕೊಡುಗೆ ನೀಡಿದೆ ಎಂದು ಬಿಜೆಪಿ ಪ್ರಶ್ನಿಸುತ್ತಿದೆ. ಆದರೆ, ಕಾಂಗ್ರೆಸ್‌ ನೀಡಿರುವ ಐಐಟಿ, ಎಂಎಲ್‌, ಏರ್‌ಪೋರ್ಟ್‌ನಂತಹ ಯೋಜನೆ ಗಳನ್ನು ಬಿಜೆಪಿ ಸರ್ಕಾರ ಮಾರಾಟ ಮಾಡುತ್ತ ಹೊರಟಿದೆ. 1947ರಲ್ಲಿ ಬ್ರಿಟಿಷರನ್ನು ಓಡಿಸಿದ ಹಾಗೆಯೇ, 2023-24ರಲ್ಲಿ ಬಿಜೆಪಿಯನ್ನು ಓಡಿಸುವ ಕಾಲ ಬಂದಿದೆ ಎಂದು ಭವಿಷ್ಯ ನುಡಿದರು.

ಕಾಂಗ್ರೆಸ್‌ ಯಾವಾಗಲೂ ಜನಪರವಾಗಿರುತ್ತದೆ. ಜನ ಪರ ಆಡಳಿತ ನೀಡುತ್ತದೆ. ಆದರೆ, ಇಂದಿನ ಬಿಜೆಪಿ ಸರ್ಕಾರ ಹಾಲು-ಮೊಸರಿನಲ್ಲಿ ಶೇ. 5ರಷ್ಟು ಜಿಎಸ್‌ಟಿ, ರೈತರು ಬಳಸುವ ಉಪಕರಣಗಳು ಹಾಗೂ ಬ್ಯಾಂಕ್‌ ಚೆಕ್‌ಬುಕ್‌ಗಳಿಗೆ ಶೇ.18ರಷ್ಟು ಜಿಎಸ್‌ಟಿ ವಿಧಿಸಿದೆ. ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಜಿಎಸ್‌ಟಿ ರೂಪದಲ್ಲಿ ಕೋಟ್ಯಂತರ ರೂ. ಸಂದಾಯವಾದರೂ ನಮ್ಮ ಪಾಲಿನ ಹಣ ಕೇಳುವ ಧೈರ್ಯ ಸಿಎಂ ಬೊಮ್ಮಾಯಿ ಅವರಾಗಲಿ, 25 ಸಂಸದರಿಗಾಗಲಿ ಇಲ್ಲ ಎಂದು ಲೇವಡಿ ಮಾಡಿದರು.

ಜಿಲ್ಲೆಯಲ್ಲಿ ನಾಲ್ಕು ವಿಧಾನಸಭಾ ಕ್ಷೇತ್ರಗಳು, 9 ಬ್ಲಾಕ್‌ಗಳಿದ್ದು, ಪ್ರತಿಯೊಂದು ಬ್ಲಾಕ್‌ಗಳ ಅಧ್ಯಕ್ಷರು ಕನಿಷ್ಟ 3000 ಯುವಕರನ್ನು, ಬ್ಲಾಕ್‌ ಪದಾಧಿಕಾರಿಗಳು ಕನಿಷ್ಟ 1000 ಯುವಕರನ್ನು ಉದ್ಯೋಗ ಸೃಷ್ಟಿ ಸರ್ವೇಯಲ್ಲಿ ಭಾಗೀದಾರರನ್ನಾಗಿ ಮಾಡಿಕೊಂಡು, ಅವರ ವಿದ್ಯಾರ್ಹತೆ, ಮಾಡುತ್ತಿದ್ದ ಉದ್ಯೋಗ, ಉದ್ಯೋಗದ ಸ್ಥಿತಿಗತಿ ಮಾಹಿತಿ ಪಡೆಯಬೇಕು. ಮುಂದಿನ ದಿನಗಳಲ್ಲಿ ನಿರುದ್ಯೋಗಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದರು.

ಮಾಜಿ ಶಾಸಕ ಡಿ.ಆರ್‌. ಪಾಟೀಲ ಮಾತನಾಡಿ, ಕಾಂಗ್ರೆಸ್‌ ಸ್ವಾತಂತ್ರ್ಯ ಸಂಗ್ರಾಮದಿಂದಲೂ ಯುವಕರನ್ನು ಮುನ್ನಡೆಸುತ್ತ ಹೋರಾಟ ನಡೆಸುತ್ತ ಬಂದಿದೆ. ಯುವಕರು ನಿರಪೇಕ್ಷ ಭಾವದಿಂದ ಕೆಲಸ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಹೇಳಿದರು.

ಮಾಜಿ ಶಾಸಕ ಬಿ.ಆರ್‌.ಯಾವಗಲ್‌ ಮಾತನಾಡಿ, ಬಿಜೆಪಿಯ ದುರಾಡಳಿತ ದೇಶವನ್ನು ಅವನತಿಯತ್ತ ಸಾಗಿಸುತ್ತಿದೆ. ಧಾರ್ಮಿಕ ವಿಚಾರಗಳನ್ನು ಮುಂದಿಟ್ಟುಕೊಂಡು ದೇಶ ಇಬ್ಭಾಗ ಮಾಡುವಂತಹ ಸ್ಥಿತಿಗೆ ತಂದಿಟ್ಟಿದೆ. ಯುವಕರು ಎಚ್ಚರಗೊಂಡು ದೇಶದ ಏಕತೆ, ಸಮಗ್ರತೆ, ಅಖಂಡತೆ ಸಾರಲು ಶ್ರಮಿಸಬೇಕೆಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಜಿ.ಎಸ್‌. ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಅಧ್ಯಕ್ಷ ಅಶೋಕ ಮಂದಾಲಿ ಮಾತನಾಡಿದರು. ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ, ಯುವ ಕಾಂಗ್ರೆಸ್‌ ಜಿಲ್ಲಾ ಉಸ್ತುವಾರಿ ಮಂಜುನಾಥ ಮಣಿಶೆಟ್ಟಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಗೋವರ್ಧನ, ಜಿಲ್ಲಾ ಯುವ ಕಾಂಗ್ರೆಸ್‌ ಸಮಿತಿ ಪ್ರಧಾನ ಕಾರ್ಯದರ್ಶಿ ಕೃಷ್ಣಗೌಡ ಪಾಟೀಲ, ಮುಖಂಡರಾದ ರಾಮಕೃಷ್ಣ ರೊಳ್ಳಿ, ಉದಯಗೌಡ ವೀರನಗೌಡ್ರ, ವಿಜಯಕುಮಾರ ಚಲವಾದಿ, ವೀರಣ್ಣ ಶೆಟ್ಟರ, ಶರಣಪ್ಪ ಬೆಟಗೇರಿ ಇತರರಿದ್ದರು.

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.