ಗದ್ದಲದ ಕೆಸರೆರಚಾಟ: ಸಂಸತ್‌ ಕಲಾಪ ವ್ಯರ್ಥ ಕುರಿತು ಆಡಳಿತ-ವಿಪಕ್ಷಗಳ ವಾಗ್ವಾದ


Team Udayavani, Jul 21, 2022, 1:03 AM IST

ಗದ್ದಲದ ಕೆಸರೆರಚಾಟ: ಸಂಸತ್‌ ಕಲಾಪ ವ್ಯರ್ಥ ಕುರಿತು ಆಡಳಿತ-ವಿಪಕ್ಷಗಳ ವಾಗ್ವಾದ

ಹೊಸದಿಲ್ಲಿ: ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗಿ 3 ದಿನಗಳು ಕಳೆದರೂ ಎರಡೂ ಸದನಗಳಲ್ಲಿ ಸುಗಮ ಕಾರ್ಯಕಲಾಪಗಳು ನಡೆದೇ ಇಲ್ಲ. ಬೆಲೆಯೇರಿಕೆ, ಜಿಎಸ್‌ಟಿ, ಅಗ್ನಿಪಥಕ್ಕೆ ಸಂಬಂಧಿಸಿ ವಿಪಕ್ಷಗಳು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಗದ್ದಲವೆಬ್ಬಿಸುತ್ತಿರುವ ಕಾರಣ ಸತತ 3ನೇ ದಿನವೂ ಕಲಾಪಗಳು ಕೊಚ್ಚಿಹೋಗಿವೆ.

ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಸೇರಿದಂತೆ ವಿಪಕ್ಷಗಳ ವಿರುದ್ಧ ಬುಧವಾರ ಕೇಂದ್ರ ಸರಕಾರ ಗರಂ ಆಗಿದೆ. ಪ್ರಹ್ಲಾದ್‌ ಜೋಷಿ, ಪಿಯೂಷ್‌ ಗೋಯಲ್‌, ಸ್ಮತಿ ಇರಾನಿ ಸೇರಿದಂತೆ ಬಿಜೆಪಿ ನಾಯಕರು ವಿಪಕ್ಷಗಳನ್ನು ತರಾಟೆಗೆ ತೆಗೆದು­ಕೊಂಡಿದ್ದು, ಆಡಳಿತಾರೂಢ ಮತ್ತು ವಿಪಕ್ಷಗಳ ನಾಯಕರ ನಡುವೆ ವಾಗ್ವಾದ ನಡೆದಿದೆ.

“ಸಂಸತ್‌ ಕಲಾಪವನ್ನು ಅತೀ ಹೆಚ್ಚು ಹಾಳುಗೆಡ­ವುದು ಯಾರು ಎಂಬ ವಿಚಾರದಲ್ಲಿ ವಿಪಕ್ಷಗಳ ನಡುವೆಯೇ ಪೈಪೋಟಿ ನಡೆಯುತ್ತಿದೆ’ ಎಂದು ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಹೇಳಿದ್ದಾರೆ. ಜತೆಗೆ, “ಬೆಲೆಯೇರಿಕೆ, ಜಿಎಸ್‌ಟಿ ಕುರಿತ ಚರ್ಚೆ­ಯಿಂದ ಸರಕಾರವೇನೂ ಹಿಂದೆ ಸರಿಯುತ್ತಿಲ್ಲ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಕೊರೊನಾದಿಂದ ಗುಣಮುಖರಾಗಿ ಬಂದ ಕೂಡಲೇ ಚರ್ಚೆಗೆ ಅವಕಾಶ ನೀಡಲಾಗುತ್ತದೆ’ ಎಂದಿದ್ದಾರೆ.

ಕಾಂಗ್ರೆಸ್‌ಗೆ ರಚನಾತ್ಮಕ ಚರ್ಚೆ ಬಗ್ಗೆ ಆಸಕ್ತಿಯಿಲ್ಲ. ಚರ್ಚೆ ನಡೆಯಬೇಕೆಂದರೆ ಸೂಕ್ತ ವಿಧಾನಗಳನ್ನು ಅನುಸರಿಸಬೇಕು. ಅದನ್ನು ವಿಪಕ್ಷಗಳು ಮಾಡು­ತ್ತಿಲ್ಲ ಎಂದು ಸಚಿವ ಜೋಷಿ ಆರೋಪಿಸಿದ್ದಾರೆ. ಇನ್ನು ಸಚಿವೆ ಸ್ಮತಿ ಇರಾನಿ ಮಾತನಾಡಿ, “ರಾಹುಲ್‌ “ರಾಜಕೀಯವಾಗಿ ಅನುತ್ಪಾದಕ’ರಾಗಿರ­ಬಹುದು. ಹಾಗಂತ, ಅವರು ಸಂಸತ್‌ನ ಉತ್ಪಾದಕತೆಯನ್ನು ಹಾಳು ಮಾಡಲು ಪ್ರಯತ್ನಿಸಬಾರದು’ ಎಂದಿದ್ದಾರೆ.

ಹಠಮಾರಿತನವೇ ಕಾರಣ: ಗದ್ದಲ ಕುರಿತು ಮಾತ­ನಾಡಿದ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, “ಸರಕಾರವು ಅಸಂಸದೀಯವಾಗಿ ವರ್ತಿ ಸುತ್ತಿದೆ. ಆಹಾರ ವಸ್ತುಗಳ ಮೇಲಿನ ಜಿಎಸ್‌ಟಿ ಕುರಿತು ಚರ್ಚೆ ನಡೆಸಬೇಕು ಎನ್ನುವುದು ನಮ್ಮ ಕೋರಿಕೆ. ಅದಕ್ಕೆ ಅವಕಾಶ ನಿರಾಕರಿಸುವ ಮೂಲಕ ಸರಕಾರ ಹಠಮಾರಿತನ ಪ್ರದರ್ಶಿಸುತ್ತಿರುವುದೇ ಕಲಾಪ ವ್ಯರ್ಥವಾಗಲು ಕಾರಣ’ ಎಂದಿದ್ದಾರೆ.

ಜಿಎಸ್ಟಿ ಅತ್ಯಂತ ಕ್ರೂರ ಕ್ರಮ: ಕಾಂಗ್ರೆಸ್‌
ದೇಶದಲ್ಲಿ ಹಣದುಬ್ಬರ ತೀವ್ರವಾಗಿದೆ, ನಿರುದ್ಯೋಗವೂ ಹೆಚ್ಚಾಗಿದೆ. ಇಂತಹ ಹೊತ್ತಿನಲ್ಲಿ ಕೇಂದ್ರ ಸರಕಾರ ಅಗತ್ಯವಸ್ತುಗಳ ಮೇಲೆ ಜಿಎಸ್‌ಟಿ ಹೆಚ್ಚಿಸಿರುವುದು ಅತ್ಯಂತ ಕ್ರೂರ ಹೆಜ್ಜೆ ಎಂದು ಕಾಂಗ್ರೆಸ್‌ ಕಿಡಿಕಾರಿದೆ. ಮೋದಿ ಸರಕಾರ ಜನರ ಆಸೆಗಳ ಮೇಲೆ ಪ್ರಹಾರ ನಡೆಸಿದೆ. ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಶೇ.7ಕ್ಕಿಂತ ಹೆಚ್ಚಾಗಿದೆ, ಸಗಟು ಸೂಚ್ಯಂಕ ಶೇ.15ದಾಟಿದೆ. ರೂಪಾಯಿ ಮೌಲ್ಯ ಕುಸಿಯುತ್ತಿದೆ. ಈ ಹೊತ್ತಿನಲ್ಲಿ ಜಿಎಸ್‌ಟಿ ಹೆಚ್ಚಿಸಿರುವುದು ಅತ್ಯಂತ ಕ್ರೂರ ಕ್ರಮ ಎಂದು ಕಾಂಗ್ರೆಸ್‌ ನಾಯಕ ಜೈರಾಂ ರಮೇಶ್‌ ಹೇಳಿದ್ದಾರೆ.

ಸಂಸತ್‌ಗೆ ಸರಕಾರದ ಮಾಹಿತಿ
2016ರಿಂದ 2020ರ ವರೆಗೆ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ 24,134 ಮಂದಿಯ ಬಂಧನ. ಆದರೆ ದೋಷಿಗಳೆಂದು ಸಾಬೀತಾಗಿದ್ದು 212 ಮಂದಿ ಮಾತ್ರ.

ಸಿಆರ್‌ಪಿಎಫ್, ಬಿಎಸ್‌ಎಫ್ ಸೇರಿದಂತೆ ಸಿಎಪಿಎಫ್ ನಲ್ಲಿ ಅಗ್ನಿವೀರರಿಗೆ ಶೇ.10 ಮೀಸ ಲಾತಿ ಕಲ್ಪಿಸಲು ತಾತ್ವಿಕ ಒಪ್ಪಿಗೆ ನೀಡಲಾಗಿದೆ.

ಆಂಧ್ರ, ತೆಲಂಗಾಣ, ಮಧ್ಯಪ್ರದೇಶ, ಲಕ್ಷದ್ವೀಪ ಹೊರತುಪಡಿಸಿ ದೇಶದ ಉಳಿದೆಡೆ ಒಟ್ಟು 13 ಲಕ್ಷ ವಿದ್ಯುತ್‌ಚಾಲಿತ ವಾಹನಗಳ ನೋಂದಣಿ

ಗಣತಿ ವೇಳೆ ಸಂಗ್ರಹಿಸಲಾದ ವೈಯಕ್ತಿಕ ಮಾಹಿತಿ ಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸು ವುದಿಲ್ಲ ಅಥವಾ ಎನ್‌ಆರ್‌ಸಿಯಂಥ ದತ್ತಾಂಶ ಸಂಗ್ರಹದಲ್ಲೂ ಬಳಕೆ ಮಾಡುವುದಿಲ್ಲ

2019ರ ಆಗಸ್ಟ್‌ನಿಂದ ಈವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 118 ನಾಗರಿಕರು ಹತ್ಯೆಗೀಡಾಗಿ ದ್ದಾರೆ. ಈ ಪೈಕಿ 21 ಮಂದಿ ಹಿಂದೂಗಳು.

2021-22ರಲ್ಲಿ ಯುಪಿಎಸ್‌ಸಿ 4,119 ಅಭ್ಯರ್ಥಿ ಗಳನ್ನು ಮಾತ್ರ ಸರಕಾರಿ ಉದ್ಯೋಗಕ್ಕೆ ಶಿಫಾರಸು

ಟಾಪ್ ನ್ಯೂಸ್

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-uv-fusion

Movie Review: ಜೀವನ ಒಂದು ಹೋರಾಟ, ಆ ಹೋರಾಟ ನಿರಂತರ

3-uv-fusion

Life Lesson: ಜಾತ್ರೆಯಲ್ಲಿ ಸಿಕ್ಕಾಕೆ ಕಲಿಸಿದ ಪಾಠ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Vijayapura; ಯತ್ನಾಳಗೆ ರಾಜಕೀಯ ಅಧಿಕಾರ ತಪ್ಪಿಸುವಲ್ಲಿ ಜಿಗಜಿಣಗಿ ಕೈವಾಡ: ಬಳ್ಳೊಳ್ಳಿ ಆರೋಪ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.