ಬಿಜೆಪಿಗೆ ಮಾತ್ರ ಹೋಗಬೇಡ ಎಂದು ಸಿದ್ದರಾಮಯ್ಯ ಹೇಳಿದ್ದಾರೆ : ಜಿ.ಟಿ.ದೇವೇಗೌಡ
ಚಾಮುಂಡೇಶ್ವರಿಗೆ ಬರಲು ಸಿದ್ದರಾಮಯ್ಯಗೆ ಆತಂಕ , ಸೇಫ್ ಪ್ಲೇಸ್ ನೋಡುತ್ತಿದ್ದಾರೆ
Team Udayavani, Jul 21, 2022, 3:07 PM IST
ಮೈಸೂರು: ನನ್ನನ್ನು ಸಿದ್ದರಾಮಯ್ಯ ಕಾಂಗ್ರೆಸ್ ಗೆ ಬಾ ಎಂದು ಕರೆದಿಲ್ಲ, ಆದರೆ ಬಿಜೆಪಿಗೆ ಮಾತ್ರ ಹೋಗಬೇಡ ಎಂದು ಹೇಳಿದ್ದಾರೆ. ಜೆಡಿಎಸ್ ನಲ್ಲೇ ಇರು ಅಂಥನೂ ಹೇಳಿಲ್ಲ,ಅವರು ಏನು ಹೇಳಿದ್ದಾರೆ ಅದನ್ನೇ ಈಗ ನಾನು ಬಹಿರಂಗವಾಗಿ ಹೇಳುತ್ತಿದ್ದೇನೆ. ನನ್ನ ನಿರ್ಧಾರ ಏನು ಎಂಬುದನ್ನು ಎರೆಡು ಮೂರು ತಿಂಗಳಲ್ಲಿ ತೀರ್ಮಾನ ಮಾಡುತ್ತೇನೆ ಎಂದು ಶಾಸಕ ಜಿ.ಟಿ. ದೇವೇಗೌಡ ಗುರುವಾರ ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಕಳೆದ ಬಾರಿ ಸೋತಿರುವ ಕಾರಣ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುವ ವಿಚಾರದಲ್ಲಿ ಅವರಿಗೆ ಆತಂಕ ಇದೆ. ಸಿದ್ದರಾಮಯ್ಯ ಸಿಎಂ ಆಗಬೇಕೆಂಬ ಆಸೆ ಇದೆ. ಹೀಗಾಗಿ ಸೇಫ್ ಪ್ಲೇಸ್ ನೋಡುತ್ತಿದ್ದಾರೆ. ಅರ್ಜಿ ಹಾಕಿ ಗೆದ್ದು ಬರವಂತಹ ಕ್ಷೇತ್ರ ಹುಡುಕುತ್ತಿದ್ದಾರೆ.ಅವರು ಚುನಾವಣೆಯಲ್ಲಿ ರಾಜ್ಯ ಪ್ರವಾಸ ಮಾಡಬೇಕಿದೆ. ಇದಕ್ಕಾಗಿ ಅಳೆದು ತೂಗಿ ಲೆಕ್ಕ ಹಾಕುತ್ತಾರೆ ಎಂದರು.
ಈಗಿನ ಚಾಮುಂಡೇಶ್ವರಿ ಶಾಸಕ ಏನು ಕಡೆದು ಕಟ್ಟೆ ಹಾಕಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ನಯವಾಗಿಯೇ ತಿರುಗೇಟು ಕೊಟ್ಟು, ಸಿದ್ದರಾಮಯ್ಯ ಶಾಸಕ, ಸಚಿವ ಉಪ ಮುಖ್ಯಮಂತ್ರಿ, ಮುಖ್ಯಮಂತ್ರಿ ಎಲ್ಲಾ ಆದವರು. ನಾನು ಕೇವಲ ಶಾಸಕ ಕೆಲವು ತಿಂಗಳು ಮಾತ್ರ ಮಂತ್ರಿಯಾಗಿದೆ. ನಾನು ಸಿದ್ದರಾಮಯ್ಯನವರಷ್ಟು ಕೆಲಸ ಮಾಡಲು ಸಾಧ್ಯವೇ? ನಾನು ಯಾವತ್ತೂ ನಾನೇ ಅಭಿವೃದ್ಧಿ ಮಾಡಿದ್ದೇನೆಂದು ಎಲ್ಲೂ ಹೇಳಿಲ್ಲ. ಸಿದ್ದರಾಮಯ್ಯ ಅಭಿವೃದ್ಧಿ ಮಾಡಿದ್ಧಾರೆ ಎಂದು ಕ್ರೆಡಿಟ್ ಕೊಟ್ಟಿದ್ದೇನೆ. ನಾನು ಏನು ಅಭಿವೃದ್ಧಿ ಕಾರ್ಯ ಮಾಡಿದ್ದೇನೆಂಬುದು ಕ್ಷೇತ್ರದ ಜನರಿಗೆ ಗೊತ್ತಿದೆ ಎಂದರು.
ಒಕ್ಕಲಿಗರು ತಮ್ಮನ್ನು ಬೆಂಬಲಿಸಬೇಕು ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಇತ್ತ ಎಚ್.ಡಿ.ಕುಮಾರಸ್ವಾಮಿ ಒಕ್ಕಲಿಗರು ನನ್ನ ಜೊತೆ ಇದ್ದಾರೆ ಎಂದು ಹೇಳುವ ವಿಚಾರಕ್ಕೂ, ಜನರ ಮನಸ್ಥಿತಿ ಈಗ ತೀರ್ಮಾನವಾಗುವುದಿಲ್ಲ,ಅದಕ್ಕೆ ಇನ್ನೂ ಸಮಯಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ