ಮುಂಗಾರು ಉದ್ದು ಬೆಳೆಗೆ ಕೀಟಗಳ ಕಾಟದ ʼಗುದ್ದು’

­ಮುಂಗಾರು ಮುಂಚೆ ಸುರಿದ ಮಳೆ ತಂದ ಭರವಸೆ; ­ತೆಲಸಂಗದಲ್ಲಿ 23,195 ಹೆಕ್ಟೇರ್‌ ಭೂಮಿಯಲ್ಲಿ ಬಿತ್ತನೆ

Team Udayavani, Jul 21, 2022, 5:03 PM IST

22

ತೆಲಸಂಗ: ಹೋಬಳಿ ಗ್ರಾಮಗಳಲ್ಲಿನ ಮುಂಗಾರು ಉದ್ದು ಬೆಳೆಯಲ್ಲಿ ಜಿಗಿ, ಹೇನು ಮತ್ತು ಕೀಟಗಳು ಕಾಣಿಸಿಕೊಂಡಿರುವುದು ರೈತರಲ್ಲಿ ಆತಂಕವನ್ನುಂಟು ಮಾಡಿದೆ. ಒಣ ಬೇಸಾಯ ಅವಲಂಬಿಸಿರುವ ತೆಲಸಂಗ ಗ್ರಾಮವೊಂದರಲ್ಲಿಯೇ 23,195 ಹೆಕ್ಟೇರ್‌ ಭೂಮಿಯಲ್ಲಿ ಉದ್ದು ಬಿತ್ತನೆ ಆಗಿದೆ.

ತಾಲೂಕಿನಲ್ಲಿ ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆ ವಾಡಿಕೆಗಿಂತ ಮುಂಚೆ ಸುರಿದ ಪರಿಣಾಮ ಶೇ.60 ಉದ್ದು ಬೆಳೆ ಬಿತ್ತನೆಯಾಗಿದೆ. ಜೂನ್‌ ತಿಂಗಳಲ್ಲಿ ಮಳೆ ಇಲ್ಲದೆ ಕಮರುವ ಹಂತದಲ್ಲಿದ್ದ ಬೆಳೆಗಳಿಗೆ ಜುಲೈ ತಿಂಗಳಲ್ಲಿ ಸುರಿದ ಮಳೆ ಆಕ್ಸಿಜನ್‌ ನೀಡಿದಂತಾಗಿತ್ತು. ಬೆಂಬಿಡದೆ ಸುರಿದ ತುಂತುರು ಮಳೆಗೆ ಬೆಳೆ ನಳನಳಿಸುತ್ತಿವೆ ಏನೋ ನಿಜ. ಆದರೆ 15 ದಿನಗಳಿಂದ ಬಿಸಲನ್ನೇ ಕಾಣದೆ ತುಂತುರು ಮಳೆ, ತಂಪಾದ ವಾತಾವರಣಕ್ಕೆ ಜಿಗಿ ರೋಗ, ಕೀಟಬಾಧೆ ಕಾಣಿಸಿಕೊಂಡಿದೆ. ಇಳುವರಿಯಲ್ಲಿ ಭಾರಿ ಪ್ರಮಾಣದ ಹೊಡೆತ ಬಿದ್ದಂತಾಗಿದೆ.

ಹೂವು, ಬಳ್ಳಿ, ಕಾಯಿ ಕಟ್ಟುವ ಹಂತದಲ್ಲಿ ರೋಗ ಕಾಣಿಸಿದ್ದು, ಜಿಗಿ ಮತ್ತು ಕೀಟಗಳ ನಿಯಂತ್ರಣಕ್ಕೆ ರೈತರು ಔಷಧಿ ಸಿಂಪರಿಸುತ್ತಿದ್ದಾರೆ. ಕಳೆದ ನಾಲ್ಕಾರು ವರ್ಷದಿಂದ ಮಳೆ ಕಡಿಮೆಯಾಗಿ ಒಂದಿಲ್ಲೊಂದು ಸಂಕಷ್ಟ ಎದುರಿಸುತ್ತಿರುವ ಒಣ ಬೇಸಾಯದ ರೈತರಿಗೆ ಸದ್ಯದ ವಾತಾವರಣ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಳೆ ತೆಗಿಯಿಸಿದರೂ ನಷ್ಟ: ಈ ತುಂತುರು ಮಳೆಗೆ ಬೆಳೆಯಷ್ಟೇ ವೇಗವಾಗಿ ಕಳೆ ಕೂಡ ಬೆಳೆದಿದೆ. ಭೂಮಿಯನ್ನು ಬೇಸಿಗೆಯಲ್ಲಿ ಹದಗೊಳಿಸಲು, ಬಿತ್ತನೆ ಮಾಡಲು ಹಾಗೂ ಬೀಜ-ಗೊಬ್ಬರಕ್ಕೆ ಮಾಡಿದ ಖರ್ಚು ಬೆಟ್ಟದಷ್ಟಾಗಿದೆ. ಈಗ ಹವಾಮಾನ ವೈಪರೀತ್ಯದಿಂದ ಇಳುವರಿಯಲ್ಲಿ ಬೀಳುವ ಹೊಡೆತದಿಂದ ಸದ್ಯ ಬೆಳೆಯಿಂದ ಖರ್ಚು ತೆಗೆಯುವುದೂ ಕಷ್ಟ. ಇಂತಹದರಲ್ಲಿ ಒಂದು ಬಾರಿ ಕಳೆ ತೆಗೆಯಿಸಿದ್ದ ರೈತ ಸದ್ಯಕ್ಕೆ ತುಂತುರು ಮಳೆಗೆ ಬೆಳೆಗಿಂತ ವೇಗವಾಗಿ ಬೆಳೆದ ಕಳೆ ತೆಗೆಯಿಸಲು ಕೂಲಿ ಖರ್ಚು ಎಲ್ಲಿಂದ ತರಬೇಕು. ಹಾಗೇನಾದರೂ ಕೂಲಿ ಕೊಟ್ಟು ಕಳೆ ತೆಗೆಸಿದರೆ ಬರುವ ಉತ್ಪನ್ನದಲ್ಲಿ ವ್ಯಯಿಸಿದ ಹಣವೂ ಕೈಗೆಟಕುವುದಿಲ್ಲ. ಹಾಗಾಗಿ ಕಳೆ ತೆಗೆಯಿಸಿದರೂ ನಷ್ಟ ಅಂತ ರೈತರು ಕೈ ಚೆಲ್ಲಿ ಕುಳಿತಿದ್ದಾರೆ.

ಉದ್ದು ಬಿತ್ತನೆ‌ಗೆ ಸಕಾಲಕ್ಕೆ ಮಳೆ ಸುರಿಯಿತು. ಆದರೆ ಸದ್ಯಕ್ಕೆ ಎಡಬಿಡದೆ ಸುರಿಯುತ್ತಿರುವ ತುಂತುರು ಮಳೆಯಿಂದ ಅರ್ಧದಷ್ಟು ಬೆಳೆಯ ಉತ್ಪನ್ನ ರೋಗಕ್ಕೆ ಬಲಿ ಆಯಿತು. ರೋಗ ನಿಯಂತ್ರಣ ಮಾಡಲಿಕ್ಕೆ ಖರ್ಚು ಮಾಡುವ ಸ್ಥಿತಿ ಸದ್ಯಕ್ಕೆ ರೈತರಿಗಿಲ್ಲ. –ಮೃತ್ಯುಂಜಯ ಮಠದ, ರೈತ, ತೆಲಸಂಗ

ಸೂರ್ಯ ಕಾಣಿಸಿಕೊಳ್ಳದೆ ಹಗಲು ರಾತ್ರಿ ಮೋಡ, ತಂಪಾದ ಹವೆಯೊಂದಿಗೆ ಜಿಟಿ ಜಿಟಿ ಮಳೆ ಸುರಿದಿದ್ದರಿಂದ ರೋಗ ಕಾಣಿಸಿಕೊಂಡಿದೆ. ಇಂತಹ ಹವಾಮಾನ ಇದ್ದಾಗ ಬೆಳೆಗಳಿಗೆ ತೊಂದರೆ ಆಗುತ್ತದೆ. ಉದ್ದು ಬೆಳೆಗೆ ಕಾಣಿಸಿಕೊಂಡ ರೋಗ ಹಾಗೂ ಕೀಟದಿಂದ ಬೆಳೆ ರಕ್ಷಣೆ ಮಾಡಿಕೊಳ್ಳಲು ಕೃಷಿ ಅ ಧಿಕಾರಿಗಳ ಅಥವಾ ತಜ್ಞರ ಸಲಹೆ ಪಡೆದು ಆರೈಕೆ ಮಾಡುವುದು ಉತ್ತಮ. –ಯಂಕಪ್ಪ ಉಪ್ಪಾರ, ಕೃಷಿ ಅಧಿಕಾರಿ, ತೆಲಸಂಗ.

ಟಾಪ್ ನ್ಯೂಸ್

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

1-qwewqewqe

Kejriwal ನಿವಾಸದಲ್ಲಿ ಹಲ್ಲೆ; ಕೊನೆಗೂ ದೂರು ದಾಖಲಿಸಿದ ಸ್ವಾತಿ ಮಲಿವಾಲ್

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

Revanna 2

Holenarasipur case; ರೇವಣ್ಣ ಅವರಿಗೆ ಒಂದು ದಿನದ ರಿಲೀಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Belagavi: ರೈಲಿನಲ್ಲಿ ಮುಸುಕುಧಾರಿಯಿಂದ ಚಾಕು ಇರಿತ: ವ್ಯಕ್ತಿ ಸಾವು,ಇಬ್ಬರಿಗೆ ಗಾಯ !

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ: ಶೆಟ್ಟರ್

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

Belagavi; ಬಿರು ಬೇಸಿಗೆಯಲ್ಲೂ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಸರಳತೆ-ಸಮಾನತೆಯ ಸಮಾಜ ನಿರ್ಮಿಸೋಣ: ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ? ಸಾರ್ವಜನಿಕರ ಆಕ್ರೋಶ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Transfer: ಕೆಇಎ ನಿರ್ದೇಶಕಿ ರಮ್ಯಾ ಎತ್ತಂಗಡಿ; ಸಿಇಟಿ ಪತ್ರಿಕೆ ಗೊಂದಲಕ್ಕೆ ತಲೆದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.