ಜೀವನದಲ್ಲಿ ಜಿಗುಪ್ಸೆ : ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಕೃಷಿಕ
Team Udayavani, Jul 21, 2022, 9:33 PM IST
ಸಾಗರ : ತಾಲೂಕಿನ ಎಡಜಿಗಳೇಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವರದಹಳ್ಳಿಯ ಕೃಷಿಕ ಮಂಜುನಾಥ ಶೆಟ್ಟಿ (52) ಜೀವನದಲ್ಲಿ ಜಿಗುಪ್ಸೆಗೊಂಡು ವಿಷ ಸೇವಿಸಿ ಸಾವಿಗೆ ಶರಣಾದ ಘಟನೆ ನಡೆದಿದೆ.
ವರದಪುರದ ಶ್ರೀಧರಾಶ್ರಮದ ಸಮೀಪ ಕಿರಾಣಿ, ಪೂಜಾ ವಸ್ತುಗಳ ಮಾರಾಟದ ಅಂಗಡಿಯನ್ನೂ ಅವರು ನಡೆಸುತ್ತಿದ್ದರು.
ಹೃದಯ ಚಿಕಿತ್ಸೆಗೊಳಗಾಗಿದ್ದ ಮಂಜುನಾಥ ಕಳೆದ ಶನಿವಾರದಂದು ರಾತ್ರಿ ಕೀಟನಾಶಕವನ್ನು ಕುಡಿದು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ತಕ್ಷಣ ಅವರನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರದಲ್ಲಿ ಅವರ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಮಂಜುನಾಥ ಕೊನೆಯುಸಿರೆಳೆದರು. ಅಸಹಜ ಸಾವಿನ ಪ್ರಕರಣದ ಮಾಹಿತಿ ಪಡೆದಿರುವ ಸಾಗರ ಗ್ರಾಮಾಂತರ ಪೊಲೀಸರು ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಶುಕ್ರವಾರ ಅಂತ್ಯಕ್ರಿಯೆ: ಮೃತ ಮಂಜುನಾಥ ಶೆಟ್ಟಿ ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಮೃತರ ಅಂತಿಮ ವಿಧಿವಿಧಾನಗಳನ್ನು ಶುಕ್ರವಾರ ನಡೆಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ