ಸಂತೆಯಲಿ ಪ್ಲಾಸ್ಟಿಕ್ ಶೋಧ: ಬಿತ್ತು ದಂಡ
Team Udayavani, Jul 22, 2022, 3:33 PM IST
ವಾಡಿ: ಪಟ್ಟಣದಲ್ಲಿ ಗುರುವಾರ ನಡೆಯುತ್ತಿದ್ದ ವಾರದ ಸಂತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡುತ್ತಿದ್ದ ವರ್ತಕರಿಗೆ ಪುರಸಭೆ ಅಧಿಕಾರಿಗಳು ದಂಡ ವಿಧಿಸಿದರು.
ಗುರುವಾರದ ಸಂತೆಗೆ ವಿವಿಧೆಡೆಯಿಂದ ಆಗಮಿಸಿ ವ್ಯಾಪಾರದಲ್ಲಿ ತೊಡಗಿದ್ದ ತರಕಾರಿ, ಹಣ್ಣು, ಹೂ, ಬಟ್ಟೆ, ತೆಂಗು, ಭಜ್ಜಿ, ಜಿಲೇಬಿ, ಮಕ್ಕಳ ಆಟಿಕೆ ವ್ಯಾಪಾರಿಗಳು ಸಾಮಾನ್ಯ ರೀತಿಯಲ್ಲಿ ಸಹಜವಾಗಿ ಪ್ಲಾಸ್ಟಿಕ್ ಕೈಚೀಲ ಹಾಗೂ ಕ್ಯಾರಿಬ್ಯಾಗ್ ಇಟ್ಟುಕೊಂಡು ಖರೀದಿಗೆ ಬಂದ ಗ್ರಾಹಕರಿಗೆ ನೀಡುತ್ತಿದ್ದರು. ಈ ವೇಳೆ ಮಾರುಕಟ್ಟೆ ಪ್ರವೇಶಿಸಿದ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪರಿಸರ ಅಭಿಯಂತರ ಪೂಜಾ ಫುಲಾರೆ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕಿ ಲತಾಮಣಿ ಎಲ್, ಕಿರಿಯ ನಿರೀಕ್ಷಕ ಬಸವರಾಜ ಪೂಜಾರಿ, ವ್ಯವಸ್ಥಾಪಕ ಮಲ್ಲಿಕಾರ್ಜುನ ಹಾರಕೂಡ, ವಿಶ್ವನಾಥ ಭಾಗೋಡಿ, ಶ್ರೀಮಂತ ಧುಮ್ಮನಸೂರ ನೇತೃತ್ವದ ತಂಡ ಪ್ಲಾಸ್ಟಿಕ್ ಶೋಧ ನಡೆಸಿತು.
ನಿಷೇಧಕ್ಕೊಳಪಟ್ಟ ಪ್ಲಾಸ್ಟಿಕ್ ಬಳಕೆಯಲ್ಲಿ ತೊಡಗಿದ ವ್ಯಾಪಾರಿಗಳಿಗೆ ದಂಡ ವಿಧಿಸುವ ಮೂಲಕ ಕಾನೂನಿನ ಬಿಸಿ ಮುಟ್ಟಿಸಿತು. ಈ ವೇಳೆ ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧಿಸಲಾಗಿದೆ. ಈ ಕುರಿತು ಸರ್ಕಾರ ಆದೇಶ ಹೊರಡಿಸಿದೆ. ವಿಷಕಾರಿಯುಕ್ತ ತ್ಯಾಜ್ಯ ಪ್ಲಾಸ್ಟಿಕ್ನ್ನು ಯಾವುದೇ ಕಾರಣಕ್ಕೂ ಬಳಕೆ ಮಾಡಬಾರದು. ಮಾಡಿದರೇ ವ್ಯಾಪಾರಿಗಳು ದಂಡ ತೆತ್ತುವ ಜತೆಗೆ ಶಿಕ್ಷೆಗೂ ಗುರಿಯಾಗಬೇಕಾಗುತ್ತದೆ ಎಂದ ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ