ರಾಷ್ಟ್ರಪತಿ ಚುನಾವಣೆ: ಸೋಲು ಕಂಡ ವಿಪಕ್ಷಗಳ ಒಗ್ಗಟ್ಟಿನ ಮಂತ್ರ


Team Udayavani, Jul 23, 2022, 10:10 AM IST

ರಾಷ್ಟ್ರಪತಿ ಚುನಾವಣೆ: ಸೋಲು ಕಂಡ ವಿಪಕ್ಷಗಳ ಒಗ್ಗಟ್ಟಿನ ಮಂತ್ರ

ರಾಷ್ಟ್ರಪತಿ ಚುನಾವಣೆಯ ಫ‌ಲಿತಾಂಶ ಹೊರಬಿದ್ದಿದ್ದು, ನಿರೀಕ್ಷೆಯಂತೆಯೇ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಜಯಶಾಲಿಯಾಗಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್‌ ಇದೆ. ಒಗ್ಗಟ್ಟಿನ ಮಂತ್ರ ಹೇಳಿಕೊಂಡೇ, ವಿಪಕ್ಷಗಳ ನಡುವೆ ಬಹುದೊಡ್ಡ ಬಿರುಕೊಂದು ಇದೇ ಚುನಾವಣೆಯಲ್ಲಿ ಬಿಂಬಿತವಾಗಿದೆ. ಇದು 2024ರ ಲೋಕಸಭೆ ಚುನಾವಣೆಗೆ ಒಟ್ಟಾಗಿ ಹೋಗಬೇಕು ಎಂಬ ವಿಪಕ್ಷಗಳ ಪ್ರಯತ್ನಕ್ಕೂ ದೊಡ್ಡ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಗಳು ಕೇಳಿಬರುತ್ತಿವೆ.

ಭಾರೀ ಪ್ರಮಾಣದ ಅಡ್ಡಮತ
ಪೂರ್ಣ ಫ‌ಲಿತಾಂಶ ಬಂದ ಮೇಲೆ ಸಿಕ್ಕಿರುವ ಅಂಕಿ ಅಂಶಗಳ ಪ್ರಕಾರ, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು, ವಿಪಕ್ಷಗಳಿಗೆ ಸೇರಿದ 125 ಶಾಸಕರು ಮತ್ತು 17 ಮಂದಿ ಸಂಸದರಿಂದ ಮತ ಪಡೆದಿದ್ದಾರೆ. ರಾಜ್ಯವಾರು ಲೆಕ್ಕಾಚಾರದಲ್ಲಿ ಹೇಳುವುದಾದರೆ, ಅಸ್ಸಾಂನಲ್ಲಿ ಅತೀ ಹೆಚ್ಚು ಮಂದಿ ಕ್ರಾಸ್‌ವೋಟಿಂಗ್‌ ಮಾಡಿದ್ದಾರೆ. ಅಲ್ಲಿನ ಕಾಂಗ್ರೆಸ್‌ ಶಾಸಕರು ಮುರ್ಮು ಅವರಿಗೆ ಮತ ಹಾಕಿದ್ದಾರೆ. ಅಲ್ಲದೆ, ಒಟ್ಟಾರೆಯಾಗಿ ಎಂಟು ರಾಜ್ಯಗಳಲ್ಲಿ ಹೆಚ್ಚು ಕ್ರಾಸ್‌ವೋಟಿಂಗ್‌ ಆಗಿದೆ ಎಂದು ಹೇಳಲಾಗುತ್ತಿದೆ.

ವಿಪಕ್ಷಗಳಿಗೆ ಹಿನ್ನಡೆ
ರಾಷ್ಟ್ರಪತಿ ಚುನಾವಣೆ ಇನ್ನೂ ಒಂದು ತಿಂಗಳಿಗಿಂತ ಹೆಚ್ಚಿರುವಾಗಲೇ ವಿಪಕ್ಷ ಗಳು ಸಭೆ ಸೇರಿ ಯಶವಂತ ಸಿನ್ಹಾ ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಿ ದ್ದವು. ತೆಲಂಗಾಣ ಮುಖ್ಯಮಂತ್ರಿ ಕೆ.ಸಿ.ಚಂದ್ರಶೇಖರ ರಾವ್‌ ಅವರು ಮುಂಚೂಣಿಯಲ್ಲಿ ನಿಂತು ವಿಪಕ್ಷಗಳನ್ನು ಒಗ್ಗೂಡಿಸುವ ಕೆಲಸ ಮಾಡಿದ್ದರು. ಬಳಿಕ ಎನ್‌ಸಿಪಿ ನಾಯಕ ಶರದ್‌ ಪವಾರ್‌ ಅವರ ಪ್ರವೇಶವಾಯಿತು. ವಿಶೇಷ ವೆಂದರೆ, ಇಲ್ಲಿ ಕಾಂಗ್ರೆಸ್‌ ಅನ್ನು ಗಣನೆಗೆ ತೆಗೆದುಕೊಂಡಿದ್ದೇ ಅನಂತರದ ದಿನಗಳಲ್ಲಿ. ಮೊದಲಿಗೆ ಶರದ್‌ ಪವಾರ್‌, ಫಾರೂಕ್‌ ಅಬ್ದುಲ್ಲಾ ಮತ್ತು ಗೋಪಾಲಕೃಷ್ಣ ಗಾಂಧಿ ಅವರನ್ನು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸಿ ಎಂದು ವಿಪಕ್ಷಗಳು ಕೇಳಿಕೊಂಡಿದ್ದವು. ಆದರೆ ಈ ಮೂವರೂ ಒಪ್ಪದ ಕಾರಣ ಟಿಎಂಸಿಯಲ್ಲಿದ್ದ, ಬಿಜೆಪಿಯ ಮಾಜಿ ನಾಯಕ ಯಶವಂತ ಸಿನ್ಹಾ ಅವರನ್ನು ಕಣಕ್ಕೆ ಇಳಿಸಿದ್ದವು.

ಎಲ್ಲಿ ಎಷ್ಟು ಅಡ್ಡಮತ?
ಅಸ್ಸಾಂನಲ್ಲಿ 22, ಬಿಹಾರ ಮತ್ತು ಛತ್ತೀಸ್‌ಗಢದಲ್ಲಿ ತಲಾ 6,ಗೋವಾದಲ್ಲಿ ನಾಲ್ಕು, ಪಶ್ಚಿಮ ಬಂಗಾಲದಲ್ಲಿ ಒಬ್ಬರು, ಗುಜರಾತ್‌ನಲ್ಲಿ 10,ಮಧ್ಯ ಪ್ರದೇಶ 19, ಮಹಾರಾಷ್ಟ್ರದಲ್ಲಿ 16, ಮೇಘಾಲಯ 7, ಪಂಜಾಬ್‌ನಲ್ಲಿ 2,
ಒಡಿಶಾ ಮತ್ತು ರಾಜಸ್ಥಾನದಲ್ಲಿ ತಲಾ 1, ಉತ್ತರಪ್ರದೇಶದಲ್ಲಿ 12, ಉತ್ತರಾಖಂಡದಲ್ಲಿ ಇಬ್ಬರು ಮುರ್ಮು ಅವರಿಗೆ ಆತ್ಮಸಾಕ್ಷಿ ಮತ ಚಲಾಯಿಸಿದ್ದಾರೆ. ಕೇರಳದಲ್ಲಿಯೂ ಒಬ್ಬರು ಮುರ್ಮು ಅವರ ಪರವಾಗಿ ಮತ ಹಾಕಿದ್ದಾರೆ.

ದ್ರೌಪದಿ ಮುರ್ಮು ಅಭ್ಯರ್ಥಿತನದ ಚಾಣಾಕ್ಷತನ
ವಿಪಕ್ಷಗಳ ಈ ಒಗ್ಗಟ್ಟಿನ ಮಂತ್ರದ ನಡುವೆಯೇ, ಕೇಂದ್ರದಲ್ಲಿ ಆಡಳಿತದಲ್ಲಿರುವ ಎನ್‌ಡಿಎ ಬೇರೊಂದು ರೀತಿಯ ಸ್ಕೆಚ್‌ ಹಾಕಿತು. ಝಾರ್ಖಂಡ್‌ನ‌ ಮಾಜಿ ರಾಜ್ಯಪಾಲರು ಮತ್ತು ಒಡಿಶಾ ಮೂಲದ ಬುಡಕಟ್ಟು ಸಮುದಾಯದ ಮಹಿಳೆ ದ್ರೌಪದಿ ಮುರ್ಮು ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತು. ಇವರ ಅಭ್ಯರ್ಥಿತನವೇ ವಿಪಕ್ಷಗಳ ಪಾಲಿಗೆ ನುಂಗಲಾರದ ತುತ್ತಾಯಿತು. ಏಕೆಂದರೆ ಉತ್ತಮ ಇಮೇಜ್‌ ಇರಿಸಿಕೊಂಡಿರುವ ಮತ್ತು ದೇಶದ ಪ್ರಮುಖ ಹಿಂದುಳಿದ ಸಮುದಾಯ ಎಸ್‌ಟಿಗೆ ಸೇರಿದ ಮುರ್ಮು ಅವರನ್ನು ವಿರೋಧಿಸುವುದು ಕೆಲವು ರಾಜಕೀಯ ಪಕ್ಷಗಳಿಗೆ ಕಷ್ಟಕರವಾಯಿತು. ಹೀಗಾಗಿಯೇ ವಿಪಕ್ಷ ಅಭ್ಯರ್ಥಿ ಯಶವಂತ ಸಿನ್ಹಾ ಅವರ ಆಯ್ಕೆಯಲ್ಲಿ ಮುಂಚೂಣಿಯಲ್ಲಿದ್ದ ಝಾರ್ಖಂಡ್‌ ಮುಕ್ತಿ ಮೋರ್ಚಾದ ಹೇಮಂತ್‌ ಸೊರೆನ್‌ ಅನಿವಾರ್ಯವಾಗಿ ಮುರ್ಮು ಅವರ ಅಭ್ಯರ್ಥಿತನವನ್ನು ಒಪ್ಪಿಕೊಳ್ಳಬೇಕಾಯಿತು.

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಏನಾಗಬಹುದು?
ರಾಷ್ಟ್ರಪತಿ ಚುನಾವಣೆಯೇ ಬೇರೆ, ಉಪರಾಷ್ಟ್ರಪತಿ ಚುನಾವಣೆಯೇ ಬೇರೆ. ರಾಷ್ಟ್ರಪತಿ ಚುನಾವಣೆಗೆ ಲೋಕಸಭೆ, ರಾಜ್ಯಸಭೆ ಮತ್ತು ವಿಧಾನಸಭೆಗಳ ಸದಸ್ಯರು ಮತ ಹಾಕುತ್ತಾರೆ. ಆದರೆ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಕೇವಲ ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಮಾತ್ರ ಮತ ಚಲಾಯಿಸುತ್ತಾರೆ. ಈಗಾಗಲೇ ಎನ್‌ಡಿಎ ಕಡೆಯಿಂದ ಜಗದೀಪ್‌ ಧನ್ಕರ್‌ ಮತ್ತು ವಿಪಕ್ಷಗಳ ಕಡೆಯಿಂದ ಮಾರ್ಗರೆಟ್‌ ಆಳ್ವ ಅವರು ಸ್ಪರ್ಧಿಸಿದ್ದಾರೆ. ಈಗಿನ ಲೆಕ್ಕಾಚಾರಗಳ ಪ್ರಕಾರ, ಎನ್‌ಡಿಎ ಅಭ್ಯರ್ಥಿಗೆ ಗೆಲುವು ಸುಲಭ. ಇದಕ್ಕೆ ಕಾರಣ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಎನ್‌ಡಿಎ ಸ್ಪಷ್ಟ ಬಹುಮತ ಹೊಂದಿದೆ. ಆದರೆ ಈಗ ವಿಪಕ್ಷಗಳಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲೇ ಒಡಕು ಮೂಡಿದೆ. ತಮ್ಮನ್ನು ಕೇಳದೇ ಮಾರ್ಗರೆಟ್‌ ಆಳ್ವ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆರೋಪಿಸಿರುವ ಟಿಎಂಸಿ, ಮತದಾನದಿಂದಲೇ ದೂರ ಉಳಿಯುವುದಾಗಿ ಹೇಳಿದೆ. ಈ ಮೂಲಕ ವಿಪಕ್ಷಗಳಲ್ಲಿ ಎಲ್ಲವೂ ಸರಿಯಾಗಿಲ್ಲ ಎಂಬುದನ್ನು ಇದು ಬಹಿರಂಗಪಡಿಸಿದೆ.

 

ಟಾಪ್ ನ್ಯೂಸ್

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

Maulana Fazlur Rahman praises India in Pakistan

Fazal ur Rehman; ಭಾರತ ಸೂಪರ್‌ಪವರ್‌, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.