ದೆಹಲಿ ರೈಲ್ವೆ ನಿಲ್ದಾಣದ ಮೇಲ್ಸೆತುವೆಯಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಆರೋಪಿಗಳ ಸೆರೆ
ಆರೋಪಿಗಳಲ್ಲಿ ಒಬ್ಬ ತನ್ನನ್ನು ದೆಹಲಿಯಲ್ಲಿ ಬಂದು ಭೇಟಿಯಾಗಿ ಮಾತನಾಡುವಂತೆ ತಿಳಿಸಿದ್ದ.
Team Udayavani, Jul 23, 2022, 12:05 PM IST
ನವದೆಹಲಿ: ರೈಲ್ವೆ ನಿಲ್ದಾಣದ ಮೇಲ್ಸೆತುವೆ ಹಾದಿಯಲ್ಲಿ ಮಹಿಳೆಯ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ ನಡೆದಿದ್ದು, ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಭಟ್ಕಳ: ಖಾಸಗಿ ಗೋಡೌನ್ ನಲ್ಲಿ 930 ಪಡಿತರ ಅಕ್ಕಿ ಚೀಲಗಳು ದಾಸ್ತಾನು; ಅಧಿಕಾರಿಗಳು ಭೇಟಿ
ಶನಿವಾರ ಮಧ್ಯರಾತ್ರಿ ಈ ಘಟನೆ ನಡೆದಿದೆ. ಆರೋಪಿಯ ಹೇಳಿಕೆ ಪ್ರಕಾರ, ರೈಲ್ವೆ ಇಲಾಖೆಯ ಉದ್ಯೋಗಿಯೊಬ್ಬರು ಕೆಲಸ ಕೊಡಿಸುವುದಾಗಿ ಹೇಳಿದ್ದರಿಂದ ಅವರನ್ನು ಸಂಪರ್ಕಿಸಲು ಬಂದಿರುವುದಾಗಿ ತಿಳಿಸಿದ್ದಾಳೆ.
ಆರೋಪಿಗಳಲ್ಲಿ ಒಬ್ಬ ತನ್ನನ್ನು ದೆಹಲಿಯಲ್ಲಿ ಬಂದು ಭೇಟಿಯಾಗಿ ಮಾತನಾಡುವಂತೆ ತಿಳಿಸಿದ್ದ. ಹೀಗೆ ಭೇಟಿಯಾದ ನಂತರ ಶುಕ್ರವಾರ ರಾತ್ರಿ ತನ್ನ ಮೇಲೆ ನಾಲ್ವರು ಅತ್ಯಾಚಾರ ಎಸಗಿರುವುದಾಗಿ ಮಹಿಳೆ ಆರೋಪಿಸಿದ್ದಾಳೆ. ನಾಲ್ವರು ಆರೋಪಿಗಳು ರೈಲ್ವೆ ಉದ್ಯೋಗಿಗಳಾಗಿದ್ದು, ರೈಲ್ವೆ ವಿದ್ಯುತ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಆರೋಪಿಗಳನ್ನು ಸತೀಶ್ ಕುಮಾರ್ (35ವರ್ಷ), ವಿನೋದ್ ಕುಮಾರ್ (38), ಮಂಗಲ್ ಚಾಂದ್ ಮೀನಾ (33ವರ್ಷ) ಮತ್ತು ಜಗದೀಶ್ ಚಾಂದ್ (37) ಎಂದು ಗುರುತಿಸಲಾಗಿದೆ. ಘಟನೆ ನಡೆದು ಎರಡು ಗಂಟೆಯೊಳಗೆ ಎಲ್ಲಾ ಆರೋಪಿಗಳನ್ನು ಬಂಧಿಸಿದ್ದು, ಕೋರ್ಟ್ ನ್ಯಾಯಾಂಗ ಬಂಧನಕ್ಕೊಪ್ಪಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!
Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್
ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ
Lok Sabha; ರಾಯ್ಬರೇಲಿ, ಅಮೇಠಿ ಕಾಂಗ್ರೆಸ್ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್!