ದೇವೇಗೌಡರು ಸ್ಪರ್ಧಿಸಿದರೆ ಮಾತ್ರ ಸ್ಪರ್ಧೆ: ಸಂಸದ ಜಿ.ಎಸ್.ಬಸವರಾಜು
Team Udayavani, Jul 23, 2022, 10:24 PM IST
ತುಮಕೂರು: ವಯೋ ಸಹಜ ಹಿನ್ನೆಲೆ ನಾನೂ ಚುನಾವಣಾ ನಿವೃತ್ತಿ ಹೊಂದುತ್ತೇನೆ, ಮುಂದಿನ ಬಾರಿ ಸ್ಪರ್ಧೆ ಮಾಡಲ್ಲ, ವಯಸ್ಸಿನ ಹಿನ್ನೆಲೆ ಪಕ್ಷ ನನಗೆ ಟಿಕೆಟ್ ಕೊಡಲ್ಲ. ಆದರೆ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತುಮಕೂರಿನಿಂದ ಒಮ್ಮೆ ಆದರೂ ಎಂಪಿ ಆಗಬೇಕು ಎಂದಿದ್ದಾರೆ. ಅವರು ಸ್ಪರ್ಧಿಸಿದರೆ ಅವರ ವಿರುದ್ಧ ನಾನೂ ಸ್ಪರ್ಧೆ ಮಾಡುತ್ತೇನೆ. ಪಕ್ಷ ಟಿಕೆಟ್ ಕೊಡದಿದ್ದರೂ ಪಕ್ಷೇತರನಾಗಿ ಸ್ಪರ್ಧೆ ಮಾಡುತ್ತೇನೆ ಸಂಸದ ಜಿ.ಎಸ್.ಬಸವರಾಜು ನುಡಿದರು.
ಪತ್ರಕರ್ತರೊಂದಿಗೆ ಚುನಾವಣಾ ರಾಜಕೀಯದಿಂದ ಯಡಿಯೂರಪ್ಪ ನಿವೃತ್ತಿ ಘೋಷಣೆ ವಿಚಾರವಾಗಿ ಮಾತಾಡು ವಾಗ ಈ ವಿಷಯ ಪ್ರಸ್ತಾಪಿಸಿದ ಅವರು, ಬಿ.ಎಸ್.ಯಡಿಯೂರಪ್ಪ ನಿವೃತ್ತಿ ಘೋಷಣೆ ಮಾಡಲ್ಲ, ಅವರು ರಾಜಕೀಯದಲ್ಲಿ ಸಕ್ರಿಯವಾಗಿ ಇರುತ್ತಾರೆ ಎಂದರು.
ಅವರು ನಿಂತ ನೀರಲ್ಲ, ಬದುಕಿರುವವರೆಗೂ ಹೋರಾಟ ಮಾಡುತ್ತಾರೆ. ಯಡಿಯೂರಪ್ಪ ಮೈನಸ್ ಆದರೆ ಬಿಜೆಪಿಗೆ ಬಹಳ ಕಷ್ಟ. ಯಾವುದೇ ಕಾರಣಕ್ಕೂ ಬಿಜೆಪಿ ಅವರನ್ನು ಬಿಡುವುದಿಲ್ಲ.
ಬಿಜೆಪಿ ಬಿಟ್ಟು ಹೋದರೆ ಅವರಿಗೆ ಸುಖ, ಯಶಸ್ಸು ಇರಲ್ಲ. ಅವರ ಸೇವೆ ಬಿಜೆಪಿಗೆ ಬೇಕೇ ಬೇಕು. ಒಂದಕ್ಕೊಂದು ಅವಿನಾಭಾವ ಸಂಬಂಧ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್