ಕೆಎಸ್‌ಟಿಡಿಸಿ ನಷ್ಟದ ಹಾದಿಯಿಂದ ಲಾಭದ ಹಳಿಗೆ

 ಕೋವಿಡ್ ಸಂದರ್ಭ 18 ಕೋಟಿ ರೂ. ಸಾಲ ; ಈಗ 9 ಕೋಟಿ ರೂ. ಲಾಭ

Team Udayavani, Jul 24, 2022, 6:25 AM IST

ಕೆಎಸ್‌ಟಿಡಿಸಿ ನಷ್ಟದ ಹಾದಿಯಿಂದ ಲಾಭದ ಹಳಿಗೆ

ಬೆಂಗಳೂರು: ರಾಜ್ಯ ಸರಕಾರಿ ಸ್ವಾಮ್ಯದ ಕರ್ನಾಟಕ ಪ್ರವಾಸೋದ್ಯಮ ನಿಗಮವು ನಷ್ಟದ ಹಾದಿಯಿಂದ ಲಾಭದ ಹಳಿಗೆ ಬಂದು ಖಾಸಗಿ ಸಂಸ್ಥೆಗಳಿಗೆ ಪೈಪೋಟಿ ನೀಡುತ್ತಿದೆ.

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ನಿಗಮವು ರಾಜ್ಯ ಹಾಗೂ ಹೊರ ರಾಜ್ಯದಲ್ಲಿ ಹಲವಾರು ಪ್ರವಾಸಿ ತಾಣಗಳಲ್ಲಿ ಹೊಟೇಲ್‌ಗ‌ಳನ್ನು ನಡೆಸುತ್ತಿದೆ. ಹಲವಾರು ವರ್ಷಗಳಿಂದ ಹೊಟೇಲ್‌ಗ‌ಳ ಕಳಪೆ ನಿರ್ವಹಣೆ ಹಾಗೂ ಅಲ್ಲಿ ದೊರೆಯುವ ಆಹಾರ ಪದಾರ್ಥಗಳ ಬಗ್ಗೆ ಸಾರ್ವಜನಿಕರಿಗೆ ನಕಾರಾತ್ಮಕ ಭಾವನೆ ಇದ್ದುದರಿಂದ ಇವು ನಷ್ಟದಲ್ಲಿತ್ತು. ಪ್ರತಿ ತಿಂಗಳು ಸಿಬಂದಿಯ ಸಂಬಳ ನೀಡುವುದಕ್ಕೂ ಕಷ್ಟ ಪಡುವಂತಹ ಪರಿಸ್ಥಿತಿ ಎದುರಾಗಿತ್ತು.

ಕೊರೊನಾ ಸಂದರ್ಭದಲ್ಲಿ 18 ಕೋಟಿ ರೂ. ಸಾಲದ ಭಾರ ಹೊತ್ತುಕೊಂಡಿತ್ತು.ನಿರ್ವಹಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಿರುವುದರಿಂದ ನಾಲ್ಕೇ ತಿಂಗಳಲ್ಲಿ 9 ಕೋಟಿ ರೂ. ಲಾಭ ಗಳಿಸಿದೆ. ಸಂಸ್ಥೆ ವಾರ್ಷಿಕ ಸುಮಾರು 46 ಕೋಟಿ ರೂ. ವಹಿವಾಟು ನಡೆಸುತ್ತಿದ್ದು, ಈ ವರ್ಷ 100 ಕೋಟಿ ರೂ. ಗುರಿ ಹಾಕಿಕೊಂಡಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌ ತಿಳಿಸಿದ್ದಾರೆ.

ಕೆಎಸ್‌ಟಿಡಿಸಿ ನಡೆಸುವ ಮಯೂರ ಹೊಟೇಲ್‌ಗಳ ಬಗ್ಗೆ ಸಾರ್ವಜನಿಕರಿಗೆ ಇರುವ ಅಭಿಪ್ರಾಯವನ್ನು ಮನಗಂಡು ಅಲ್ಲಿನ ಅಡುಗೆ ಪಾತ್ರೆ, ತಟ್ಟೆ, ಲೋಟ (ಕ್ರಾಕರೀಸ್‌)ದಿಂದ ಹಿಡಿದು ಎಲ್ಲವನ್ನೂ ಬದಲಾಯಿಸಲಾಗಿದೆ.

ಹೊಸ ರೂಪ
ಹೊಟೇಲ್‌ ರೂಮುಗಳಿಗೆ ಹೊಸ ರೂಪ ನೀಡಲಾಗಿದ್ದು, ಹಾಸಿಗೆ, ದಿಂಬು, ಬೆಡ್‌ಶೀಟ್‌ ಮುಂತಾದವುಗಳನ್ನು ಬದಲಾಯಿಸಿ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುವ ಪ್ರಯತ್ನ ಮಾಡಲಾಗಿದೆ. ನಂದಿಬೆಟ್ಟ, ಊಟಿ, ಸಂಗಮ, ಮುತ್ಯಾಲ ಮಡುವುಗಳಲ್ಲಿ ಹೊಸದಾಗಿ 30 ರೂಮುಗಳನ್ನು ನಿರ್ಮಾಣ ಮಾಡಲಾಗಿದೆ.

ಖಾಸಗಿ ಹೊಟೇಲ್‌ಗ‌ಳಿಗೆ ಸ್ಪರ್ಧೆ
ಖಾಸಗಿ ಹೊಟೇಲ್‌ಗ‌ಳಿಗೆ ಸ್ಪರ್ಧೆ ನೀಡುವ ಮಟ್ಟಕ್ಕೆ ಉತ್ತಮ ಸೇವೆ ಒದಗಿಸುವಂತೆ ಮಾರ್ಪಡಿಸಲಾಗಿದ್ದು, ಸರಕಾರಿ ನೌಕರರಿಗೆ ಶೇ.15ರಷ್ಟು ರಿಯಾಯಿತಿಯನ್ನೂ ಕೆಎಸ್‌ಟಿಡಿಸಿ ನೀಡುತ್ತಿದೆ. ಅಲ್ಲದೆ, ಪ್ರವಾಸಿಗರನ್ನು ಸೆಳೆಯಲು ರೂಮಿನ ಬಾಡಿಗೆ ಮತ್ತು ಊಟದದರದಲ್ಲಿ ಶೇ.20 ಕಡಿತ ಮಾಡುವ ಮೂಲಕ ಗ್ರಾಹಕ ಸ್ನೇಹಿಯಾಗಿ ಪ್ರವಾಸಿಗರನ್ನು ಸೆಳೆಯುತ್ತಿದೆ.

ವುಡನ್‌ ಕಾಟೇಜ್‌ಅತಿ ಕಡಿಮೆ ವೆಚ್ಚದಲ್ಲಿ ಪ್ರವಾಸಿಗರಿಗೆ ಆಕರ್ಷಣೀಯವಾಗುವಂತೆ ತಮಿಳುನಾಡಿನ ಊಟಿಯಲ್ಲಿ 10 ಹಾಗೂ ಚಿಕ್ಕಬಳ್ಳಾಫ‌ುರ ಜಿಲ್ಲೆಯ ನಂದಿ ಬೆಟ್ಟದಲ್ಲಿ 10 ವುಡನ್‌ ಕಾಟೇಜ್‌ಗಳನ್ನು ನಿರ್ಮಿಸಲು ತೀರ್ಮಾನಿಸಲಾಗಿದೆ.

ದಸರಾ ಪ್ಯಾಕೇಜ್‌ ಪ್ಲ್ಯಾನ್
ಮುಂದಿನ ದಸರಾ ಸಂದರ್ಭದಲ್ಲಿ ಮೈಸೂರು ಹಾಗೂ ಸುತ್ತ ಮುತ್ತಲಿನ ಪ್ರವಾಸಿ ತಾಣಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರನ್ನು ಸೆಳೆಯಲು ವಿಶೇಷ ಪ್ಯಾಕೇಜ್‌ ಘೋಷಿಸಲು ನಿಗಮ ನಿರ್ಧರಿಸಿದೆ. ಮಡಿಕೇರಿ, ನಾಗರಹೊಳೆ, ಬಂಡೀಪುರ, ಸೋಮನಾಥಪುರ, ಬೇಲೂರು ಹಳೆಬೀಡು ಮುಂತಾದ ಪ್ರವಾಸಿ ತಾಣಗಳಿಗೆ ವಿಶೇಷ ಪ್ಯಾಕೇಜ್‌ ನೀಡಲು ನಿಗಮ ತೀರ್ಮಾನಿಸಿದೆ.

ಕೆಎಸ್‌ಟಿಡಿಸಿ ಹೊಟೇಲ್‌ ಕಡೆಗೆ ಪ್ರವಾಸಿಗರನ್ನು ಸೆಳೆಯಲು ಇರುವ ಒಂದೇ ಒಂದು ಉಪಾಯ ಅಂದರೆ, ಹೊಟೇಲ್‌ನ ಸ್ವಚ್ಛತೆ, ಆಹಾರದ ಗುಣಮಟ್ಟ ಕಾಯ್ದುಕೊಳ್ಳುವುದು. ಇವೆರಡರ ಕಡೆಗೆ ಹೆಚ್ಚಿನ ಒತ್ತು ನೀಡಿದ್ದು, ನಾಲ್ಕು ತಿಂಗಳಲ್ಲಿ ಅದರ ಫ‌ಲಿತಾಂಶ ಲಭ್ಯವಾಗಿದೆ.
-ಜಿ. ಜಗದೀಶ್‌, ಕೆಎಸ್‌ಟಿಡಿಸಿ ಎಂ.ಡಿ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.