‘ವಿಕಿಪೀಡಿಯ’ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಯಶವಂತ್‌ ಎಂಟ್ರಿ


Team Udayavani, Jul 24, 2022, 3:08 PM IST

‘ವಿಕಿಪೀಡಿಯ’ ಮೂಲಕ ಕಿರುತೆರೆಯಿಂದ ಬೆಳ್ಳಿತೆರೆಗೆ ಯಶವಂತ್‌ ಎಂಟ್ರಿ

ಇಂದಿನ ತಾಂತ್ರಿಕ ಯುಗದಲ್ಲಿ ಸಾಮಾನ್ಯವಾಗಿ ಯಾವುದಾದರು ವಿಷಯದ ಬಗ್ಗೆ ತಿಳಿದುಕೊಳ್ಳಬೇಕು ಎಂದರೆ ಮೊದಲು ಹುಡುಕುವುದೇ “ವಿಕಿಪೀಡಿಯ’ದಲ್ಲಿ. ಮಾಹಿತಿಯ ಜ್ಞಾನಕೋಶ ಅಂತಾಲೇ ಕರೆಸಿಕೊಳ್ಳುವ “ವಿಕಿಪೀಡಿಯ’ ಬಗ್ಗೆ ಯಾರಿಗೆ ಗೊತ್ತಿಲ್ಲ ಹೇಳಿ? ಈಗ ಇದೇ “ವಿಕಿಪೀಡಿಯ’ ಎಂಬ ಹೆಸರಿನಲ್ಲಿ ಕನ್ನಡದಲ್ಲೊಂದು ಸಿನಿಮಾ ತಯಾರಾಗಿದೆ. ಅಂದಹಾಗೆ, ಈ ಸಿನಿಮಾದ ಹೆಸರು “ವಿಕಿಪೀಡಿಯ’ ಅಂತಿದ್ದರೂ, ಇದು ತಂತ್ರಜ್ಞಾನ ಅಥವಾ ಸೋಶಿಯಲ್‌ ಮೀಡಿಯಾಗಳಿಗೆ ಸಂಬಂಧಿಸಿದ ಸಿನಿಮಾವಲ್ಲ. ಬದಲಾಗಿ ಇದು ಅಪ್ಪಟ ಲವ್‌ ಕಂ ಸೆಂಟಿಮೆಂಟ್‌ ಕಥಾಹಂದರದ ಸಿನಿಮಾ.

ಬಹುತೇಕ ಹೊಸ ಪ್ರತಿಭೆಗಳೇ ಸೇರಿ ನಿರ್ಮಿಸಿರುವ “ವಿಕಿಪೀಡಿಯ’ ಸಿನಿಮಾದ ಕೆಲಸಗಳು ಸದ್ದಿಲ್ಲದೆ ಪೂರ್ಣಗೊಂಡಿದ್ದು, ಈಗಾಗಲೇ ಪ್ರಾದೇಶಿಕ ಸೆನ್ಸಾರ್‌ ಮಂಡಳಿಯಿಂದ ಸಿನಿಮಾಕ್ಕೆ “ಯು/ಎ’ ಪ್ರಮಾಣ ಪತ್ರ ಕೂಡ ಸಿಕ್ಕಿದೆ. ಇದೇ ಖುಷಿಯಲ್ಲಿರುವ ಚಿತ್ರತಂಡ, ಶೀಘ್ರದಲ್ಲಿಯೆ “ವಿಕಿಪೀಡಿಯ’ವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ.

ಈ ಹಿಂದೆ ಕಿರುತೆರೆಯಲ್ಲಿ “ಸತ್ಯಂ ಶಿವಂ ಸುಂದರಂ’, “ಒಂದೂರಲ್ಲಿ ರಾಜರಾಣಿ’, “ಮಹಾದೇವಿ’, “ಶಾಂತಂ ಪಾಪಂ’, “ಯಾರೇ ನೀ ಮೋಹಿನಿ…’ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ ಅನುಭವವಿರುವ ಯಶವಂತ್‌ “ವಿಕಿಪೀಡಿಯ’ ಸಿನಿಮಾ ಮೂಲಕ ನಾಯಕ ನಟನಾಗಿ ಬೆಳ್ಳಿತೆರೆಗೆ ಎಂಟ್ರಿ ನೀಡುತ್ತಿದ್ದಾರೆ. “ವಿಕಿಪೀಡಿಯ’ ಸಿನಿಮಾದಲ್ಲಿ ವಿಕಾಸ್‌ ಎಂಬ ಪಾತ್ರದಲ್ಲಿ ನಾಯಕ ಯಶವಂತ್‌ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಆಶಿಕಾ ಸೋಮಶೇಖರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.

“ರಫ್ ಕಟ್‌ ಪ್ರೊಡಕ್ಷನ್‌’ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ “ವಿಕಿಪೀಡಿಯ’ ಸಿನಿಮಾಕ್ಕೆ ನವ ನಿರ್ದೇಶಕ ಸೋಮು ಹೊಯ್ಸಳ ಆಕ್ಷನ್‌-ಕಟ್‌ ಹೇಳಿದ್ದಾರೆ. ಚಿತ್ರಕ್ಕೆ ಚಿದಾನಂದ್‌ ಹೆಚ್‌.ಕೆ ಛಾಯಾಗ್ರಹಣ, ರವಿಚಂದ್ರನ್‌ ಸಿ. ಸಂಕಲನವಿದೆ. ಚಿತ್ರದ ಹಾಡುಗಳಿಗೆ ರಾಕೇಶ್‌ ಯು. ಪಿ ಮತ್ತು ನಿಲೀಮ ರಾವ್‌ ಸಂಗೀತ ಸಂಯೋಜಿಸಿದ್ದಾರೆ.

ಕೆಲ ದಿನಗಳ ಹಿಂದಷ್ಟೇ “ವಿಕಿಪೀಡಿಯ’ ಸಿನಿಮಾದ ಮೋಷನ್‌ ಪೋಸ್ಟರ್‌ ಬಿಡುಗಡೆಯಾಗಿದ್ದು, ಮೆಚ್ಚುಗೆ ಪಡೆದು ಕೊಳ್ಳುತ್ತಿದೆ. ಇದರ ಬೆನ್ನಲ್ಲೆ ಸಿನಿಮಾದ “ತನು ಮನ…’ ಎಂಬ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಎಲ್ಲ ಅಂದು ಕೊಂಡಂತೆ ನಡೆದರೆ, ಇದೇ ಆಗಸ್ಟ್‌ ಅಥವಾ ಸೆಪ್ಟೆಂಬರ್‌ ವೇಳೆಗೆ “ವಿಕಿಪೀಡಿಯ’ ಪ್ರೇಕ್ಷಕರ ಮುಂದೆ ಬರುವ ಯೋಚನೆಯಲ್ಲಿದೆ

ಟಾಪ್ ನ್ಯೂಸ್

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.