ಬಿಡುವು ಕೊಟ್ಟ ಮಳೆ: ಕೃಷಿ ಚಟುವಟಿಕೆಗೆ ಕಳೆ
ಚೇತರಿಸಿಕೊಳ್ಳುತ್ತಿರುವ ಬೆಳೆ ; ಅಧಿಕಾರಿಗಳಿಂದ ರೈತರಿಗೆ ಮಾಹಿತಿ ; ಬೆಳೆಗಳಿಗೆ ಮಿತವಾಗಿ ಔಷಧಿ-ಗೊಬ್ಬರ ನೀಡಿ
Team Udayavani, Jul 24, 2022, 3:13 PM IST
ಕುಳಗೇರಿ ಕ್ರಾಸ್: ಮಲೆನಾಡಿನಂತೆ ಕಳೆದ ಒಂದು ವಾರಕ್ಕೂ ಹೆಚ್ಚು ಕಾಲ ಸುರಿದ ಜಿಟಿ ಜಿಟಿ ಮಳೆಗೆ ರೈತರು ಕಂಗಾಲಾಗಿದ್ದರು. ರೈತ ಬೆಳೆಗಾರರ ನಿದ್ದೆಗೆಡಿಸಿದ್ದ ಮಳೆರಾಯ ಬಿಡುವು ಕೊಟ್ಟಿದ್ದು, ರೈತರ ಕೃಷಿ ಚಟುವಟಿಕೆ ಚುರುಕುಗೊಂಡಿದೆ.
ಬಿಸಿಲಿನ ದರ್ಶನದಿಂದ ಬೆಳೆಗಳು ಚೇತರಿಸಿಕೊಳ್ಳುತ್ತಿವೆ. ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ರೈತರು ಸಂಪರ್ಕಿಸಿ ಮಾಹಿತಿ ಪಡೆಯುತ್ತಿದ್ದಾರೆ. ರಸಗೊಬ್ಬರ ಅಂಗಡಿಗಳಿಗೆ ತೆರಳಿ ಔಷಧಿ ಖರೀದಿಗೆ ಮುಂದಾಗಿದ್ದಾರೆ. ಬೆಳೆದ ಬೆಳೆಗಳು ಕೈ ತಪ್ಪಬಾರದು ಎಂಬ ಕಾರಣಕ್ಕೆ ಸಾಲಮಾಡಿ ಔಷಧಿ ಖರೀದಿಸುತ್ತಿದ್ದಾರೆ.
ಅಕಾಲಿಕ ಮಳೆಯಿಂದ ಬೆಳೆ ಕಳೆದುಕೊಂಡ ಕೆಲವು ರೈತರು ಬೆಳೆನಷ್ಟ ಅನುಭವಿಸುವ ಚಿಂತೆಯಲ್ಲಿದ್ದರೆ, ಇನ್ನು ಕೆಲ ರೈತರು ಔಷಧ ಗೊಬ್ಬರ ಕೊಟ್ಟು ತಮ್ಮ ಬೆಳೆ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಎತ್ತುಗಳನ್ನು ಬಳಸಿ ಎಡೆ ಹೊಡೆದು ಕಸ ಕಿತ್ತು ಸ್ವಚ್ಛಗೊಳಿಸುವಲ್ಲಿ ಮಗ್ನರಾಗಿದ್ದಾರೆ.
ಸತತ ಮಳೆಗೆ ಚಿಕ್ಕ ಬೆಳೆಗಳು ಹಾಳಾಗಿವೆ. ಸದ್ಯ ವಾತಾವರಣ ಬದಲಾಗಿದ್ದು ಬಿಸಿಲಿಗೆ ಬೆಳೆಗಳು ಚೇತರಿಸಿಕೊಳ್ಳುತ್ತಿವೆ. ಬೆಳೆಗಳನ್ನು ಉಳಿಸಿಕೊಳ್ಳುವಲ್ಲಿ ಪ್ರಯತ್ನಿಸಬೇಕು ಎಂದು ರೈತರು ತಿಳಿಸಿದ್ದಾರೆ. ಸತತ ಮಳೆಗೆ ರೈತರ ಬೆಳೆಗಳು ಹಾಳಾಗುವ ಸ್ಥಿತಿಗೆ ಬಂದಿದ್ದವು. ಈ ಮಳೆಯಿಂದ ಅಲ್ಪ-ಸ್ವಲ್ಪ ರೈತರ ಬೆಳೆಗಳು ಹಾಳಾಗಿದ್ದು ಸದ್ಯ ಎರಡ್ಮೂರು ದಿನಗಳಿಂದ ಬಿಸಿಲಿನ ಕಿರಣಗಳು ಬಿದ್ದಿದ್ದು, ಬೆಳೆಗಳು ಚೇತರಿಸಿಕೊಳ್ಳುತ್ತಿವೆ. ಸಾಕಷ್ಟು ಖರ್ಚು ಮಾಡಿ ಔಷಧಿ ಬಳಸಿ ಬೆಳೆ ಉಳಿಸಿಕೊಳ್ಳುವ ಸತತ ಪ್ರಯತ್ನದಲ್ಲಿದ್ದಾರೆ ರೈತರು. ವಾರ ಬಿಸಿಲು ಇದ್ದರೆ ರೈತರ ಬೆಳೆಗಳು ಉತ್ತಮ ಸ್ಥಿತಿಗೆ ಬದಲಾಗುತ್ತವೆ ಎನ್ನುತ್ತಾರೆ ಕಾಕನೂರ ರೈತ ರವಿ ಹೆರಕಲ್.
ಧಾರಾಕಾರ ಮಳೆ: ಕಳೆದ ನಾಲ್ಕೈದು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ ಶನಿವಾರ ಸಂಜೆ ಆರ್ಭಟ ತೋರಿಸಿದ್ದಾನೆ. ಗ್ರಾಮದಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ರಭಸದಿಂದ ಸುರಿದ ಮಳೆಗೆ ಚರಂಡಿ ಮತ್ತು ರಸ್ತೆ ತುಂಬ ನೀರು ಹರಿದಿದೆ.
ಸದ್ಯ ಮಳೆ ಕಡಿಮೆಯಾಗಿದ್ದು, ರೈತರು ಅವಸರ ಪಡದೆ ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ, ಮಾಹಿತಿ ಪಡೆದು ಬೆಳೆಗಳ ರಕ್ಷಣೆಗೆ ಮುಂದಾಗಬೇಕು. ಅನಾವಶ್ಯಕ ಔಷಧಿ ಬಳಸದೆ ಬೆಳೆಗಳಿಗೆ ಮಿತವಾಗಿ ಔಷಧಿ ಗೊಬ್ಬರ ಕೊಡಬೇಕು. –ಬಸವರಾಜ ಬುದ್ನಿ, ಕುಳಗೇರಿ ಕೃಷಿ ಅಧಿಕಾರಿ
-ಮಹಾಂತಯ್ಯ ಹಿರೇಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ
Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ
Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ
ಆನ್ಲೈನ್ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!
Online ವಂಚಕರಿದ್ದಾರೆ ಹುಷಾರ್..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್