ಭಾರತ ಸೇವಾದಳ ಕಾರ್ಯ ಶ್ಲಾಘನೀಯ: ನಾಗೂರ


Team Udayavani, Jul 24, 2022, 5:25 PM IST

19sevadal

ಸಿಂದಗಿ: ದೇಶಾಭಿಮಾನ ಶಿಸ್ತು ಸೇವಾ ಮನೋಭಾವನೆ ಹಾಗೂ ರಾಷ್ಟ್ರ ಧ್ವಜ ರಾಷ್ಟ್ರಗೀತೆ ಕುರಿತಾದ ತರಬೇತಿ ನೀಡುತ್ತಿರುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯ ಎಂದು ಭಾರತ ಸೇವಾದಳದ ತಾಲೂಕಾಧ್ಯಕ್ಷ ಚಂದ್ರಶೇಖರ ನಾಗೂರ ಹೇಳಿದರು.

ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಭಾರತ ಸೇವಾದಳ ಶಿಕ್ಷಕ ಮಿಲಾಪ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೇಶದ ಸೇವೆಗಾಗಿ ಹುಟ್ಟಿಕೊಂಡಿರುವ ಸೇವಾದಳ ಶಿಸ್ತು, ತಾಳ್ಮೆ, ಸೇವಾ ಮನೋಭಾವದಿಂದ ಬಲಿಷ್ಠ ಸಂಸ್ಥೆಯಾಗಿ ಬೆಳೆದಿದೆ. ಇಂದಿನ ಮಕ್ಕಳು ಅತ್ಯುತ್ತಮ ಕಲಿಕೆ ಮೂಲಕ ಆಧುನಿಕತೆಯನ್ನು ಮೈಗೂಡಿಸಿಕೊಂಡಿದ್ದಾರೆ. ಕೆಲವು ದುಶ್ಚಟಗಳ ಮೂಲಕ ಭವಿಷ್ಯಕ್ಕೆ ಸಂಚಕಾರ ತರಿಸಿಕೊಳ್ಳುತ್ತಿದ್ದಾರೆ. ಸೇವಾದಳದ ಮೂಲಕ ದೇಶಪ್ರೇಮ, ಭಕ್ತಿ ಸೇವೆ ಮನೋಭಾವ ಮೂಡಿಸಿದರೆ ಉತ್ತಮ ನಾಗರಿಕರಾಗಿ ಬೆಳೆಯಲು ಸಾಧ್ಯ ಎಂದರು.

ರಾಷ್ಟ್ರದ ಗರಿಮೆಗೆ ಗರಿ ಮೂಡಿಸಿದ್ದು ಸೇವಾದಳ. ಪ್ರತಿಯೊಬ್ಬರಿಗೂ ಆತ್ಮಸ್ಥೈರ್ಯ ಬೆಳೆಸಿಕೊಳ್ಳಲು ಯೋಗ ಶಿಕ್ಷಣದ ಅಗತ್ಯವಿದೆ. ಸೇವಾದಳದ ಉತ್ತಮ ಚಟುವಟಿಕೆಗಳ ಮೂಲಕ ಜಿಲ್ಲೆ ರಾಜ್ಯದಲ್ಲಿ ಉತ್ತಮ ಸ್ಥಾನದಲ್ಲಿದೆ ಎಂದು ಹೆಮ್ಮೆ ವ್ಯಕ್ತಪಡಿಸಿದರು.

ಶಿಬಿರ ಉದ್ಘಾಟಿಸಿದ ಕ್ಷೇತ್ರ ಸಮನ್ವಯಾ ಧಿಕಾರಿ ಐ.ಎಸ್‌. ಟಕ್ಕೆ ಮಾತನಾಡಿ, ಸೇವಾದಳದ ಚಟುವಟಿಕೆಗಳಿಂದ ಪ್ರತಿಯೊಬ್ಬರೂ ನಿತ್ಯ ಜೀವನದಲ್ಲಿ ಶಿಸ್ತು, ಸಂಯಮ, ದೇಶಭಕ್ತಿ ಬೆಳೆಸಿಕೊಳ್ಳಲು ಸಾಧ್ಯ. ಶಾಲಾ ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ರಾಷ್ಟ್ರೀಯ ಭಾವೈಕ್ಯ ನಿಸ್ವಾರ್ಥ ಸೇವೆಯಂತಹ ಉದಾತ್ತ ಗುಣಗಳನ್ನು ಮೂಡಿಸುತ್ತಿರುವ ಭಾರತ ಸೇವಾದಳ ಕಾರ್ಯ ಶ್ಲಾಘನೀಯ ಎಂದರು. ತಾಲೂಕು ಕೋಶಾಧ್ಯಕ್ಷ ಎಸ್‌.ಎಸ್‌. ಪಾಟೀಲ ಮಾತನಾಡಿ, ಪ್ರತಿ ಶಾಲೆಗಳಲ್ಲಿ ಮಕ್ಕಳಿಗೆ ರಾಷ್ಟ್ರಗೀತೆ ನಾಡಗೀತೆ ಸುಶ್ರಾವ್ಯವಾಗಿ ಹಾಡುವುದನ್ನು ಎಲ್ಲ ಶಿಕ್ಷಕರು ಕಲಿಸಬೇಕಾಗಿದೆ ಎಂದರು.

ಬಸವದಳದ ಅಧ್ಯಕ್ಷ ಶಿವಾನಂದ ಕಲಬುರಗಿ, ಮುಖ್ಯಗುರು ಶರಣಬಸಪ್ಪ ಲಂಗೋಟಿ ಮಾತನಾಡಿದರು. ಭಾರತ ಸೇವಾದಳ ತಾಲೂಕು ಉಪಾಧ್ಯಕ್ಷ ಗುರಣ್ಣ ಬಸರಕೋಡ, ಸದಸ್ಯರುಗಳಾದ ಎಸ್‌ .ಬಿ. ಚಾಗಶೆಟ್ಟಿ, ಶ್ಯಾಮಲಾ ಮಂದೇವಾಲ, ಎಸ್‌.ಎಸ್‌. ಕುಂಬಾರ, ಡಿ.ಸಿ. ಜಾದವ, ಜಿಲ್ಲಾ ಸಮಿತಿ ಸದಸ್ಯ ಶ್ರೀಶಾಂತ ಕುಂಬಾರ, ಬಿಆರ್‌ಪಿ ಬಿರಾದಾರ, ಪ್ರೌಢಶಾಲೆ ಮುಖ್ಯೋಪಾಧ್ಯಾಯ ಶಿವಾನಂದ ಶಹಾಪುರ ವೇದಿಕೆಯಲ್ಲಿದ್ದರು. ವಲಯ ಸಂಘಟಕ ನಾಗೇಶ ಡೋಣೂರ ಪ್ರಾಸ್ತಾವಿಕ ಮಾತನಾಡಿದರು. ಎಸ್‌.ಡಿ. ಕುಂಬಾರ ಸ್ವಾಗತಿಸಿದರು. ಆರ್‌.ಆರ್‌. ನಿಂಬಾಳಕರ ನಿರೂಪಿಸಿದರು. ಡಿ.ಸಿ. ಜಾಧವ ವಂದಿಸಿದರು. ಎಂ.ಜಿ. ಸಿಂಗೆ ಗೌರವ ರಕ್ಷೆ ನೀಡಿದರು.

ಟಾಪ್ ನ್ಯೂಸ್

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

Aravinda Limbavali reacts to Prajwal Case

Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

1-RV

Rohit Vemula ದಲಿತ ಅಲ್ಲ; ಪೊಲೀಸ್‌ ವರದಿಯಲ್ಲಿ ಉಲ್ಲೇಖ: ಏನಿದು ಪ್ರಕರಣ?

1-eqqwewqeqweqwe

Huge Controversy!: ಮಹಾತ್ಮಾ ಗಾಂಧಿ ಕಪಟಿ; ರಾಹುಲ್‌ ಗಾಂಧಿ ಬೆಸ್ಟ್‌

Amit Shah

Amit Shah ನಕಲಿ ವೀಡಿಯೋ ಕೇಸ್‌: ಕಾಂಗ್ರೆಸ್‌ ಮುಖಂಡನ ಸೆರೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.