ಪಾರ್ಥ ಚಟರ್ಜಿ ಪ್ರಕರಣದಲ್ಲಿ ಹಸ್ತಕ್ಷೇಪ ಇಲ್ಲ: ಟಿಎಂಸಿ ಸ್ಪಷ್ಟನೆ
Team Udayavani, Jul 24, 2022, 10:10 PM IST
ಕೋಲ್ಕತಾ: ಶಿಕ್ಷಕರ ನೇಮಕದಲ್ಲಿ ಅಕ್ರಮ ಎಸಗಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ಸಚಿವ ಪಾರ್ಥ ಚಟರ್ಜಿ ತನಿಖೆ ವಿಚಾರದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಆದರೆ, ಕಾಲಮಿತಿಯಲ್ಲಿ ತನಿಖೆಯನ್ನು ಪೂರ್ತಿಗೊಳಿಸಬೇಕು ಎಂದು ತೃಣಮೂಲ ಕಾಂಗ್ರೆಸ್ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ.
ಸದ್ಯದ ಬೆಳವಣಿಗೆಯಿಂದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರಕ್ಕೆ ಭಾರೀ ಮುಜುಗರ ಉಂಟಾಗಿದೆ. ಸಚಿವರ ಜತೆಗೆ ಇದ್ದ ಮಹಿಳೆಗೂ ಪಕ್ಷಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ ಎಂದು ಅವರು ಹೇಳಿ ಕೊಂಡಿದ್ದಾರೆ. ಕಾನೂನು ತನ್ನದೇ ಆಗಿ ರುವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತದೆಯಾದರೂ, ಸದರಿ ಪ್ರಕರಣದಲ್ಲಿ ನಿಗದಿತ ಕಾಲಮಿತಿಯಲ್ಲಿ ತನಿಖೆ ಮುಕ್ತಾಯ ಗೊಳಿಸಬೇಕು ಎಂದು ಒತ್ತಾಯಿಸಿದರು.
ಡಾನ್ ರೀತಿ ವರ್ತನೆ: ಬಂಧಿತ ಸಚಿವ ಪಾರ್ಥ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾ ಸಣೆ ವೇಳೆ ಡಾನ್ನಂತೆ ವರ್ತಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಕೋಲ್ಕತಾ ಹೈಕೋರ್ಟ್ನಲ್ಲಿ ಆರೋಪಿ ಸಿದೆ. ತನಿಖೆಯನ್ನು ತಪ್ಪಿಸುವ ನಿಟ್ಟಿನಲ್ಲಿ ಸಚಿವರು ಅನಾರೋಗ್ಯ ಇರುವ ಬಗ್ಗೆ ನಟಿಸುತ್ತಿದ್ದಾರೆ ಎಂದು ದೂರಿದೆ.
ಒಂದು ದಿನ ವಶಕ್ಕೆ: ಸಚಿವ ಪಾರ್ಥ ಚಟರ್ಜಿ ನಿಕಟವರ್ತಿ ಮಹಿಳೆ ಅರ್ಪಿತಾ ಮುಖರ್ಜಿ ಎಂಬಾಕೆಯನ್ನು ಕೋಲ್ಕತಾದ ಕೋರ್ಟ್ ಒಂದು ದಿನದ ಮಟ್ಟಿಗೆ ವಿಚಾ ರಣೆಗಾಗಿ ಇ.ಡಿ. ವಶಕ್ಕೆ ಒಪ್ಪಿಸಿ ಆದೇಶಿ ಸಿದೆ. ಆಕೆಯನ್ನು ಸೋಮವಾರ ಮತ್ತೆ ಕೋರ್ಟ್ಗೆ ಹಾಜರುಪಡಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rajkot: ಗೇಮಿಂಗ್ ಜೋನ್ ಬೆಂಕಿ ಅವಘಡದಲ್ಲಿ ಬೆಂದು ಹೋಯಿತು ನವ ದಂಪತಿಯ ಜೀವ
Arvind Kejriwal: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂ ಗೆ ಕೇಜ್ರಿವಾಲ್ ಅರ್ಜಿ
Hit & Run: ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿ; ಗಾಳಿಯಲ್ಲಿ ಹಾರಿದ ವೃದ್ಧ
IT Raid: ನಾಸಿಕ್ನ ಸುರಾನಾ ಜ್ಯುವೆಲ್ಲರ್ಸ್ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ
Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ
MUST WATCH
ಹೊಸ ಸೇರ್ಪಡೆ
Misbehavior: ಡ್ರಗ್ಸ್ ಅಮಲಲ್ಲಿ ಅಪ್ರಾಪ್ತೆ ಜತೆ ಅನುಚಿತ ವರ್ತನೆ: ಯುವಕ ಪೊಲೀಸರ ವಶ
Rave party: ಸಿಸಿಬಿ ಪೊಲೀಸರಿಗೆ ಆಂಧ್ರ ರಾಜಕಾರಣಿಗಳಿಂದ ಒತ್ತಡ
IPL 2024: ಯಾರಿಗೆ ಸಿಕ್ತು ಯಾವ ಅವಾರ್ಡ್?; ಕ್ಯಾಚ್ ಆಫ್ ದಿ ಸೀಸನ್ ವಿಡಿಯೋ ನೋಡಿ
Arrested: ಬೀದಿಬದಿ ಮಲಗಿದ್ದವರ ಹತ್ಯೆ: ಸರಣಿ ಹಂತಕನ ಸೆರೆ
Porsche Accident Case: ಬಾಲಕನ ರಕ್ತದ ಮಾದರಿಯನ್ನು ಕಸದ ಬುಟ್ಟಿಗೆ ಎಸೆದಿದ್ದ ವೈದ್ಯರ ಬಂಧನ