ಲಘು ವಾಹನಗಳಿಗೆ ಅವಕಾಶ: ಸಚಿವ ನಾಗೇಶ್‌ 


Team Udayavani, Jul 24, 2022, 11:02 PM IST

ಲಘು ವಾಹನಗಳಿಗೆ ಅವಕಾಶ: ಸಚಿವ ನಾಗೇಶ್‌ 

ಮಡಿಕೇರಿ: ಜಿಲ್ಲಾಡಳಿತ ಭವನ ಬಳಿ ಮಡಿಕೇರಿ-ಮಂಗಳೂರು ರಸ್ತೆಯ ತಡೆಗೋಡೆಯ ಸ್ಲ್ಯಾಬ್‌ಗಳು ಹೊರಚಾಚಿದ್ದ ಹಿನ್ನೆಲೆ, ತಾತ್ಕಾಲಿಕವಾಗಿ ಸಾರಿಗೆ ಸಂಚಾರ ಬಂದ್‌ ಮಾಡಲಾಗಿದೆ. ಸದ್ಯ ಮರಳು ಮೂಟೆ ಅಳವಡಿಸಿದ ಅನಂತರ ಲಘು ವಾಹನ (ದ್ವಿಚಕ್ರ, ಆಟೋ) ಸಂಚಾರಕ್ಕೆ ಅವಕಾಶ ಮಾಡಲಾಗುವುದು. ಆ ನಿಟ್ಟಿನಲ್ಲಿ ಶಾಸಕರು ಮತ್ತು ಜಿಲ್ಲಾಧಿಕಾರಿ ಜತೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನ ಬಳಿಯ ಮಂಗಳೂರು ರಸ್ತೆ ತಡೆಗೋಡೆ ವೀಕ್ಷಿಸಿದ ಬಳಿಕ, ಮದೆನಾಡು ಸಮೀಪದ ಸೀಮೆಹುಲ್ಲು ಕಜೆ ಗುಡ್ಡದ ಬದಿಯೊಂದು ಕುಸಿದಿರುವ ಪ್ರದೇಶಕ್ಕೆ ರವಿವಾರ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದ ಅನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಪ್ರತಿಕ್ರಿಯಿಸಿದರು.

ತಡೆಗೋಡೆ ಪರಿಶೀಲನೆ ಸಂದರ್ಭ ಸ್ಥಳೀಯರು, ರಸ್ತೆ ಮುಚ್ಚಿರುವುದರಿಂದ ಇಲ್ಲಿನ ಜನರು 11 ಕಿ.ಮೀ. ಬಳಸಿಕೊಂಡು ಬರಬೇಕಿದೆ. ಕೂಡಲೇ ಸಾರ್ವಜನಿಕರ ಓಡಾಟಕ್ಕೆ ಅವಕಾಶ ಮಾಡಬೇಕು ಎಂದು ಸಚಿವರಲ್ಲಿ ಮನವಿ ಮಾಡಿದರು.

ತಡೆಗೋಡೆಯನ್ನು ಅವೈಜ್ಞಾನಿಕ ‌ ವಾಗಿ ನಿರ್ಮಿಸಲಾಗಿದೆ. ಜತೆಗೆ ಜಿಲ್ಲಾಧಿಕಾರಿ ಅವರ ಕಚೇರಿಗೆ ತೆರಳಲು ರಸ್ತೆ ಮಾಡಿದ ಪರಿಣಾಮವಾಗಿ ಇಂತಹ ದುಃಸ್ಥಿತಿ ಎದುರಿಸುವಂತಾಗಿದೆ ಎಂದು ಸ್ಥಳೀಯರೊಬ್ಬರು ಜಿಲ್ಲಾ ಸಚಿವರ ಗಮನಕ್ಕೆ ತಂದರು.

ಲೋಕೋಪಯೋಗಿ ಇಲಾಖೆಯ ಇಇ ನಾಗರಾಜು ಅವರು ತಡೆಗೋಡೆ ಕಾಮಗಾರಿ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಕೆ.ಜಿ. ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್‌, ಜಿಲ್ಲಾಧಿಕಾರಿ ಡಾ| ಬಿ.ಸಿ. ಸತೀಶ, ಜಿ.ಪಂ. ಸಿಇಒ ಭಂವರ್‌ ಸಿಂಗ್‌ ಮೀನಾ, ಉಪ ವಿಭಾಗಾಧಿಕಾರಿ ಯತೀಶ್‌ ಉಳ್ಳಾಲ್‌, ಡಿವೈಎಸ್‌ಪಿ ಗಜೇಂದ್ರ ಪ್ರಸಾದ್‌, ತಹಶೀಲ್ದಾರ್‌ ಮಹೇಶ್‌ ಉಪಸ್ಥಿತರಿದ್ದರು.

ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಮನವಿ:

ಮದೆನಾಡು ಸಮೀಪದ ಸೀಮೆಹುಲ್ಲು ಕಜೆ ಗುಡ್ಡದ ಬದಿಯೊಂದು ಕುಸಿದಿರುವ ಪ್ರದೇಶಕ್ಕೆ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ. ನಾಗೇಶ್‌ ಅವರು ರವಿವಾರ ಭೇಟಿ ನೀಡಿ ಸ್ಥಳೀಯರಿಂದ ಮಾಹಿತಿ ಪಡೆದರು. ಈ ಪ್ರದೇಶದಲ್ಲಿ 3 ಕುಟುಂಬಗಳು ವಾಸವಾಗಿವೆ. ಮಳೆಗಾಲ ಮುಗಿಯುವ ವರೆಗೆ ಸಂಬಂಧಿಕರ ಮನೆಗೆ ತೆರಳುವಂತೆ ಅವರಲ್ಲಿ ಸಚಿವರು ಮನವಿ ಮಾಡಿದರು.

ಸಂತ್ರಸ್ತರಿಗೆ ಸರಕಾರದಿಂದ ಎಲ್ಲ ರೀತಿಯ ನೆರವು ನೀಡಲಾಗುವುದು.  ಜಾನು ವಾರು ಗಳಿಗೂ ಮೇವು ಒದಗಿಸಲಾಗುವುದು. ಜನತೆ ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು. ಮಳೆಗಾಲ  ದಲ್ಲಿ ಇಲ್ಲಿ ಪದೇ ಪದೆ ಭೂಕುಸಿತವಾಗುತ್ತಿರುವ ಕಾರಣ ಮತ್ತೂಂದು ಬಾರಿ ತಜ್ಞರಿಂದ ಅಧ್ಯಯನ ವರದಿ ಪಡೆಯ ಲಾಗುವುದು ಎಂದು ನಾಗೇಶ್‌ ತಿಳಿಸಿದರು.

ಶಾಸಕರ ಭೇಟಿ:

ಮಳೆಯಿಂದ ಹಾನಿಗೀಡಾಗಿರುವ ಹಚ್ಚಿನಾಡು ಹಮ್ಮಿಯಾಲ, ಮುಟ್ಲು, ಸೂರ್ಲಬ್ಬಿ ಶಿರಂಗಳ್ಳಿ ಮೂವತ್ತೂಕ್ಲು ಗ್ರಾಮಗಳಿಗೆ ಶಾಸಕರಾದ ಎಂ.ಪಿ. ಅಪ್ಪಚ್ಚು ರಂಜನ್‌ ಭೇಟಿ ನೀಡಿ ಪರಿಶೀಲಿಸಿದರು.

ಟಾಪ್ ನ್ಯೂಸ್

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

8

Marathi TV actor: ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಹಿರಿಯ ನಟ

BOULT BassBox X120

Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ

7

Bigg Boss OTT 3: ಈ ಬಾರಿ ಸಲ್ಮಾನ್‌ ಖಾನ್ ಅನುಮಾನ; ಬೇರೆ ನಿರೂಪಕರತ್ತ ಆಯೋಜಕರ ಚಿತ್ತ

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

Old Is Gold; ರೀ ರಿಲೀಸ್‌ನತ್ತ ಸ್ಟಾರ್‌ ಸಿನಿಮಾಗಳು

ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ

Shimoga ಜಮೀನು ಗಲಾಟೆ; ಕುಡಗೋಲಿನಿಂದ ಹಲ್ಲೆ ಮಾಡಿ ಹಾಡಹಗಲೇ ಸಂಬಂಧಿಯ ಕೊಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Kasaragod ಆ್ಯಸಿಡ್‌ ಬಾಲ್‌ ಎಸೆತ: ಆರೋಪಿ ಬಂಧನ

Madikeri ವಿದ್ಯಾರ್ಥಿನಿ ಹಂತಕ ಸೆರೆ; ಮರದಲ್ಲಿ ಮೀನಾಳ ರುಂಡ ಪತ್ತೆ

Madikeri ವಿದ್ಯಾರ್ಥಿನಿ ಹಂತಕ ಸೆರೆ; ಮರದಲ್ಲಿ ಮೀನಾಳ ರುಂಡ ಪತ್ತೆ

6-madikeri

Madikeri: ವಿದ್ಯುತ್ ತಂತಿ ತಗುಲಿ ವ್ಯಕ್ತಿ ದುರ್ಮರಣ

3-madikeri

Crime Followup: ಸೂರ್ಲಬ್ಬಿ ವಿದ್ಯಾರ್ಥಿನಿ ಕೊಲೆ ಪ್ರಕರಣದ ಆರೋಪಿ ಪೊಲೀಸ್ ವಶ

Surlabbi ವಿದ್ಯಾರ್ಥಿನಿ ಕೊಲೆ ಪ್ರಕರಣ; ವಿದ್ಯಾರ್ಥಿನಿಯ ಹತ್ಯೆಗೈದ ಯುವಕ ಆತ್ಮಹತ್ಯೆ?

Surlabbi ವಿದ್ಯಾರ್ಥಿನಿ ಕೊಲೆ ಪ್ರಕರಣ; ವಿದ್ಯಾರ್ಥಿನಿಯ ಹತ್ಯೆಗೈದ ಯುವಕ ಆತ್ಮಹತ್ಯೆ?

MUST WATCH

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

ಹೊಸ ಸೇರ್ಪಡೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Bomb threat: ನಗರದ ಪ್ರತಿಷ್ಠಿತ 6 ಆಸ್ಪತ್ರೆಗಳಿಗೆ ಇ-ಮೇಲ್‌ ಬಾಂಬ್‌ ಬೆದರಿಕೆ

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

Harassment: ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ಆರೋಪ; ಕೇಸ್‌

9

ನೂರಾರು ರೋಗಿಗಳ ಹಸಿವು ನೀಗಿಸುವ ಸೈಯ್ಯದ್‌

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

CM ಹುದ್ದೆಯಿಂದ ಕೇಜ್ರಿವಾಲ್‌ ವಜಾಗೊಳಿಸಿ: ಪಿಐಎಲ್‌ ವಜಾಗೊಳಿಸಿದ ಸುಪ್ರೀಂಕೋರ್ಟ್

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.