ಶಿವಮೊಗ್ಗ ಕಾಲೇಜು ಮುಂದೆಯೇ ವಿದ್ಯಾರ್ಥಿಗಳ ತೂರಾಟ: ವೈರಲ್ ಆಯ್ತು ವಿಡಿಯೋ


Team Udayavani, Jul 25, 2022, 11:48 AM IST

ಶಿವಮೊಗ್ಗ ಕಾಲೇಜು ಮುಂದೆಯೇ ವಿದ್ಯಾರ್ಥಿಗಳ ತೂರಾಟ: ವೈರಲ್ ಆಯ್ತು ವಿಡಿಯೋ

ಶಿವಮೊಗ್ಗ: ಇಲ್ಲಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತ ರಸ್ತೆ ಮೇಲೆ ಬಿದ್ದು ಹೊರಳಾಡುವ ವಿಡಿಯೋ ವೈರಲ್ ಆಗಿದೆ. ಕಾಲೇಜು ಗೇಟ್ ಮುಂದೆಯೇ ಘಟನೆ ಸಂಭವಿಸಿದ್ದು, ವಿದ್ಯಾರ್ಥಿಗಳ ಮೊಬೈಲ್ ನಲ್ಲೇ ವಿಡಿಯೋ ರೆಕಾರ್ಡ್ ಆಗಿದೆ ಎಂದು ತಿಳಿದು ಬಂದಿದೆ.

ನಗರದ ಪ್ರತಿಷ್ಠಿತ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತ ಕಾಲೇಜು ಮುಂಭಾಗದ ಫುಟ್ ಪಾತ್ ಮೇಲೆ ಬಿದ್ದು ಹೊರಳಾಡಿದ್ದಾರೆ.

ವಿಡಿಯೋದಲ್ಲಿ ಏನಿದೆ?: ಅಮಲಿನಲ್ಲಿರುವ ಇಬ್ಬರು ವಿದ್ಯಾರ್ಥಿಗಳನ್ನು ವಿಡಿಯೋದಲ್ಲಿ ಸೆರೆ ಹಿಡಿಯಲಾಗಿದೆ. 57 ಸೆಕೆಂಡ್ ನ ವಿಡಿಯೋವನ್ನು ಬಸ್ ಒಂದರಲ್ಲಿ ಕುಳಿತವರು ಚಿತ್ರೀಕರಣ ಮಾಡಿದ್ದಾರೆ. ವಿದ್ಯಾರ್ಥಿಯೊಬ್ಬ ಮುಖ ಕೆಳಗೆ ಮಾಡಿ ಫುಟ್ ಪಾತ್ ಮೇಲೆ ಬಿದ್ದಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ತಲೆ ಬಗ್ಗಿಸಿ ಕುಳಿತಿರುತ್ತಾನೆ. ಅವರ ಸ್ನೇಹಿತರು ಇಬ್ಬರನ್ನು ಸಂತೈಸುತ್ತಾರೆ. ಈ ವೇಳೆ ತಲೆ ಕೆಳಗೆ ಹಾಕಿಕೊಂಡು ಕುಳಿತಿದ್ದ ವಿದ್ಯಾರ್ಥಿ ದಿಢೀರ್ ಎದ್ದು ಮುಂದಕ್ಕೆ ನಡೆಯುತ್ತಾನೆ. ಕೆಲವು ಹೆಜ್ಜೆ ಹಾಕುವಷ್ಟರಲ್ಲಿ ತೂರಾಡಿ ಕೆಳಗೆ ಬೀಳುತ್ತಾನೆ.

ಇದನ್ನೂ ಓದಿ:ಉ.ಕನ್ನಡ ಜಿಲ್ಲೆಯಲ್ಲಿ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆ ಬಗ್ಗೆ ಶೀಘ್ರ ನಿರ್ಧಾರ: ಕೆ.ಸುಧಾಕರ್

ಇದೆ ವೇಳೆ ಅಲ್ಲಿಗೆ ಬಂದ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳನ್ನು ತಡೆದು ನಿಲ್ಲಿಸಲು ಯತ್ನಿಸುತ್ತಾರೆ. ಅದರೆ ಅವರ ಮಾತು ಕೇಳದೆ ತೂರಾಡುತ್ತಲೆ ವಿದ್ಯಾರ್ಥಿ ಓಡಲು ಯತ್ನಿಸುತ್ತಾನೆ.

ವೈರಲ್: ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಅಮಲಿನಲ್ಲಿ ತೂರಾಡುತ್ತಾ ಓಡಾಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಾಟ್ಸಪ್ ಗ್ರೂಪ್ ಗಳಲ್ಲಿಯು ವಿಡಿಯೋ ಶೇರ್ ಆಗುತ್ತಿದೆ.

ನೋಡುತ್ತ ನಿಂತ ಜನ: ಬ್ಯಾಗು, ಯುನಿಫಾರಂ ಧರಿಸಿಕೊಂಡು ಎಲ್ಲೆಂದರಲ್ಲಿ ಬೀಳುತ್ತಿದ್ದ ವಿದ್ಯಾರ್ಥಿಗಳನ್ನು ಜನರು ಗಾಬರಿಯಿಂದ ನೋಡುತ್ತಿದ್ದರು. ಕಾಲೇಜು ಸಮೀಪ ನಿಂತಿದ್ದ ಸಾರ್ವಜನಿಕರು ವಿದ್ಯಾರ್ಥಿಗಳು ಅಮಲಿನಲ್ಲಿ ತೇಲಾಡುತ್ತಿರುವುದನ್ನು ಗಮನಿಸಿ ಚಕಿತಗೊಂಡಿದ್ದರು.

ಮಾದಕ ವಸ್ತು?: ವಿಡಿಯೋ ಚಿತ್ರೀಕರಣಗೊಂಡ ದಿನ ಮತ್ತು ಸಮಯದ ಕುರಿತು ಸ್ಪಷ್ಟತೆ ಇಲ್ಲ. ಆದರೆ ವಿದ್ಯಾರ್ಥಿಗಳು ಆಗಷ್ಟೆ ಕಾಲೇಜಿನಿಂದ ಹೊರ ಬಂದಂತೆ ತೋರುತ್ತದೆ. ಈ ವಿದ್ಯಾರ್ಥಿಗಳು ಅಮಲಿಗೆ ಮದ್ಯ ಕಾರಣವೊ ಅಥವಾ ಮಾದಕ ವಸ್ತುಗಳು ಕಾರಣವೊ ಎಂಬುದು ತಿಳಿದು ಬಂದಿಲ್ಲ.

ಕಾಲೇಜು ಕ್ಯಾಂಪಸ್ ಗಳಲ್ಲಿ ಗಾಂಜಾ, ಡ್ರಗ್ಸ್ ಪೂರೈಕೆಯಾಗುತ್ತಿರುವ ಕುರಿತು ಜಿಲ್ಲೆಯಲ್ಲಿ ಆತಂಕವಿತ್ತು. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಮತ್ತಷ್ಟು ಮಾದಕ ವಸ್ತುಗಳು ವಿದ್ಯಾರ್ಥಿಗಳ ಕೈ ಸೇರುತ್ತಿರುವ ಕುರಿತು ಗಂಭೀರ ಚರ್ಚೆ ಆರಂಭವಾಗಿದೆ. ಕಾಲೇಜು ಅಡಳಿತ ಮಂಡಳಿ ಮತ್ತು ಪೋಷಕರು ಜಾಗೃತಿ ಮೂಡಿಸುವತ್ತ ಹೆಜ್ಜೆ ಇರಿಸಬೇಕಿದೆ. ಪೊಲೀಸ್ ಇಲಾಖೆ ಮತ್ತಷ್ಟು ಬಿಗಿ ಕ್ರಮ ಕೈಗೊಳ್ಳುವ ಅಗತ್ಯವಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು, ಘಟನೆಯ ಬಗ್ಗೆ ಪ್ರಾಥಮಿಕ ತನಿಖೆ ನಡೆಸಿದ್ದು, ತನಿಖೆಯಲ್ಲಿ ವಿದ್ಯಾರ್ಥಿಗಳು ಸಾಗರ ರಸ್ತೆಯಲ್ಲಿರುವ ಬಾರ್ ಒಂದರಲ್ಲಿ ಮದ್ಯ ಸೇವನೆ ಮಾಡಿಕೊಂಡು ಬಸ್ ಹತ್ತಲು ಕಾಲೇಜಿನ ಹತ್ತಿರ ಬಂದಾಗ ಕಾಲೇಜಿನ ಗೇಟ್ ನಲ್ಲಿ ತಡೆಯಲಾಗಿತ್ತು. ಬಳಿಕ ಅವರ ಪೋಷಕರಿಗೆ ಈ  ವಿಚಾರವನ್ನು ತಿಳಿಸಿ, ಕಾಲೇಜು ಆಡಳಿತ ಮಂಡಳಿಯು ಪೋಷಕರೊಂದಿಗೆ ವಿದ್ಯಾರ್ಥಿಗಳಿಗೆ ಈ ವಿಷಯವಾಗಿ ಸಮಾಲೋಚನೆ ನಡೆಸಿದೆ ಎಂದಿದ್ದಾರೆ.

ಟಾಪ್ ನ್ಯೂಸ್

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

ಪದವೀಧರರ ಕ್ಷೇತ್ರದ ಮತದಾರರ ಧ್ವನಿಯಾಗಲು ಸ್ಪರ್ಧೆ : ರಘುಪತಿ ಭಟ್‌

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14-thirthahalli

Thirthahalli: ಸಾಲ ಬಾಧೆಯಿಂದ ರೈತ ಆತ್ಮಹತ್ಯೆ

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.