ಜಾನುವಾರುಗಳಿಗೆ ವಿಮೆ ಮಾಡಿಸಿ
Team Udayavani, Jul 25, 2022, 3:05 PM IST
ಕಾಳಗಿ: ರೈತರು ತಮ್ಮಲಿರುವ ಹಸು, ಎಮ್ಮೆಗಳಿಗೆ ವಿಮೆ ಮಾಡಿಸುವ ಮೂಲಕ ಸರ್ಕಾರದ ಯೋಜನೆಗಳ ಲಾಭ ಪಡೆದುಕೊಳ್ಳಬೇಕು ಎಂದು ತಾಲೂಕು ಪಶು ಆಸ್ಪತ್ರೆ ಹಿರಿಯ ಪಶುವೈದ್ಯಾಧಿಕಾರಿ ಡಾ| ಅಣ್ಣರಾವ್ ಪಾಟೀಲ ಹೇಳಿದರು.
ತಾಲೂಕಿನ ಗೋಟೂರ ತಾಂಡಾದಲ್ಲಿ ಹಸು ಮತ್ತು ಎಮ್ಮೆಗಳ ವಿಮೆ ಮಾಡಿಸುವಂತೆ ರೈತರಿಗೆ ಜಾಗೃತಿ ಮೂಡಿಸಿ ಮಾತನಾಡಿದ ಅವರು, ಪಶುಪಾಲನೆ ಇಲಾಖೆ ಎನ್.ಎಲ್. ಎಂ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಹಾಗೂ ಬಿಪಿಎಲ್ ರೈತರಿಗೆ ವಿಮೆ ಕಂತಿನ ಶೇ. 70 ಹಾಗೂ ಸಾಮಾನ್ಯ ರೈತರಿಗೆ ಶೇ.50ರಷ್ಟು ಮೊತ್ತವನ್ನು ಸರ್ಕಾರವೇ ಭರಿಸುತ್ತದೆ. ಆದ್ದರಿಂದ ರೈತರು ತಡ ಮಾಡದೇ ತಮ್ಮ ಹಸು ಹಾಗೂ ಎಮ್ಮೆಗಳ ವಿಮೆ ಮಾಡಿಸಿಕೊಳ್ಳಬೇಕು ಎಂದರು.
ವಿಮೆ ಅವಧಿಯು ಒಂದರಿಂದ ಮೂರು ವರ್ಷ ವರೆಗೆ ಇರುತ್ತದೆ. ಈಗಾಗಲೇ ಹಲವಾರು ಜಾನುವಾರುಗಳನ್ನು ವಿಮೆಗೆ ಒಳಪಡಿಸಿದ್ದು, ಹಂತ ಹಂತವಾಗಿ ಉಳಿದ ಜಾನುವಾರುಗಳಿಗೂ ವಿಮೆ ಮಾಡಲಾಗುವುದು ಎಂದು ಹೇಳಿದರು.
ತಾಲೂಕಿನ 14 ಪಶು ಆಸ್ಪತ್ರೆಯಲ್ಲಿ ಹಸು, ಎಮ್ಮೆಗಳ ವಿಮೆ ಮಾಡಲಾಗುತ್ತಿದ್ದು ಜುಲೈ 31ಕ್ಕೆ ಕೊನೆ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹತ್ತಿರದ ಪಶು ಆಸ್ಪತ್ರೆಗೆ ಸಂಪರ್ಕಿಸುವಂತೆ ಪಶುವೈದ್ಯ ಅಣ್ಣರಾವ್ ಪಾಟೀಲ ತಿಳಿಸಿದ್ದಾರೆ. ಈ ಸಮಯದಲ್ಲಿ ತಾಂಡಾದ ಅನಾರೋಗ್ಯ ಪೀಡಿತ ಜಾನುವಾರುಗಳಿಗೆ ಚಿಕಿತ್ಸೆ ನೀಡಿ, ಮಳೆಗಾಲದಲ್ಲಿ ಜಾನುವಾರು ಸಂರಕ್ಷಣೆ ಬಗ್ಗೆ ರೈತರಿಗೆ ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ