ಬಸವನಹುಳು ಹಾನಿಗೆ ಪರಿಹಾರಕ್ಕೆ ಒತ್ತಾಯ
Team Udayavani, Jul 25, 2022, 3:16 PM IST
ಕಲಬುರಗಿ: ಬಸವನಹುಳು ಹಾವಳಿಗೆ ಜಿಲ್ಲೆಯ ಆಳಂದ, ಅಫಜಲಪುರ, ಚಿಂಚೋಳಿ ಸೇರಿದಂತೆ ಹಲವು ತಾಲೂಕುಗಳ ರೈತರು ನಲುಗಿದ್ದು, ಬಿತ್ತನೆ ಮಾಡಿದ ಬೆಳೆ ಸಂಪೂರ್ಣ ಹಾನಿಯಾಗಿದ್ದರಿಂದ ಎಕರೆಗೆ 15ಸಾವಿರ ರೂ. ಸೂಕ್ತ ಪರಿಹಾರ ನೀಡುವಂತೆ ಪ್ರಗತಿ ಪರ ರೈತ, ಕಾಂಗ್ರೆಸ್ ಮುಖಂಡ ಹಣಮಂತರಾವ ಭೂಸನೂರ ಆಗ್ರಹಿಸಿದ್ದಾರೆ.
ಆಳಂದ ತಾಲೂಕಿನ ಧುತ್ತರಗಾಂವ್, ಕಡಗಂಚಿ, ಕಿಣ್ಣಿ ಸುಲ್ತಾನ್, ಕೊಡಲ ಹಂಗರಗಾ ಸೇರಿದಂತೆ ಬಸವನಹುಳು ಬಾಧೆಯಿಂದ ಪೀಡಿತವಾಗಿರುವ ಗ್ರಾಮಗಳ ರೈತರ ಹೊಲಗದ್ದೆಗಳಿಗೆ ಭೇಟಿ ನೀಡಿ, ಸೋಯಾಬೀನ್ ಸೇರಿದಂತೆ ಉದ್ದು, ಹೆಸರು ಪ್ರತಿ ಎಕರೆಗೆ ರೈತ ಕನಿಷ್ಟ 10 ರಿಂದ 12 ಸಾವಿರ ರೂ. ವೆಚ್ಚ ಮಾಡಿದ್ದಾನೆ. ಬಿತ್ತಿದ ಫಸಲು ಹೀಗೆ ಹಾಳಾದರೆ ರೈತರು ಸಾಲಸೋಲ ಮಾಡಿಕೊಂಡು ತೊಂದರೆಗೆ ಒಳಗಾಗೋದು ನಿಶ್ಚಿತ. ಹೀಗಾಗಿ ಈ ಹಂತದಲ್ಲಿ ಸರ್ಕಾರ ತಕ್ಷಣ ರೈತರಿಗೆ ನೆರವಿಗೆ ಬರಲಿ ಎಂದು ಒತ್ತಾಯಿಸಿದ್ದಾರೆ.
ಹಾನಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ತಕ್ಷಣ ಕೃಷಿ ಸಚಿವರು ಬಿ.ಸಿ. ಪಾಟೀಲ, ಜಿಲ್ಲಾ ಸಚಿವ ಮುರುಗೇಶ ನಿರಾಣಿ ಹುಳು ಪೀಡಿತ ಹೊಲಗಳಿಗೆ ಭೇಟಿ ನೀಡಲಿ. ಜಿಲ್ಲಾಡಳಿತ, ಕೃಷಿ ಇಲಾಖೆಯೂ ಭೇಟಿ ನೀಡಿ ಸಮೀಕ್ಷೆ ಮಾಡಲಿ. ಒಟ್ಟಾರೆ ರೈತರಿಗೆ ಹಾನಿಯಾದ ಫಸಲಿಗೆ ಪರಿಹಾರ ದೊರಕಬೇಕೆಂದರು. ಪರಿಸ್ಥಿತಿ ಗಂಭೀರವಾಗಿದ್ದು ಯಾರೊಬ್ಬರೂ ರೈತರ ನೋವಿಗೆ ಸ್ಪಂದಿಸುತ್ತಿಲ್ಲವೆಂದು ಭೂಸನೂರ್ ದೂರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Kalaburagi: ಮರ್ಮಾಂಗಕ್ಕೆ ಕರೆಂಟ್ ಶಾಕ್ ನೀಡಿದ ಪ್ರಕರಣ: ಶೀಘ್ರ ಇನ್ನುಳಿದ ಆರೋಪಿಗಳ ಬಂಧನ
ಎಂಎಲ್ಸಿ ಚುನಾವಣೆ: ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಮುಂದಾದ ಬಿಜೆಪಿ ನಾಯಕ…
Kalburgi: ಕರೆಂಟ್ ಶಾಕ್ ಪ್ರಕರಣ;ಖಂಡಿಸಿ ಹಿಂದೂ ಜಾಗೃತಿ ಸೇನೆಯಿಂದ ಸರಕಾರದ ಪ್ರತಿಕೃತಿ ದಹನ
Kalaburagi: ಹಣಕ್ಕಾಗಿ ಮೂವರ ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಶಾಕ್!: 7 ಮಂದಿ ಸೆರೆ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್