ಮಡಿಲಲ್ಲಿದ್ದ ಮಗುವಿಗೆ ಹಾಲುಣಿಸುತ್ತಿರುವಾಗಲೇ 25 ವರ್ಷದ ತಾಯಿ ಸಾವು
Team Udayavani, Jul 25, 2022, 3:38 PM IST
ನಾಗರಕರ್ನೂಲ್ : ಹೃದಯವಿದ್ರಾವಕ ಘಟನೆಯೊಂದರಲ್ಲಿ ಮಡಿಲಲ್ಲಿದ್ದ ಮಗುವಿಗೆ ಹಾಲುಣಿಸುತ್ತಿರುವಾಗಲೇ ತಾಯಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ನಾಗರಕರ್ನೂಲ್ ಜಿಲ್ಲೆಯ ತಿಮ್ಮಾಜಿಪೇಟ್ ಮಂಡಲದ ನೆರೆಲ್ಲಪಲ್ಲಿಯಲ್ಲಿ ನಡೆದಿದೆ.
ಕುಟುಂಬಸ್ಥರ ಪ್ರಕಾರ 25 ವರ್ಷದ ಜಯಶ್ರೀ ತನ್ನ ಮೊದಲ ಹೆರಿಗೆಗೆ ತನ್ನ ತಾಯಿಯ ಮನೆಗೆ ಬಂದಿದ್ದರು. 2 ತಿಂಗಳ ಕೆಳಗೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.
ಆಕೆಯ ಪತಿ ಪ್ರಶಾಂತ್ ಶನಿವಾರ ತಿರ್ಮಲಾಪುರದಿಂದ ಬಂದು ಆಕೆಯ ಮೈಬಣ್ಣ ಬದಲಾಗಿ ಕಪ್ಪಾಗಿದ್ದರಿಂದ ಮಹಬೂಬನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಆಕೆಯ ಹೃದಯ ಕವಾಟದಲ್ಲಿ ಸಣ್ಣಪುಟ್ಟ ಸಮಸ್ಯೆ ಇದ್ದು, ಔಷಧ ಬಳಸಿದರೆ ಗುಣವಾಗುತ್ತದೆ ಎಂದು ಹೇಳಿದ್ದಾರೆ. ಹೀಗಾಗಿ ವೈದ್ಯರು ಬರೆದುಕೊಟ್ಟ ಔಷಧಗಳನ್ನು ಸೇವಿಸಿ ಮತ್ತೆ ನೇರಳಪಲ್ಲಿಗೆ ಮರಳಿದ್ದರು.
ಭಾನುವಾರ ಬೆಳಗ್ಗೆ 5.30ಕ್ಕೆ ಮಗುವಿಗೆ ಹಾಲುಣಿಸುವ ವೇಳೆ ಜಯಶ್ರೀ ಕೊನೆಯುಸಿರೆಳೆದಿದ್ದಾರೆ. ಸ್ವಲ್ಪ ಸಮಯದ ನಂತರ ಅಜ್ಜ ಮತ್ತು ಅಜ್ಜಿ ಚಹಾಕ್ಕೆ ಕರೆದರು. ಆದರೆ ಅವರ ಕೋಣೆಯಿಂದ ಉತ್ತರ ಬರಲಿಲ್ಲ. ಅವರು ಏನಾಯಿತು ಎಂದು ನೋಡಲು ಹೋದಾಗ ಸಾವನ್ನಪ್ಪಿರುವುದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು
ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ
Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!
Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಸಾವು
IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್