ಶ್ವಾನಗಳಿಗೆ ಎ.ಸಿ. ಫ್ಲ್ಯಾಟ್ ನೀಡಿದ್ದ ಸಚಿವ ಪಾರ್ಥ ಚಟರ್ಜಿ
Team Udayavani, Jul 26, 2022, 7:20 AM IST
ಕೋಲ್ಕತಾ/ಭುವನೇಶ್ವರ: ಶ್ವಾನಗಳಿಗೂ ಹವಾನಿ ಯಂತ್ರಿತ ಫ್ಲ್ಯಾಟ್- ಇದು ಅಚ್ಚರಿಯಾದರೂ, ಹುಬ್ಬೇರಿಸುವ ಸಮಾಚಾರವಂತೂ ಹೌದು. ಶಿಕ್ಷಕರ ನೇಮಕ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಪಶ್ಚಿಮ ಬಂಗಾಲದ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶ ನಾಲಯ ತನಿಖೆಗೆ ಒಳಪಡಿಸಿದಾಗ ಬಹಿರಂಗ ಗೊಂಡಿರುವ ಸತ್ಯವಿದು.
ಕೋಲ್ಕತಾದ ಹಲವು ಪ್ರದೇಶಗಳಲ್ಲಿ ಅವರು ಫ್ಲ್ಯಾಟ್ಗಳನ್ನು ಹೊಂದಿದ್ದಾರೆ. ಈ ಪೈಕಿ ಡೈಮಂಡ್ ಡಿಸ್ಟ್ರಿಕ್ಟ್ ಎಂಬಲ್ಲಿ ಹೊಂದಿರುವ ಒಂದು ಫ್ಲ್ಯಾಟ್ನಲ್ಲಿ ಶ್ವಾನಗಳಿ ಗಾಗಿಯೇ ಸಂಪೂರ್ಣವಾಗಿ ಹವಾನಿಯಂತ್ರಣ ವ್ಯವಸ್ಥೆ ಇರುವ ಅದ್ದೂರಿ ವ್ಯವಸ್ಥೆ ಕಲ್ಪಿಸಿಕೊಡಲಾಗಿದೆ ಎಂಬ ಅಂಶ ತನಿಖೆಯಿಂದ ಗೊತ್ತಾಗಿದೆ. ಅವರು ಶ್ವಾನ ಪ್ರಿಯರಾಗಿ ಇರುವುದರಿಂದ ಇಂಥ ಹವ್ಯಾಸ ಹೊಂದಿದ್ದರು ಎಂದು ತನಿಖಾಧಿಕಾರಿಗಳು ಕಂಡು ಕೊಂಡಿದ್ದರು. ಇಷ್ಟು ಮಾತ್ರ ವಲ್ಲದೆ, ಮತ್ತೊಂದು ಅಪಾರ್ಟ್ಮೆಂಟ್ ನಟಿ ಅರ್ಪಿತಾ ಮುಖರ್ಜಿ ಮತ್ತು ಸಚಿವ ಪಾರ್ಥ ಅವರ ಜಂಟಿ ಮಾಲಕತ್ವದಲ್ಲಿ ಇದೆ ಎಂಬ ಅಂಶವೂ ಗೊತ್ತಾಗಿದೆ. ಈ ಅಂಶಗಳನ್ನು ಜಾರಿ ನಿರ್ದೇಶನಾಲಯ ಪರಿಶೀಲಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
4 ಬಾರಿ ಸಿಎಂಗೆ ಫೋನ್: ಬಂಧನವಾದ ಬಳಿಕ ಸಚಿವ ಪಾರ್ಥ ಚಟರ್ಜಿ ಅವರು ಸಿಎಂ ಬ್ಯಾನರ್ಜಿ ಅವರಿಗೆ ನಾಲ್ಕು ಬಾರಿ ಫೋನ್ ಮಾಡಿದ್ದಾರೆ. ಶನಿವಾರ ಬೆಳಗ್ಗೆ 2.32, 2.33, 3.37 ಮತ್ತು 9.35ಕ್ಕೆ ಫೋನ್ ಮಾಡಿ ದ್ದಾರೆ. ಆದರೆ, ಅವರು ಕರೆ ಸ್ವೀಕರಿಸಲಿಲ್ಲ ಎಂದು ಇ.ಡಿ.ಯ ಟಿಪ್ಪಣಿಯಲ್ಲಿ ಉಲ್ಲೇಖೀಸಲಾಗಿದೆ. ಈ ಅಂಶ ವನ್ನು ಪಾರ್ಥ ಚಟರ್ಜಿ ಕೂಡ ಖಚಿತಪಡಿಸಿದ್ದಾರೆ.
ಭ್ರಷ್ಟಾಚಾರಕ್ಕೆ ಬೆಂಬಲ ಇಲ್ಲ
“ನಾವು ಭ್ರಷ್ಟಾಚಾರಕ್ಕೆ ಬೆಂಬಲ ನೀಡುವುದಿಲ್ಲ. ಯಾರೇ ಆಗಲಿ ತಪ್ಪು ಎಸಗಿದ್ದು ಸಾಬೀತಾದರೆ, ಅವರಿಗೆ ಶಿಕ್ಷೆ ಆಗಲೇಬೇಕು’ ಎಂದು ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಶಿಕ್ಷಕರ ನೇಮಕ ಪ್ರಕರಣದಲ್ಲಿ ಕೈಗಾರಿಕ ಸಚಿವ ಪಾರ್ಥ ಚಟರ್ಜಿ ಬಂಧನವಾಗಿ 2 ದಿನಗಳ ಬಳಿಕ ಒಟ್ಟಾರೆ ಬೆಳವಣಿಗೆ ಬಗ್ಗೆ ಅವರು ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೇಂದ್ರ ತನಿಖಾ ಸಂಸ್ಥೆಗಳನ್ನು ಬಳಕೆ ಮಾಡಿ ತೃಣಮೂಲ ಕಾಂಗ್ರೆಸ್ ಅನ್ನು ಒಡೆಯಬಹುದು ಎಂದು ಬಿಜೆಪಿ ಯೋಚಿಸುತ್ತಿದ್ದರೆ ಅದು ಸಾಧ್ಯವಿಲ್ಲದ ಮಾತು. ನನ್ನ ವಿರುದ್ಧ ವಿನಾಕಾರಣ ಅಪಪ್ರಚಾರ ಮಾಡ ಲಾಗುತ್ತಿದೆ ಎಂದು ದೂರಿದ್ದಾರೆ.
ಪಾರ್ಥ ಚಟರ್ಜಿ ಅವರಿಗೆ ಅನಾರೋಗ್ಯ ಸಮಸ್ಯೆ ಇರುವುದು ನಿಜ. ಆದರೆ, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕಾದ ಅಗತ್ಯ ಇಲ್ಲ .
-ಅಶುತೋಷ್ ಬಿಸ್ವಾಸ್, ಭುವನೇಶ್ವರ ಏಮ್ಸ್ ಕಾರ್ಯನಿರ್ವಾಹಕ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi ಮಹಿಳಾ ಆಯೋಗದ 223 ಉದ್ಯೋಗಿಗಳ ವಜಾ: ಲೆ.ಗವರ್ನರ್ ಆದೇಶದಲ್ಲೇನಿದೆ?
Video: Gymನಲ್ಲಿ ವರ್ಕ್ ಔಟ್ ಮಾಡುತ್ತಿದ್ದ ವ್ಯಕ್ತಿ ಇದ್ದಕಿದ್ದಂತೆ ಕುಸಿದು ಬಿದ್ದು ಮೃತ್ಯು
LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್
LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ
ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ
MUST WATCH
ಹೊಸ ಸೇರ್ಪಡೆ
Davanagere; ದೇಶದ ಎಲ್ಲೆಡೆ ಮೋದಿ ಅಲೆ ಕಂಡು ಬರುತ್ತಿದೆ: ಶೋಭಾ ಕರಂದ್ಲಾಜೆ
Prajwal Case; ಪಕ್ಷಕ್ಕೆ ಮುಜುಗರ ಆಗಿರುವುದು ಸತ್ಯ: ಅರವಿಂದ ಲಿಂಬಾವಳಿ
Dakshina Kannada: ದ.ಕ. ಜಿಲ್ಲೆಗೆ ಮೂರೇ ತಿಂಗಳಲ್ಲಿ 1.23 ಕೋಟಿ ಪ್ರವಾಸಿಗರು !
UV Fusion: ವರ್ಚುವಲ್ ಪ್ರಪಂಚದಲ್ಲಿ ಅನಾಥರು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ