ಪ್ರೀತಿಸಿ ಮದುವೆಯಾದ ಮಗಳು ಮತ್ತು ಅಳಿಯನನ್ನು ಕೊಚ್ಚಿ ಕೊಂದ ತಂದೆ
Team Udayavani, Jul 26, 2022, 2:15 PM IST
ತಮಿಳುನಾಡು: ತನ್ನ ಒಪ್ಪಿಗೆ ಇಲ್ಲದೆ ಪ್ರೀತಿಸಿ ಮದುವೆಯಾದ ಮಗಳು ಮತ್ತು ಅಳಿಯನನ್ನು ತಂದೆಯೊಬ್ಬ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಮಿಳುನಾಡಿನ ತೂತುಕುಡಿ ಜಿಲ್ಲೆಯ ವೀರಪಟ್ಟಿಯ ಕೊವಿಲ್ಪಟ್ಟಿ ಎಂಬಲ್ಲಿ ನಡೆದಿದೆ.
ಮಗಳು ರೇಷ್ಮಾ (20) ಹಾಗೂ ಅಳಿಯ ಮನಿಕರಾಜ್(26) ಕೊಲೆಯಾದವರು. ತಂದೆ ಮುತ್ತುಕುಟ್ಟಿ ಕೊಲೆ ಮಾಡಿದ ವ್ಯಕ್ತಿ.
ಮಗಳು ರೇಷ್ಮಾ ಪ್ರೀತಿಯ ವಿಚಾರದಲ್ಲಿ ತಂದೆಯ ವಿರೋಧವಿತ್ತು. ತನ್ನ ತಂದೆ ಪ್ರೀತಿಗೆ ಒಪ್ಪದ ಕಾರಣ ರೇಷ್ಮಾ ಹಾಗೂ ಮನಿಕರಾಜ್ ಕೆಲ ದಿನಗಳ ಹಿಂದೆ ಮದುವೆಯಾಗಿ, ಕಳೆದ ಎರಡು ದಿನದ ಹಿಂದೆ ಊರಿಗೆ ಆಗಮಿಸಿದ್ದರು.
ಈ ಮದುವೆಗೆ ತಂದೆ ಮುತ್ತು ಕುಟ್ಟಿ ತೀವ್ರ ವಿರೋಧ ವ್ಯಕ್ಯಪಡಿಸಿದ್ದರು. ಬಳಿಕ ಪಂಚಾಯತ್ ನ ಮಾತುಕತೆ ಮೂಲಕ ದಂಪತಿಗೆ ಗ್ರಾಮದಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಯಿತು. ಆದರೂ ತಂದೆಗೆ ಮಗಳ ಬಗ್ಗೆ ಸಿಟ್ಟಿತ್ತು.
ಸೋಮವಾರ ಸಂಜೆ ಇದೇ ಸಿಟ್ಟಿನಲ್ಲಿ ಮನೆಯಲ್ಲಿ ಮಗಳು ಮತ್ತು ಅಳಿಯ ಇಬ್ಬರೇ ಇದ್ದ ಸಂದರ್ಭದಲ್ಲಿ ಮುತ್ತುಕಟ್ಟಿ ಇಬ್ಬರ ಮೇಲೆ ಹಲ್ಲೆ ಮಾಡಿ, ಬಳಿಕ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ ಪರಾರಿ ಆಗಿದ್ದಾನೆ.
ಘಟನೆ ತಿಳಿದ ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ