ಹಣಕಾಸು ದುರ್ಬಳಕೆ ಆರೋಪ: ಸಿಎಸ್ಐ ಚರ್ಚ್ ಬಿಷಪ್ ಮನೆ, ಕಚೇರಿ ಮೇಲೆ ಇ.ಡಿ. ದಾಳಿ
Team Udayavani, Jul 26, 2022, 8:16 PM IST
ತಿರುವನಂತಪುರ: ಕೇರಳದ ಸಿಎಸ್ಐ ಚರ್ಚ್ನ ನಿರ್ವಾಹಕ ಮತ್ತು ದಕ್ಷಿಣ ಕೇರಳ ಡಯೋಸಿಸ್ (ಎಸ್ಕೆಡಿ) ಬಿಷಪ್ ಎ.ಧರ್ಮರಾಜ್ ರಸಲಂ ಅವರ ಮನೆ ಮತ್ತು ಕಚೇರಿಗಳ ಮೇಲೆ ಕೊಚ್ಚಿಯ ಜಾರಿ ನಿರ್ದೇಶನಾಲಯ ಕಚೇರಿಯ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಡಯೋಸಿಸ್ನ ಅಡಿಯಲ್ಲಿ ಬರುವ ವೈದ್ಯಕೀಯ ಕಾಲೇಜಿಗೆ ಪ್ರವೇಶ ನೀಡಲು ಕ್ಯಾಪಿಟೇಶನ್ ಶುಲ್ಕವನ್ನು ಪಡೆದಿರುವ ಮತ್ತು ದತ್ತಿಗಾಗಿ ಸಂಗ್ರಹಿಸಲಾದ ಮೊತ್ತವನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಬಿಷಪ್ ಮನೆ, ಕಚೇರಿಗಳಲ್ಲಿ ಮ್ಯಾರಥಾನ್ ಶೋಧ ಕಾರ್ಯ ನಡೆಸಲಾಗಿದೆ.
ಒಟ್ಟು 13 ಗಂಟೆಗಳ ಕಾಲ ಈ ಕಾರ್ಯಾಚರಣೆ ನಡೆದಿದ್ದು, ಇವರ ಮನೆ, ಕಚೇರಿ ಮಾತ್ರವಲ್ಲದೇ, ಏಕಕಾಲಕ್ಕೆ ಸಿಎಸ್ಐ ಮೆಡಿಕಲ್ ಕಾಲೇಜು ನಿರ್ದೇಶಕ ಡಾ. ಬೆನ್ನೆಟ್ ಅಬ್ರಹಾಂ, ಡಯೋಸಿಸ್ ಆಡಳಿತಾತ್ಮಕ ಕಾರ್ಯದರ್ಶಿ ಟಿಟಿ ಪ್ರವೀಣ್ ಅವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಈ ವೇಳೆ ಬಿಷಪ್ ಪರ ಮತ್ತು ವಿರೋಧಿಗಳ ಗುಂಪು ಅವರ ಮನೆಯ ಮುಂಭಾಗದಲ್ಲಿ ಭಾರೀ ಸಂಖ್ಯೆಯಲ್ಲಿ ನೆರೆದು, ಪರಸ್ಪರ ಪರ-ವಿರೋಧ ಘೋಷಣೆಗಳನ್ನೂ ಕೂಗಿದ್ದಾರೆ.
ಆರ್ಚ್ಬಿಷಪ್ ರಾಜೀನಾಮೆ ಕೇಳಿದ ವ್ಯಾಟಿಕನ್
ಸಾಮೂಹಿಕ ಪ್ರಾರ್ಥನೆ(ಮಾಸ್) ವೇಳೆ ಸಮಾನ ವಿಧಾನವನ್ನು ಪಾಲಿಸುವಂತೆ ಸೂಚಿಸಿದ್ದರೂ ಅದನ್ನು ಜಾರಿ ಮಾಡಿಲ್ಲ ಎಂಬ ಕಾರಣಕ್ಕಾಗಿ ವ್ಯಾಟಿಕನ್ ಕೇರಳದ ಎರ್ನಾಕುಳಂ ಆರ್ಚ್ಬಿಷಪ್ ಆ್ಯಂಟನಿ ಕರಿಯಿಲ್ ಅವರ ರಾಜೀನಾಮೆ ಕೇಳಿದೆ. ವ್ಯಾಟಿಕನ್ನಡಿ ಬರುವ ಪ್ರಮುಖ ಚರ್ಚುಗಳಲ್ಲಿ ಒಂದಾದ ಕೇರಳ ಮೂಲದ ಸೈರೋ ಮಲಬಾರ್ ಚರ್ಚ್ ಕಳೆದ ವರ್ಷದ ನವೆಂಬರ್ನಿಂದಲೇ ಎಲ್ಲ ಡಯೋಸಿಸ್ನಲ್ಲೂ ಸಮಾನ ಮಾದರಿಯ ಮಾಸ್ ಅನ್ನು ಪರಿಚಯಿಸಿತ್ತು. ಆದರೆ, ಅದನ್ನು ಪಾಲಿಸದ ಕಾರಣ ಕರಿಯಿಲ್ರನ್ನು ತೆಗೆದುಹಾಕಲು ವ್ಯಾಟಿಕನ್ ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
MUST WATCH
ಹೊಸ ಸೇರ್ಪಡೆ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.ಪರಮೇಶ್ವರ್
ಸಲ್ಮಾನ್ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ
Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ