ಫೋನ್ ಕದ್ದಾಲಿಸಲಾಗುತ್ತಿದೆ ಎಂದ ಮಾರ್ಗರೇಟ್ ಆಳ್ವಾ
Team Udayavani, Jul 26, 2022, 8:55 PM IST
ನವದೆಹಲಿ: ತಮ್ಮ ಫೋನ್ ಅನ್ನು ಕದ್ದಾಲಿಕೆ ಮಾಡಲಾಗುತ್ತಿದೆ ಎಂದು ಉಪರಾಷ್ಟ್ರಪತಿ ಚುನಾವಣೆಯ ಪ್ರತಿಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವಾ ಆರೋಪ ಮಾಡಿದ್ದಾರೆ. ಆದರೆ, ಈ ಆರೋಪವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದೆ.
ಮಾರ್ಗರೇಟ್ ಆಳ್ವಾ ಮಂಗಳವಾರ ಮಾಡಿದ್ದ ಟ್ವೀಟ್ನಲ್ಲಿ ಭಾನುವಾರ ರಾತ್ರಿ ಬಿಜೆಪಿಯ ಕೆಲ ಸ್ನೇಹಿತರಿಗೆ ಕರೆ ಮಾಡಿದ ನಂತರ ಎಂಟಿಎನ್ಎಲ್ ಸಿಮ್ನಿಂದ ಕರೆ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಬರೆದುಕೊಂಡಿದ್ದರು.
ಜತೆಗೆ ಎಂಟಿಎನ್ಎಲ್ನಿಂದ ಬಂದದ್ದು ಎಂದು ಹೇಳಲಾಗಿರುವ ಕೈವೈಸಿ ಕೇಳಿದ ವಿವರದ ಪತ್ರವನ್ನೂ ಅಪ್ಲೋಡ್ ಮಾಡಿದ್ದಾರೆ.
“ನಿಮ್ಮ ಸಿಮ್ನ ಕೆವೈಸಿ ತೆಗೆದುಹಾಕಲಾಗಿದೆ. 24 ಗಂಟೆಗಳೊಳಗೆ ಸಿಮ್ ನಿಷ್ಕ್ರಿಯವಾಗಲಿದೆ’ ಎಂದು ಅದರಲ್ಲಿ ಮುದ್ರಿತವಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, “ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ.
ಹೀಗಾಗಿ, ಅವರ ಕರೆ ಕದ್ದಾಲಿಸುವ ಅವಶ್ಯಕತೆ ಇಲ್ಲ. ಅವರು ಯಾರಿಗೆ ಬೇಕಾದರೂ ಕರೆ ಮಾಡಬಹುದು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Birla; ಸಂಗೀತ ಕ್ಷೇತ್ರ ತೊರೆಯುವ ಕಠಿನ ನಿರ್ಧಾರ ತಳೆದ ಅನನ್ಯಶ್ರೀ ಬಿರ್ಲಾ
Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!
ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
MUST WATCH
ಹೊಸ ಸೇರ್ಪಡೆ
ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು
Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ
Charmadi Ghat; ಎರಡನೇ ತಿರುವಿನಲ್ಲಿ ಒಂಟಿ ಸಲಗ ಪ್ರತ್ಯಕ್ಷ
Politics: ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್
2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ