ಅಬಕಾರಿ ದಾಳಿ: ಸೇಂದಿ-ಸರಾಯಿ ವಶಕ್ಕೆ
Team Udayavani, Jul 27, 2022, 1:15 PM IST
ಶಹಾಬಾದ: ನಗರದ ವಿವಿಧೆಡೆ ಅಬಕಾರಿ ಪೊಲೀಸರು ದಾಳಿ ನಡೆಸಿ ಎಂಟು ಲೀಟರ್ ಕಳ್ಳಭಟ್ಟಿ ಸರಾಯಿ ಹಾಗೂ 40ಲೀಟರ್ ಬೆಲ್ಲದ ಕೊಳೆ, 30ಲೀಟರ್ ಕಲಬೆರಕೆ ಸೇಂದಿ ವಶಪಡಿಸಿಕೊಳ್ಳಲಾಗಿದೆ.
ಮಡ್ಡಿ ನಂ. 2ಏರಿಯಾದ ಶಹಾಬಾದದ ಮೂರು ಮನೆಗಳಲ್ಲಿ ಎಂಟು ಲೀಟರ್ ಕಳ್ಳಭಟ್ಟಿ ಸರಾಯಿ, 40 ಲೀಟರ್ ಬೆಲ್ಲದ ಕೊಳೆ ಹಾಗೂ ವಾಡಿ ಪಟ್ಟಣದ ವಿಜಯ ನಗರ ಏರಿಯಾದಲ್ಲಿ 30 ಲೀಟರ್ ಕಲಬೆರಕೆ ಸೇಂದಿಯನ್ನು ಮಾರಾಟಕ್ಕಾಗಿ ತಯಾರಿಸಿ ಸಂಗ್ರಹಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಅಬಕಾರಿ ಜಂಟಿ ಆಯುಕ್ತರ ಆದೇಶ ಹಾಗೂ ಅಬಕಾರಿ ಉಪ ಆಯುಕ್ತರ ನಿರ್ದೇಶನದ ಮೇರೆಗೆ ಹಾಗೂ ಅಬಕಾರಿ ಉಪ ಅಧೀಕ್ಷಕರು ಉಪ ವಿಭಾಗ ಚಿತ್ತಾಪುರ ನೇತೃತ್ವದಲ್ಲಿ ನಾಲ್ಕು ಕಡೆ ಸಾಮೂಹಿಕ ಅಬಕಾರಿ ದಾಳಿ ಮಾಡಿ ವಶಪಡಿಸಿಕೊಳ್ಳಲಾಗಿದೆ.
ಆರೋಪಿತಳಾದ ಮಡ್ಡಿ ನಂ. 2 ಏರಿಯಾದ ಸಕ್ಕುಬಾಯಿ ರಮೇಶ ಚವ್ಹಾಣ ದಿವಳ ಎನ್ನುವಳನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಚಿತ್ತಾಪುರ ವಲಯದ ಅಬಕಾರಿ ಉಪ ನಿರೀಕ್ಷಕಿ ವಿಜಯಲಕ್ಷ್ಮೀ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಡ್ಡಿ ನಂ. 2 ಏರಿಯಾದ ರೇಣುಕಾ ಅರ್ಜುನ ಚವ್ಹಾಣ ವಿರುದ್ಧ ಚಿತ್ತಾಪುರ ಅಬಕಾರಿ ನಿರೀಕ್ಷಕ ರಮೇಶ ಬಿರಾದಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುನೀತಾಬಾಯಿ ಚಂದ್ರಕಾಂತ ಚವ್ಹಾಣ, ವಾಡಿ ವಿಜಯನಗರದ ನಾಗಮ್ಮಾ ನಂದಕುಮಾರ ಬನಸುಡೆ ವಿರುದ್ಧ ಚಿತ್ತಾಪುರ ಉಪವಿಭಾಗದ ಅಬಕಾರಿ ನಿರೀಕ್ಷಕ ಶರಣಗೌಡ ಬಿರಾದಾರ ಪ್ರಕರಣ ದಾಖಲಿಕೊಂಡಿದ್ದಾರೆ. ದಾಳಿಯಲ್ಲಿ ಸಿಬ್ಬಂದಿಗಳಾದ ಶಿವಾನಂದ, ಶರಣಬಸಪ್ಪ, ನಾಗರಾಜ ಹಾಗೂ ವಾಹನ ಚಾಲಕ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ