ಬೇಡಿಕೆ ಈಡೇರಿಕೆಗೆ ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ
Team Udayavani, Jul 27, 2022, 5:31 PM IST
ಮುದ್ದೇಬಿಹಾಳ: ತಾಲೂಕಿನಲ್ಲಿ ಐದು ವರ್ಷಗಳಿಂದ ಅಂಗನವಾಡಿ ಬಾಡಿಗೆಯನ್ನು ಮಾಲೀಕರಿಗೆ ಕೊಡದೇ ಇರುವುದು, ಜು.2019ರ ಗೌರವಧನ ಕಾರ್ಯಕರ್ತೆಯರು, ಸಹಾಯಕಿಯರಿಗೆ ಮುಟ್ಟದೇ ಇರುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಮಂಗಳವಾರ ತಾಲೂಕಾಡಳಿತಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಸೇವಾ ಸಂಘದ ಅಧ್ಯಕ್ಷ ನೀಲಮ್ಮ ಬೋರಾವತ್ ಮಾತನಾಡಿ, ತಾಲೂಕಿನ ತಂಗಡಗಿ ಭಾಗದಲ್ಲಿ 2019ರಲ್ಲಿ ಏಳು ತಿಂಗಳ ಮೊಟ್ಟೆ ಬಿಲ್ ಬಾಕಿ ತೆಗೆಯಬೇಕು.ಅಲ್ಲದೇ ಸರ್ವಿಸ್ಸಾದ ಕಾರ್ಯಕರ್ತೆಯರನ್ನು ಮೇಲ್ವಿಚಾರಕಿ ಎಂದು ಬಡ್ತಿ ನೀಡಬೇಕು. ನಿವೃತ್ತರಾದ ಅಂಗನವಾಡಿ ನೌಕರರಿಗೆ ಎನ್ಪಿಎಸ್ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು.
ನಿಂಬೆಕ್ಕ ಕಾಳಾಪುರ, ಅಯ್ಯಮ್ಮ ವಣಕ್ಯಾಳ, ಶೋಭಾ ಕಾಖಂಡಕಿ, ಶಿವಮ್ಮ ಅಂಗಡಗೇರಿ, ಗೌರಮ್ಮ ಕರ್ಜಗಿ, ಈರಮ್ಮ ಹಿರೇಮಠ, ಯಮನಕ್ಕ ವಡ್ಡರ, ಸುರೇಖಾ ಕುಲಕರ್ಣಿ, ಅಂಬುಜಾ ಕುಲಕರ್ಣಿ, ಕಾಶೀಬಾಯಿ ತುಂಬಗಿ, ಗುರುಬಾಯಿ ಕಲಬುರ್ಗಿ, ಲೀಲಾವತಿ ಕುಂಟೋಜಿ, ವಿದ್ಯಾ ಪಾಟೀಲ ಸೇರಿದಂತೆ ತಾಲೂಕಿನ ವಿವಿಧೆಡೆಯಿಂದ ಆಗಮಿಸಿದ್ದ ನೂರಾರು ಕಾರ್ಯಕರ್ತೆಯರು, ಸಹಾಯಕಿಯರು ಇದ್ದರು.
ಇದೇ ವೇಳೆ ಬ.ಸಾಲವಾಡಗಿಯ ಅಂಗನವಾಡಿ ಸಹಾಯಕಿ ಶಾಂತಮ್ಮ ಮೇಟಿ ನಿಧನ ಹಿನ್ನೆಲೆಯ ಕಾರ್ಯಕರ್ತೆಯರು ಮನವಿ ಸಲ್ಲಿಕೆಗೂ ಮುನ್ನ ನಡೆಸಲು ಉದ್ದೇಶಿಸಿದ್ದ ಪ್ರತಿಭಟನಾ ರ್ಯಾಲಿ ಕೈ ಬಿಟ್ಟು ನೇರವಾಗಿ ತಹಶೀಲ್ದಾರ್ ಕಚೇರಿಗೆ ಆಗಮಿಸಿ ಶಿರಸ್ತೇದಾರ್ ತೊನಶ್ಯಾಳ ಅವರಿಗೆ ಮನವಿ ಸಲ್ಲಿಸಿದರು. ಇದಕ್ಕೂ ಮುನ್ನ ಅಂಗನವಾಡಿ ಸಹಾಯಕಿಯ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ
ಪಾಕಿಸ್ತಾನಕ್ಕೆ ನುಗ್ಗಿ ಹೊಡೆಯುತ್ತೇವೆ ಎಂದವರಿಗೆ ಪ್ರಜಲ್ ತರಲಾಗದೇ: ಸಚಿವ ಶಿವಾನಂದ
Vijayapura: ನಗರದಲ್ಲಿ ಮತಯಂತ್ರ ದೋಷ, ಆರಂಭವಾಗದ ಮತದಾನ
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
MUST WATCH
ಹೊಸ ಸೇರ್ಪಡೆ
Student Missing: ಅಮೆರಿಕದಲ್ಲಿ ಮತ್ತೋರ್ವ ವಿದ್ಯಾರ್ಥಿ ನಾಪತ್ತೆ… ಕಂಗಾಲಾದ ಕುಟುಂಬ
Pendrive case; ಪ್ರತ್ಯೇಕ ಸ್ಥಳದಲ್ಲಿ ನ್ಯಾಯಾಲಯ ವಿಚಾರಣೆ ನಡೆಸಲು ಪತ್ರ; ಎಚ್.ಕೆ.ಪಾಟೀಲ
ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ: ಉನ್ನತ ಮಟ್ಟದ ತನಿಖೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ
Ramanagara ಶಾಸಕ ಇಕ್ಬಾಲ್ ಹುಸೇನ್ ವಿಡಿಯೋ ವೈರಲ್ ಕೇಸ್: ಇಬ್ಬರ ಬಂಧನ
SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ